ಕರಾವಳಿಯಲ್ಲಿ ಇಂದು 'ಆಟಿ ಅಮಾವಾಸ್ಯೆ'; ಹಾಲೆ ಕಷಾಯ ಸೇವಿಸಿದ ಕರಾವಳಿಗರು
ಮಂಗಳೂರು, ಆಗಸ್ಟ್ 1: ಕರಾವಳಿಯಲ್ಲಿ ಇಂದು 'ಆಟಿ ಅಮಾವಾಸ್ಯೆ'. ಯಾವುದೇ ಶುಭ ಸಮಾರಂಭ ನಡೆಯದ ಈ ಮಾಸ ರೋಗರುಜಿನ ತರುವ ತಿಂಗಳು ಎಂಬುದು ತುಳುಜನರ ನಂಬಿಕೆ. ಹಾಗಾಗೇ ಕರಾವಳಿಯಾದ್ಯಂತ ಜನರು ಆಟಿ ಕಷಾಯ ಸೇವಿಸುವ ರೂಢಿ ಇದೆ.
ತುಳುನಾಡಿನ ಜಾನಪದ ಸಾಂಸ್ಕೃತಿಕ ಆಚರಣೆಗಳಲ್ಲಿ ಆಟಿ (ಆಷಾಢ) ತಿಂಗಳಿಗೆ ವಿಶಿಷ್ಟ ಮಾನ್ಯತೆ ಇದೆ. ಆಟಿ ಕಷಾಯಕ್ಕೂ ವಿಶೇಷ ಮೌಲ್ಯವಿದೆ. ಕೃಷಿ ಅವಲಂಬಿತ ಪ್ರಾಚೀನ ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ಯಾವುದೇ ಬೆಳೆಯ ಫಸಲು ಕೊಯ್ಲಿಗೆ ಬರುವುದಿಲ್ಲ. ಈ ತಿಂಗಳು, ಬದಲಾಗುವ ಭೂ ವಾತಾವಾರಣ, ನಿರಂತರ ಸುರಿಯುವ ಮಳೆಯನ್ನು ಕಾಣಬಹುದು. ಈ ಕಾರಣದಿಂದ ಈ ಮಾಸದಲ್ಲಿ ಶರೀರದಲ್ಲಿ ಕಂಡುಬರುವ ರೋಗಗಳು ಮನುಷ್ಯನನ್ನು ನಿತ್ರಾಣ ಮಾಡುತ್ತವೆ.
ಆದ್ದರಿಂದ ಈ ತಿಂಗಳಿನಲ್ಲಿ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಆಟಿ ಅಮಾವಾಸ್ಯೆ ದಿನದಂದು ಸಾಮೂಹಿಕವಾಗಿ ಕಷಾಯ ಸೇವಿಸುವ ಪದ್ಧತಿ ನಡೆದು ಬಂದಿದೆ. ಹಾಲೆ ಮರದ ಕಷಾಯವನ್ನು ಕರಿ ಮೆಣಸು, ಬೆಳ್ಳುಳ್ಳಿ, ಓಮ ಸೇರಿಸಿ ಆಟಿ ತಿಂಗಳ ಅಮಾವಾಸ್ಯೆಯ ನಸುಕಿನಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವಿಸುತ್ತಾರೆ. ಈ ಕಷಾಯ ಹಲವು ಔಷಧೀಯ ಗುಣಗಳನ್ನು ಹೊಂದಿರುತ್ತದೆ.

ಹಾಲೆ ಮರದ ತೊಗಟೆಯ ಕಷಾಯ (ಪಾಲೆದ ಕೆತ್ತೆದ ಕಷಾಯ)ವೆಂದೇ ಹೆಸರುವಾಸಿಯಾಗಿರುವ, ರಥದ ಆಕಾರದಲ್ಲಿ ಕೊಂಬೆಗಳು, ಎಲೆಗಳನ್ನು ಹರಡಿ, ಎತ್ತರಕ್ಕೆ ಬೆಳೆಯುವ ಹಾಲೆ ಮರದ ಹಾಲನ್ನು ಕುಡಿದು ಬೆಲ್ಲ ಚಪ್ಪರಿಸುವ ಸಂಭ್ರಮ ಒಂದೆಡೆ. ಕಡುಕಷ್ಟದ ತಿಂಗಳೆಂದೇ ಉಲ್ಲೇಖವಿರುವ ಆಟಿ ಮಾಸದಲ್ಲಿ ಅಮಾವಾಸ್ಯೆ ಹಿಂದಿನ ದಿನ ಸಂಜೆ ಮರಕ್ಕೆ ನೂಲು ಕಟ್ಟಿ 'ನಾಳೆ ಬರುತ್ತೇನೆ ಮದ್ದು ಸಿದ್ಧ ಮಾಡಿಡು' ಎಂದು ವನದೇವತೆಯನ್ನು ಪ್ರಾರ್ಥಿಸಿ ಬರುವ ಕ್ರಮವಿದೆ.
ಮರುದಿನ ಸೂರ್ಯ ಹುಟ್ಟುವ ಮುನ್ನ ಗಂಡಸರು ಬೆತ್ತಲೆಯಾಗಿ ಹಾಲೆ ಮರದ ಬಳಿ ಹೋಗಿ, ಕಲ್ಲಿನಿಂದ ಹಾಲೆಯ ತೊಗಟೆಯನ್ನು ಜಜ್ಜಿಕೊಂಡು ಬಂದು, ಅದರ ರಸವನ್ನು ಕರಿಮೆಣಸು, ಜೀರಿಗೆ, ಓಮ, ಬೆಳ್ಳುಳ್ಳಿ ಜೊತೆ ಅರೆದು ಮಿಶ್ರಣ ಮಾಡಿ, ಬೆಣಚು ಕಲ್ಲನ್ನು ಬಿಸಿ ಮಾಡಿ ಮಿಶ್ರಣಕ್ಕೆ ಮುಳುಗಿಸುತ್ತಾರೆ. ನಂತರ ಸಾಸಿವೆ ಒಗ್ಗರಣೆ ಕೊಟ್ಟು ಖಾಲಿ ಹೊಟ್ಟೆಯಲ್ಲಿ ಮಕ್ಕಳಿಂದ ಹಿಡಿದು ಮುದುಕರವರೆಗೂ ಕಷಾಯವನ್ನು ಕುಡಿಯುತ್ತಾರೆ. ಬಾಯಿಯ ಕಹಿಗೆ ಬೆಲ್ಲ, ಉಷ್ಣಕ್ಕೆ ಮೆತ್ತೆಗಂಜಿ ಸೇವಿಸುತ್ತಾರೆ.
ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಹೂ ಬಿಡುವ ಈ ಮರದಲ್ಲಿ ಆಟಿ ಅಮಾವಾಸ್ಯೆಯ ದಿನ ಸಾವಿರದ ಒಂದು ಬಗೆಯ ಔಷಧಿಗಳು ಸೇರಿಕೊಂಡಿರುತ್ತವೆ ಎಂಬ ನಂಬಿಕೆ ಇದೆ. ಇದರ ಹೂವಿನ ಪರಿಮಳ ಮತ್ತೇರಿಸುವಂತಹದ್ದು. ಹಾಲೆಮರದ ತೊಗಟೆಯ ರಸ ಸೇವಿಸಿದರೆ ಹೊಟ್ಟೆನೋವು, ಕಫ ಮತ್ತಿತರೆ ಕಾಯಿಲೆಗಳು ಒಂದು ವರ್ಷ ಬರುವುದಿಲ್ಲ ಎಂಬ ನಂಬಿಕೆ ಇದೆ. ಹಾಲೆ ಮರದ ತಾಯಿ ಬೇರು ಕಂಡವರಿಲ್ಲ ಎಂಬ ಮಾತು ಕೂಡ ತುಳುನಾಡಿನಲ್ಲಿ ಚಾಲ್ತಿಯಲ್ಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications