Arecanut Price:ಅಡಿಕೆ ದರದಲ್ಲಿ ಭಾರೀ ಕುಸಿತ ಬೆಳೆಗಾರನಿಗೆ ಶಾಕ್, ಹೆಚ್ಚಾಯ್ತು ವಿದೇಶಿ ಆಮದಿನ ತಲೆಬಿಸಿ
ಮಂಗಳೂರು, ಫೆಬ್ರವರಿ 20: ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಮತ್ತೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಭೀತಿ ಎದುರಾಗಿದೆ. ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಕರಾವಳಿ ಮಾರುಕಟ್ಟೆಗಳಿಗೆ ಆಗಮಿಸುತ್ತಿರುವುದು ಈ ಭೀತಿಗೆ ಕಾರಣವಾಗಿದೆ.
ಅತ್ಯಂತ ಹೆಚ್ಚು ಗುಣಮಟ್ಟದ ಅಡಿಕೆ ಬೆಳೆಯುವ ಪ್ರದೇಶವಾದ ಕರಾವಳಿ ಭಾಗದ ಅಡಿಕೆಗೆ ಉತ್ತರ ಭಾರತದ ಹಲವೆಡೆ ಭಾರೀ ಬೇಡಿಕೆಯಿದೆ. ಈ ಬೇಡಿಕೆಗಳಿಗೆ ಅನುಗುಣವಾಗಿ ಕರಾವಳಿ ಭಾಗದ ಕೃಷಿಕರು ಅಡಿಕೆ ಬೆಳೆಯನ್ನು ಬೆಳೆಯುತ್ತಿದ್ದು, ಕೊರೊನಾ ಲಾಕ್ ಡೌನ್ ಬಳಿಕ ಅಡಿಕೆಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಧಾರಣೆ ಲಭಿಸುತ್ತಿತ್ತು.

ಕಿಲೋವೊಂದಕ್ಕೆ 500 ರೂಪಾಯಿ ಗಡಿದಾಟಿದ್ದ ಅಡಿಕೆ ಬೆಲೆ ಇದೀಗ ನಿಧಾನವಾಗಿ ಕುಸಿಯಲಾರಂಭಿಸುತ್ತಿದೆ. ಹೊಸ ಅಡಿಕೆ ಬೆಲೆ ಇದೀಗ ಕಿಲೋವೊಂದಕ್ಕೆ 315ರಿಂದ 320ರ ಆಸುಪಾಸಿನಲ್ಲಿದ್ದು, ಹಳೆ ಅಡಿಕೆ ಬೆಲೆ 430-440 ರ ಆಸುಪಾಸಿನಲ್ಲಿದೆ. ಆದರೆ ಬರ್ಮಾ ಹಾಗೂ ಇತರ ಕಡೆಗಳಲ್ಲಿ ಇದೇ ರೀತಿಯ ಅಡಿಕೆಯನ್ನು ಬೆಳೆಯಲಾಗುತ್ತಿದ್ದು, ದೇಶೀ ಮಾರುಕಟ್ಟೆಗೆ ಹೋಲಿಸಿದರೆ, ಅದರ ಬೆಲೆ ತೀರ ಕಡಿಮೆಯಾಗಿದೆ.
ಈ ಅಡಿಕೆಯನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲು ಹಲವು ನಿಬಂಧನೆಗಳಿದ್ದರೂ, ಹೆಚ್ಚಿನ ಲಾಭಗಳಿಸುವ ಉದ್ಧೇಶದಿಂದ ಅಡಿಕೆ ಖರೀದಿದಾರರು ವಿದೇಶಿ ಅಡಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತಿದ್ದಾರೆ. ಹೀಗೆ ಆಮದಾಗುವ ಅಡಿಕೆಗಳಲ್ಲಿ ಕೆಲವು ಮಾತ್ರ ತೆರಿಗೆ ಕಟ್ಟಿ ದೇಶಿ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಅದಕ್ಕಿಂತ ದುಪ್ಪಟ್ಟು ಪ್ರಮಾಣದ ಅಡಿಕೆ ಅಕ್ರಮವಾಗಿ ಆಮದಾಗುತ್ತಿದೆ.
ಈ ಅಡಿಕೆಯನ್ನು ದಕ್ಷಿಣ ಕನ್ನಡ ಭಾಗದಲ್ಲಿ ಬೆಳೆಯುವ ಉತ್ತಮ ಗುಣಮಟ್ಟದ ಅಡಿಕೆಯೊಂದಿಗೆ ಬೆರೆಸಿ ಉತ್ತರ ಭಾರತಕ್ಕೆ ಮಾರಾಟ ಮಾಡಲಾಗುತ್ತಿದೆ. ಇದರಿಂದ ದಕ್ಷಿಣಕನ್ನಡ ಜಿಲ್ಲೆಯ ಅಡಿಕೆಯ ಗುಣಮಟ್ಟವೂ ಕುಸಿಯುವ ಜೊತೆಗೆ ಬೆಲೆಯೂ ಕುಸಿಯುವ ಆತಂಕವಿದೆ.
ದಕ್ಷಿಣ ಕನ್ನಡದ ಬಹುಪಾಲು ಕೃಷಿಕರು ಅಡಿಕೆಯನ್ನೇ ತನ್ನ ಜೀವನಾಧಾರವನ್ನಾಗಿ ಮಾಡಿಕೊಂಡಿದ್ದು, ಅಡಿಕೆ ಮಾರುಕಟ್ಟೆಯಲ್ಲಿ ಸಣ್ಣ ಬದಲಾವಣೆಗಳಾದರೂ, ಅದು ನೇರವಾಗಿ ಅಡಿಕೆ ಬೆಳೆಗಾರನ ಬದುಕಿನ ಮೇಲೆ ಪ್ರಭಾವ ಬೀರುತ್ತದೆ. ಅಲ್ಲದೆ ಜಿಲ್ಲೆಯ ಬಹುತೇಕ ವಹಿವಾಟುಗಳಲ್ಲಿ ಅಡಿಕೆಯ ಪಾತ್ರವೂ ಪ್ರಮುಖವಾಗಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ಅಡಿಕೆ ಬೆಳೆಗಾರರ ಹಿತ ಕಾಯಬೇಕು ಎಂದು ರೈತ ಮುಖಂಡರಾದ ಬೈಲುಗುತ್ತು ಶ್ರೀಧರ್ ಶೆಟ್ಟಿ ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications