ಮಂಗಳೂರು; ಬಜರಂಗದಳದಿಂದ ಮತ್ತೆ ಪಬ್ ಮೇಲೆ ದಾಳಿ
ಮಂಗಳೂರು, ಜುಲೈ 26; ಮಂಗಳೂರಿನ ಪಬ್ನಲ್ಲಿ ಪಾರ್ಟಿಯಲ್ಲಿ ನಿರತರಾಗಿದ್ದ ಕಾಲೇಜು ವಿದ್ಯಾರ್ಥಿಗಳನ್ನು ಬಜರಂಗದಳ ಕಾರ್ಯಕರ್ತರು ತಡೆದ ಘಟನೆ ನಡೆದಿದೆ.
ಮಂಗಳೂರಿನ ರಿ-ಸೈಕಲ್ ದಿ ಲಾಂಜ್ ಪಬ್ನಲ್ಲಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಗಳು ಪಾರ್ಟಿ ನಡೆಸುತ್ತಿದ್ದರು. ಕಾಲೇಜು ಫೇರ್ವೆಲ್ ನೆಪದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು ಎಂಬ ಮಾಹಿತಿ ಇದೆ. ಈ ವೇಳೆ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕುಣಿತ, ಮೋಜು, ಮಸ್ತಿಯಲ್ಲಿ ತೊಡಗಿದ್ದರು ಆರೋಪಿಸಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಪಬ್ ಒಳ ಹೊಕ್ಕು ಪಾರ್ಟಿ ನಿಲ್ಲಿಸುವಂತೆ ಸೂಚಿಸಿ ಬೈದು ವಿದ್ಯಾರ್ಥಿಗಳನ್ನು ಹೊರ ಕಳುಹಿಸಿದ್ದಾರೆ. ತಕ್ಷಣ ಮಧ್ಯ ಪ್ರವೇಶಿಸಿದ ಪೊಲೀಸರು ಕಾರ್ಯಕರ್ತರನ್ನು ಚದುರಿಸಿದ್ದಾರೆ. ಸದ್ಯ ಪಾರ್ಟಿ ಅರ್ಧದಲ್ಲೇ ಮೊಟಕುಗೊಳಿಸಿ ವಿದ್ಯಾರ್ಥಿಗಳು ಅಲ್ಲಿಂದ ಹೋಗಿದ್ದಾರೆ. ತುಂಡುಡುಗೆ ತೊಟ್ಟು, ಕುಡಿದು ವಿದ್ಯಾರ್ಥಿಗಳು ಮೋಜು ಮಸ್ತಿಯಲ್ಲಿ ತೊಡಗಿದ್ದರು ಎಂದು ದೂರಲಾಗುತ್ತಿದೆ.

ಬಜರಂಗದಳ ಮುಖಂಡ ಪುನೀತ್ ಅತ್ತಾವರ ನೇತೃತ್ವದಲ್ಲಿ ಕಾರ್ಯಕರ್ತರು ಪಬ್ ಮೇಲೆ ದಾಳಿ ಮಾಡಿದ್ದಾರೆ. ಇತ್ತೀಚೆಗೆ ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಕಿಸ್ ಪಂದ್ಯವನ್ನು ವಿರೋಧಿಸಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾಲೇಜಿನ ಆಡಳಿತ ಮಂಡಳಿಗೆ ನೇರ ಎಚ್ಚರಿಕೆಯನ್ನು ನೀಡಿತ್ತು.
ಕಾಲೇಜಿನ ಮಕ್ಕಳನ್ನು ಶಿಸ್ತು ಬದ್ಧವಾಗಿ ಇಡಬೇಕು ಮತ್ತು ಅವರು ನೆಲೆಸುವ ಪಿಜಿ ಮತ್ತು ರೂಂಗಳಲ್ಲಿ ಕಡ್ಡಾಯವಾಗಿ ಶಿಸ್ತು ನಿಯಮಗಳನ್ನು ತರಬೇಕು ಎಂದು ಬಜರಂಗದಳ ಆಗ್ರಹಿಸಿತ್ತು.

ಸೋಮವಾರ ರಾತ್ರಿ ವಿದ್ಯಾರ್ಥಿಗಳೆಲ್ಲರೂ ಎಂಟು ಗಂಟೆಗೆ ಪಬ್ಗೆ ಹೋಗಿದ್ದರು. ವಿದ್ಯಾರ್ಥಿನಿಯರು ತುಂಡುಡುಗೆಯನ್ನು ಧರಿಸಿದ್ದರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಬ್ನಲ್ಲಿ ಅಸಭ್ಯವಾಗಿ ವರ್ತನೆ ಮಾಡಿದ್ದರು ಎಂದು ಬಜರಂಗದಳ ಆರೋಪ ಮಾಡಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications