Arecanut Price:ಅಡಿಕೆ ದರದಲ್ಲಿ ಭಾರೀ ಕುಸಿತ ಬೆಳೆಗಾರನಿಗೆ ಶಾಕ್, ಹೆಚ್ಚಾಯ್ತು ವಿದೇಶಿ ಆಮದಿನ ತಲೆಬಿಸಿ
ಮಂಗಳೂರು, ಫೆಬ್ರವರಿ 20: ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಮತ್ತೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಭೀತಿ ಎದುರಾಗಿದೆ. ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಕರಾವಳಿ ಮಾರುಕಟ್ಟೆಗಳಿಗೆ ಆಗಮಿಸುತ್ತಿರುವುದು ಈ ಭೀತಿಗೆ ಕಾರಣವಾಗಿದೆ.
ಅತ್ಯಂತ ಹೆಚ್ಚು ಗುಣಮಟ್ಟದ ಅಡಿಕೆ ಬೆಳೆಯುವ ಪ್ರದೇಶವಾದ ಕರಾವಳಿ ಭಾಗದ ಅಡಿಕೆಗೆ ಉತ್ತರ ಭಾರತದ ಹಲವೆಡೆ ಭಾರೀ ಬೇಡಿಕೆಯಿದೆ. ಈ ಬೇಡಿಕೆಗಳಿಗೆ ಅನುಗುಣವಾಗಿ ಕರಾವಳಿ ಭಾಗದ ಕೃಷಿಕರು ಅಡಿಕೆ ಬೆಳೆಯನ್ನು ಬೆಳೆಯುತ್ತಿದ್ದು, ಕೊರೊನಾ ಲಾಕ್ ಡೌನ್ ಬಳಿಕ ಅಡಿಕೆಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಧಾರಣೆ ಲಭಿಸುತ್ತಿತ್ತು.

ಕಿಲೋವೊಂದಕ್ಕೆ 500 ರೂಪಾಯಿ ಗಡಿದಾಟಿದ್ದ ಅಡಿಕೆ ಬೆಲೆ ಇದೀಗ ನಿಧಾನವಾಗಿ ಕುಸಿಯಲಾರಂಭಿಸುತ್ತಿದೆ. ಹೊಸ ಅಡಿಕೆ ಬೆಲೆ ಇದೀಗ ಕಿಲೋವೊಂದಕ್ಕೆ 315ರಿಂದ 320ರ ಆಸುಪಾಸಿನಲ್ಲಿದ್ದು, ಹಳೆ ಅಡಿಕೆ ಬೆಲೆ 430-440 ರ ಆಸುಪಾಸಿನಲ್ಲಿದೆ. ಆದರೆ ಬರ್ಮಾ ಹಾಗೂ ಇತರ ಕಡೆಗಳಲ್ಲಿ ಇದೇ ರೀತಿಯ ಅಡಿಕೆಯನ್ನು ಬೆಳೆಯಲಾಗುತ್ತಿದ್ದು, ದೇಶೀ ಮಾರುಕಟ್ಟೆಗೆ ಹೋಲಿಸಿದರೆ, ಅದರ ಬೆಲೆ ತೀರ ಕಡಿಮೆಯಾಗಿದೆ.
ಈ ಅಡಿಕೆಯನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲು ಹಲವು ನಿಬಂಧನೆಗಳಿದ್ದರೂ, ಹೆಚ್ಚಿನ ಲಾಭಗಳಿಸುವ ಉದ್ಧೇಶದಿಂದ ಅಡಿಕೆ ಖರೀದಿದಾರರು ವಿದೇಶಿ ಅಡಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತಿದ್ದಾರೆ. ಹೀಗೆ ಆಮದಾಗುವ ಅಡಿಕೆಗಳಲ್ಲಿ ಕೆಲವು ಮಾತ್ರ ತೆರಿಗೆ ಕಟ್ಟಿ ದೇಶಿ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಅದಕ್ಕಿಂತ ದುಪ್ಪಟ್ಟು ಪ್ರಮಾಣದ ಅಡಿಕೆ ಅಕ್ರಮವಾಗಿ ಆಮದಾಗುತ್ತಿದೆ.
ಈ ಅಡಿಕೆಯನ್ನು ದಕ್ಷಿಣ ಕನ್ನಡ ಭಾಗದಲ್ಲಿ ಬೆಳೆಯುವ ಉತ್ತಮ ಗುಣಮಟ್ಟದ ಅಡಿಕೆಯೊಂದಿಗೆ ಬೆರೆಸಿ ಉತ್ತರ ಭಾರತಕ್ಕೆ ಮಾರಾಟ ಮಾಡಲಾಗುತ್ತಿದೆ. ಇದರಿಂದ ದಕ್ಷಿಣಕನ್ನಡ ಜಿಲ್ಲೆಯ ಅಡಿಕೆಯ ಗುಣಮಟ್ಟವೂ ಕುಸಿಯುವ ಜೊತೆಗೆ ಬೆಲೆಯೂ ಕುಸಿಯುವ ಆತಂಕವಿದೆ.
ದಕ್ಷಿಣ ಕನ್ನಡದ ಬಹುಪಾಲು ಕೃಷಿಕರು ಅಡಿಕೆಯನ್ನೇ ತನ್ನ ಜೀವನಾಧಾರವನ್ನಾಗಿ ಮಾಡಿಕೊಂಡಿದ್ದು, ಅಡಿಕೆ ಮಾರುಕಟ್ಟೆಯಲ್ಲಿ ಸಣ್ಣ ಬದಲಾವಣೆಗಳಾದರೂ, ಅದು ನೇರವಾಗಿ ಅಡಿಕೆ ಬೆಳೆಗಾರನ ಬದುಕಿನ ಮೇಲೆ ಪ್ರಭಾವ ಬೀರುತ್ತದೆ. ಅಲ್ಲದೆ ಜಿಲ್ಲೆಯ ಬಹುತೇಕ ವಹಿವಾಟುಗಳಲ್ಲಿ ಅಡಿಕೆಯ ಪಾತ್ರವೂ ಪ್ರಮುಖವಾಗಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ಅಡಿಕೆ ಬೆಳೆಗಾರರ ಹಿತ ಕಾಯಬೇಕು ಎಂದು ರೈತ ಮುಖಂಡರಾದ ಬೈಲುಗುತ್ತು ಶ್ರೀಧರ್ ಶೆಟ್ಟಿ ಹೇಳಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications