ಮಂಗಳೂರು: ಪ್ರಚಾರ ಪಡೆಯಲು ದಾಳಿಯ ಕತೆ ಕಟ್ಟಿದ ಹಿಂಜಾವೇ ಮುಖಂಡ
ಮಂಗಳೂರು, ಜನವರಿ 11: ತನ್ನ ಮೇಲೆ ತಲವಾರು ದಾಳಿಗೆ ಯತ್ನ ನಡೆಯಿತು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಸುರತ್ಕಲ್ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣದ ಸತ್ಯಾಸತ್ಯತೆ ಈಗ ಬಟಾಬಯಲಾಗಿದೆ.
ಹಿಂದೂ ಜಾಗರಣ ವೇದಿಕೆ ಸುರತ್ಕಲ್ ಘಟಕದ ಸಹ ಸಂಚಾಲಕ ಭರತ್ ರಾಜ್ ಅಗರಮೇಲು ಜನವರಿ 8 ರಂದು ರಾತ್ರಿ ಸುರತ್ಕಲ್ ಪೊಲೀಸ್ ಠಾಣೆಗೆ ತೆರಳಿ ನೀಡಿದ್ದ ದೂರು ಕಟ್ಟುಕತೆ ಎಂಬುದು ಪೊಲೀಸರು ನಡೆಸಿದ ತನಿಖೆಯಲ್ಲಿ ಬಯಲಾಗಿದೆ.
ಘಟನೆಯ ಕುರಿತು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ಕುಮಾರ್ ಖುದ್ದಾಗಿ ತನಿಖೆ ನಡೆಸಿದ್ದರು . ದಾಳಿಗೆ ಯತ್ನ ನಡೆದಿತ್ತು ಎಂದು ಹೇಳಲಾದ ಸ್ಥಳಕ್ಕೆ ಭರತ್ ರಾಜ್ ಅಗರಮೇಲು ಅವರನ್ನು ಕರೆದೊಯ್ದು ವಿಚಾರಣೆ ನಡೆಸಿದ ಬಳಿಕ, ಕಟ್ಟು ಕತೆಯೊಂದನ್ನು ಹೆಣೆದು ಮಾಧ್ಯಮಗಳಲ್ಲಿ ಪ್ರಚಾರ ಪಡೆಯಲು ಭರತ್ ಯತ್ನಿಸಿದ್ದ ಎಂಬುದು ಖಚಿತವಾಗಿದೆ.

ಕತೆಯ ಸೂತ್ರದಾರ
"ಜನವರಿ 8 ರಂದು ಸೋಮವಾರ ರಾತ್ರಿ 8:30 ರ ಸುಮಾರಿಗೆ ಅಗರಮೇಲು ಎಂಬಲ್ಲಿ ಮೋಟರ್ ಬೈಕ್ನಲ್ಲಿ ತೆರಳುತ್ತಿದ್ದಾಗ ಪೊದೆಯಲ್ಲಿ ಅವಿತು ಕುಳಿತಿದ್ದ ನಾಲ್ವರು ದುಷ್ಕರ್ಮಿಗಳು ತಲವಾರುಗಳೊಂದಿಗೆ ನನ್ನನ್ನು ಕೊಲ್ಲಲು ಯತ್ನಿಸಿದರು. ಆಗ ಬೈಕ್ ಬಿಟ್ಟು ಓಡಿ ಹೋಗಿ ಸಮೀಪದ ಮನೆಯೊಂದಕ್ಕೆ ನುಗ್ಗಿ ನಾನು ತಪ್ಪಿಸಿಕೊಂಡೆ. ಆರೋಪಿಗಳು ಅಲ್ಲಿಂದ ಹೊರಟುಹೋದ ಬಳಿಕ ವಾಪಸು ಬಂದಿದ್ದೇನೆ," ಎಂದು ಭರತ್ ರಾಜ್ ಅಗರಮೇಲು ದೂರಿನಲ್ಲಿ ಉಲ್ಲೇಖಿಸಿದ್ದ.
ಇದಾದ ಬಳಿಕ ಜನವರಿ 8 ರಂದು ರಾತ್ರಿ ಭರತ್ ರಾಜ್ ಮೇಲೆ ನಾಲ್ವರು ದಾಳಿಗೆ ಯತ್ನಿಸಿದ್ದಾರೆ ಎಂಬ ಸುದ್ದಿ ವಾಟ್ಸ್ ಆ್ಯಪ್ ಮೂಲಕ ಹರಿದಾಡಲು ಆರಂಭಿಸಿತ್ತು. ಈ ಮಾಹಿತಿ ಸುದ್ದಿ ಮಾಧ್ಯಮಗಳಲ್ಲಿ, ಪತ್ರಿಕೆಗಳನ್ನೂ ಪ್ರಸಾರವಾಗಿತ್ತು.
ಬಳಿಕ ಘಟನೆ ನಡೆದಿದೆ ಎನ್ನಲಾದ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಕುಮಾರ್, ಡಿಸಿಪಿ ಹನುಮಂತರಾಯ ಅವರೊಂದಿಗೆ ತೆರಳಿದ್ದರು. ಮಧ್ಯಮಗಳಲ್ಲಿ ಮಾಹಿತಿ ನೀಡುತ್ತಿದ್ದ ಭರತ್ ರಾಜ್ನನ್ನು ಸ್ಥಳಕ್ಕೆ ಕರೆದೊಯ್ದ ಕಮಿಷನರ್ ಸ್ಥಳದಲ್ಲೇ ವಿಚಾರಣೆ ನಡೆಸಿದ್ದಾರೆ. ಆಗ ಭರತ್ ದೂರಿನಲ್ಲಿ ಹೇಳಿರುವ ವಿಚಾರಕ್ಕೂ ವಾಸ್ತವಕ್ಕೂ ತಾಳೆ ಬರುತ್ತಿರಲಿಲ್ಲ ಎಂದು ಗೊತ್ತಾಗಿದೆ. ಮಾಧ್ಯಮಗಳಿಗೆ ನೀಡಿದ ಮಾಹಿತಿಯಲ್ಲಿ ನಾಲ್ವರಿಂದ ದಾಳಿಗೆ ಯತ್ನ ನಡೆದಿತ್ತು ಎಂದು ಭರತ್ ಹೇಳಿದ್ದ. ಆದರೆ ಪೊಲಿಸರಿಗೆ ನೀಡಿದ ದೂರಿನಲ್ಲಿ ಮೂರು ಮಂದಿ ಎಂದು ದಾಖಲಿಸಿದ್ದ. ಹೀಗೆ ಆತನ ಹೇಳಿಕೆಗಳಲ್ಲೇ ವಿರೋಧಾಭಾಸಗಳು ಮನೆ ಮಾಡಿದ್ದವು.

ದೂರಿನಲ್ಲಿ ಮೂವರ ಬಳಿ ತಲವಾರಿತ್ತು. ಅವರಲ್ಲಿ ಒಬ್ಬ ಬೂದು ಬಣ್ಣದ ಟಿ-ಷರ್ಟ್ ಮತ್ತು ಪ್ಯಾಂಟ್ ಹಾಗೂ ಇನ್ನೊಬ್ಬ ವ್ಯಕ್ತಿ ಷರ್ಟ್ ಹಾಗೂ ಪ್ಯಾಂಟ್ ಧರಿಸಿದ್ದ ಕುರಿತು ಭರತ್ ಮಾಹಿತಿ ನೀಡಿದ್ದ. ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿದಾಗ ಒಬ್ಬನ ಬಳಿ ತಲವಾರು ನೋಡಿರುವುದಾಗಿ ಹೇಳಿದ. ಬೂದು ಬಣ್ಣದ ಟಿ-ಷರ್ಟ್ ಮತ್ತು ಪ್ಯಾಂಟ್ ಧರಿಸಿದ ಒಬ್ಬನನ್ನು ಸ್ಪಷ್ಟವಾಗಿ ನೋಡಿರುವುದಾಗಿ ತಿಳಿಸಿದ. ಆದರೆ, ಘಟನೆ ನಡೆದಿದೆ ಎಂದು ಆತ ತೋರಿಸಿದ ಸ್ಥಳದಲ್ಲಿ ಸಂಪೂರ್ಣ ಕತ್ತಲು ಆವರಿಸಿತ್ತು. ಬಟ್ಟೆಯ ಬಣ್ಣ ಗುರುತಿಸುವುದಕ್ಕೆ ಸಾಧ್ಯವೇ ಇರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಮಿಷನರ್ ವಿಚಾರಣೆ ತೀವ್ರಗೊಳಿಸುತ್ತಿದ್ದಂತೆಯೇ ತಬ್ಬಿಬ್ಬಾದ ಭರತ್ ರಾಜ್ ಅಲ್ಲಿಂದ ಪಲಾಯನ ಮಾಡಿದ್ದಾನೆ. ಮತ್ತೊಮ್ಮೆ ಆತನ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸುರತ್ಕಲ್ ಠಾಣೆ ಪೊಲೀಸರಿಗೆ ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ ನಿರ್ದೇಶನ ನೀಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications