Get Updates
Get notified of breaking news, exclusive insights, and must-see stories!

ಕರಾವಳಿಯ 13 ದೈವಸ್ಥಾನಗಳಿಗೆ ಕನ್ನ ಹಾಕಿದ್ದ ಖತರ್ನಾಕ್ ಕಳ್ಳರ ಬಂಧನ

ಮಂಗಳೂರು, ಡಿಸೆಂಬರ್ 11: ಕರಾವಳಿಯ ಜನ ಭಯ, ಭಕ್ತಿಯಿಂದ ಆರಾಧಿಸುವ ದೈವಸ್ಥಾನಗಳಿಗೆ ನುಗ್ಗಿ ದೈವಗಳ ಆಭರಣ ಕದಿಯುತ್ತಿದ್ದ ಕುಖ್ಯಾತ ಕಳ್ಳರ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ.

ಒಂಟಿ ಮನೆಗಳು, ದೇವಸ್ಥಾನಗಳನ್ನು ಟಾರ್ಗೆಟ್ ಮಾಡಿ ದೋಚುತ್ತಿದ್ದ ಈ ಖದೀಮರು ಬಳಿಕ ಒಂದು ಚೂರು ಸಾಕ್ಷ್ಯ ಸಿಗದ ರೀತಿ ಕೆಲಸ ಮುಗಿಸುತ್ತಿದ್ದರು. ಆದರೆ ಈಗ ಕಳ್ಳರ ಪಾಪದ ಕೊಡ ತುಂಬಿದ್ದು, ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ಕಳ್ಳರ ಮೂಲಕ ಒಟ್ಟು 16 ಕಳ್ಳತನ ಪ್ರಕರಣಗಳಿಗೆ ಇತಿಶ್ರೀ ಹಾಡಲಾಗಿದೆ.

ಮಂಗಳೂರು ಪೊಲೀಸರಿಗೆ ಸವಾಲಾಗಿದ್ದ ಸರಣಿ ದೇವಾಲಯ ಕಳವು ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಒಂಟಿ ದೈವಸ್ಥಾನ ಹಾಗೂ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, 16 ಕಳ್ಳತನ ಪ್ರಕರಣ ಭೇದಿಸಿದ್ದಾರೆ. ಬಂಧಿತರಿಂದ 28 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

Arrest of Thieves Who Stolen At 13 Temples in Mangaluru

ಬಂಧಿತರನ್ನು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ನಿವಾಸಿ ನಾಗಾ ನಾಯ್ಕ ಮತ್ತು ದಾವಣಗೆರೆಯ ಚನ್ನಗಿರಿ ನಿವಾಸಿ ಮಾರುತಿ ಸಿ.ವಿ. ಎಂದು ಗುರುತಿಸಲಾಗಿದೆ. ಈ ಕಳ್ಳರು ಮಂಗಳೂರಿನ ದೇವಾಲಯಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಮಂಗಳೂರಿನ ಒಂಟಿ ದೈವಸ್ಥಾನ, ದೇವಾಲಯಗಳನ್ನು ಗುರಿಯಾಗಿರಿಸಿ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳವು ಮಾಡುತ್ತಿದ್ದರು. ಇದೀಗ ಕಳ್ಳರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದೈವದ ಮೊಗ, ಕಡ್ಸಲೆ ಸೇರಿದಂತೆ ವಿವಿಧ ಮಾದರಿಯ ದೈವದ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಗಾನಾಯ್ಕ ಕುಖ್ಯಾತ ಕಳ್ಳನಾಗಿದ್ದು, ಕೃತ್ಯ ಎಸಗಿದ ಬಳಿಕ ಯಾವುದೇ ಸುಳಿವು ಬಿಡುತ್ತಿರಲಿಲ್ಲ. ಆದರೆ ಈಗ ಅಚಾನಕ್ಕಾಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ದೈವಸ್ಥಾನಗಳನ್ನು ಗುರಿಯಾಗಿಸುತ್ತಿದ್ದ ನಾಗಾನಾಯ್ಕ್ ಈಗ ಮನೆ ಕಳವು ಮಾಡಲು ಹೋಗಿ ಸಿಕ್ಕಿ ಬಿದ್ದಿದ್ದಾನೆ.

ಮಂಗಳೂರಿನ ಅಶೋಕ ನಗರದ ಮನೆಯೊಂದರಲ್ಲಿ ಕಳ್ಳತನ ಮಾಡಿ ಹೋಗುತಿದ್ದಾಗ ಅಲ್ಲೇ ಪಕ್ಕದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ. ಪೊಲೀಸರು ಸಿಸಿಟಿವಿ ತಪಾಸಣೆ ನಡೆಸಿದಾಗ, ವ್ಯಕ್ತಿಯೊಬ್ಬನ ಚಹರೆ ದಾಖಲಾಗಿತ್ತು. ಇದನ್ನು ಅನುಸರಿಸಿ ಪೊಲೀಸರು ಕಳ್ಳನ ಟ್ರೇಸ್ ಮಾಡಿದ್ದಾರೆ.

Arrest of Thieves Who Stolen At 13 Temples in Mangaluru

ಆರೋಪಿ ನಾಗಾ ನಾಯ್ಕ ಮಂಗಳೂರು, ಚಿಕ್ಕಮಗಳೂರು ಸೇರಿದಂತೆ ವಿವಿದೆಡೆ ಕಳ್ಳತನವನ್ನೇ ಕಸುಬು ಮಾಡಿಕೊಂಡಿದ್ದು, ಪೊಲೀಸರ ಲೀಸ್ಟ್‌ನಲ್ಲಿದ್ದ ಕುಖ್ಯಾತ ವ್ಯಕ್ತಿಯಾಗಿದ್ದಾನೆ. ಅನುಮಾನದ ಮೇಲೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ನಾಗಾ ನಾಯ್ಕನ ಕಳ್ಳತನದ ಪ್ರಕರಣಗಳು ಹೊರಬಿದ್ದಿದೆ. ಮಂಗಳೂರು ಆಸುಪಾಸಿನಲ್ಲಿ 13 ಕಡೆ ದೈವಸ್ಥಾನಗಳ ಆಭರಣಗಳನ್ನು ಕದ್ದಿರುವುದು ಮತ್ತು ಮೂರು ಕಡೆ ಮನೆ ಕಳ್ಳತನ ಮಾಡಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ನಾಗಾ ನಾಯ್ಕ ಕದ್ದ ಚಿನ್ನಾಭರಣವನ್ನು ಬಂಧಿತ ಆರೋಪಿ ಮಾರುತಿ ಮಾರಾಟ ಮಾಡುತಿದ್ದ. ಬಂಧಿತರಿಂದ ದೈವಸ್ಥಾನಗಳಲ್ಲಿ ಇಡಲಾಗುವ ದೈವದ ಮೊಗ, ಕಡ್ಸಲೆ ಸೇರಿದಂತೆ ವಿವಿಧ ಮಾದರಿಯ ದೈವದ ಆಭರಣಗಳನ್ನು ಬೆಳ್ಳಿಯ ಸಾಮಾನುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಟ್ಟಿನಲ್ಲಿ ಮಂಗಳೂರಿನಲ್ಲಿ ಪದೇಪದೇ ನಡೆಯುತ್ತಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಇಬ್ಬರು ಕಳ್ಳರ ಬಂಧನದ ಮೂಲಕ ಒಟ್ಟು 16 ಕಳ್ಳತನ ಪ್ರಕರಣ ಸುಖಾಂತ್ಯವಾಗಿದೆ.

Recommended Video

      Australia ಮೊದಲನೇ ಪಂದ್ಯದಲ್ಲಿ ಗೆಲ್ಲಲು ಮಾಡಿದ್ದೇನು | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+