ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆ ಮೇಲೆ ದೊಣ್ಣೆಯಿಂದ ಹಲ್ಲೆ
ಮಂಗಳೂರು, ಜುಲೈ 9: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿಲ್ಲಿ ಕರ್ತವ್ಯ ನಿರತ ಆಶಾ ಕಾರ್ಯಕರ್ತೆ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ.
ಹಲ್ಲೆಗೊಳಗಾದ ಕಾರ್ಯಕರ್ತೆಯನ್ನು ಮಮತಾ ಗಟ್ಟಿ ಎಂದು ಗುರುತಿಸಲಾಗಿದ್ದು, ಅವರ ತಲೆಗೆ ಹಾಗೂ ಕೈಗೆ ಗಾಯಗಳಾದ ಹಿನ್ನೆಲೆಯಲ್ಲಿ ವಾಮದಪದವು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಶಾ ಕಾರ್ಯಕರ್ತೆ ಮೇಲೆ ಮಂತ್ರವಾದಿಯಿಂದ ಹಲ್ಲೆ ಯತ್ನ
ಆಶಾ ಕಾರ್ಯಕರ್ತೆ ಮಮತಾ ಗಟ್ಟಿ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಕಾರ್ಯ ನಿರ್ವಹಿಸುತ್ತಿದ್ದಾಗ ಸ್ಥಳೀಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಕುರಿತು ವಾಮದ ಪದವು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Comments
English summary
A man assaulted Asha worker in Bantwal taluk in Dakshina Kannada