Get Updates
Get notified of breaking news, exclusive insights, and must-see stories!

ನೈತಿಕ ಪೊಲೀಸ್‌ಗಿರಿ ನಡೆಸಿ ಮುಸ್ಲಿಂ ಆಟೋ ಚಾಲಕ ಮೇಲೆ ಹಲ್ಲೆ ನಡೆಸಿದ್ದ ಮೂವರ ಬಂಧನ

ಮಂಗಳೂರು, ಆಗಸ್ಟ್‌ 5: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಹಿಂದೂ ಯುವತಿಯನ್ನು ತನ್ನ ವಾಹನದಲ್ಲಿ ಕರೆದೊಯ್ದ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತರು ಮುಸ್ಲಿಂ ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಧರ್ಮಸ್ಥಳದ ಅವಿನಾಶ್ (26), ಸಂದೀಪ್ (20) ಮತ್ತು ಉಪ್ಪಿನಂಗಡಿಯ ಅಕ್ಷತ್ (22) ಎಂದು ಗುರುತಿಸಲಾಗಿದೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ.

arrest-of-three-persons-who-assaulted-a-muslim

ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿಗೆ ಬಸ್ ಹತ್ತಲು ಉಜಿರೆಯಲ್ಲಿ ಕಾಯುತ್ತಿದ್ದಳು. ಆಗ ಆಟೋರಿಕ್ಷಾ ಚಾಲಕ ಮೊಹಮ್ಮದ್ ಆಸಿಕ್ ಆಕೆಯನ್ನು ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಕರೆದೊಯ್ಯಲು ಮುಂದಾದ. ಮೊಹಮ್ಮದ್ ವಿದ್ಯಾರ್ಥಿಯ ಸಾಮಾನು ಸರಂಜಾಮು ಎತ್ತಿಕೊಳ್ಳಲು ಸಹಾಯ ಮಾಡುತ್ತಿದ್ದಾಗ ಯುವಕರ ಗುಂಪೊಂದು ಸ್ಥಳದಿಂದ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿತ್ತು.

ಈ ಸಂಬಂದ ಬೆಳ್ತಂಗಡಿ ಪೊಲೀಸರು ಸೆಕ್ಷನ್ 143 (ಕಾನೂನುಬಾಹಿರ ಸಭೆ), 147 (ಗಲಭೆ), 341 (ತಪ್ಪು ತಡೆ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 504 (ಪ್ರಚೋದನೆ), 506 (ಅಪರಾಧದ ಶಿಕ್ಷೆ), 506 (ಅಪರಾಧಿ ಶಿಕ್ಷೆಗೆ ಶಿಕ್ಷೆ) ಐಪಿಎಸ್‌ಯ 149ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಆಗಸ್ಟ್ 1 ರಂದು ಮಂಗಳೂರಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಾನೂನು ಪಾಲಕರಿಗೆ ಸೂಚನೆ ನೀಡಿದ್ದರು. ಜೂನ್‌ 6ರಂದು ಕರಾವಳಿ ಭಾಗದಲ್ಲಿ ನಡೆಯುವ ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+