ಮಂಗಳೂರು; ಬಜರಂಗದಳದಿಂದ ಮತ್ತೆ ಪಬ್ ಮೇಲೆ ದಾಳಿ
ಮಂಗಳೂರು, ಜುಲೈ 26; ಮಂಗಳೂರಿನ ಪಬ್ನಲ್ಲಿ ಪಾರ್ಟಿಯಲ್ಲಿ ನಿರತರಾಗಿದ್ದ ಕಾಲೇಜು ವಿದ್ಯಾರ್ಥಿಗಳನ್ನು ಬಜರಂಗದಳ ಕಾರ್ಯಕರ್ತರು ತಡೆದ ಘಟನೆ ನಡೆದಿದೆ.
ಮಂಗಳೂರಿನ ರಿ-ಸೈಕಲ್ ದಿ ಲಾಂಜ್ ಪಬ್ನಲ್ಲಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಗಳು ಪಾರ್ಟಿ ನಡೆಸುತ್ತಿದ್ದರು. ಕಾಲೇಜು ಫೇರ್ವೆಲ್ ನೆಪದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು ಎಂಬ ಮಾಹಿತಿ ಇದೆ. ಈ ವೇಳೆ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕುಣಿತ, ಮೋಜು, ಮಸ್ತಿಯಲ್ಲಿ ತೊಡಗಿದ್ದರು ಆರೋಪಿಸಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಪಬ್ ಒಳ ಹೊಕ್ಕು ಪಾರ್ಟಿ ನಿಲ್ಲಿಸುವಂತೆ ಸೂಚಿಸಿ ಬೈದು ವಿದ್ಯಾರ್ಥಿಗಳನ್ನು ಹೊರ ಕಳುಹಿಸಿದ್ದಾರೆ. ತಕ್ಷಣ ಮಧ್ಯ ಪ್ರವೇಶಿಸಿದ ಪೊಲೀಸರು ಕಾರ್ಯಕರ್ತರನ್ನು ಚದುರಿಸಿದ್ದಾರೆ. ಸದ್ಯ ಪಾರ್ಟಿ ಅರ್ಧದಲ್ಲೇ ಮೊಟಕುಗೊಳಿಸಿ ವಿದ್ಯಾರ್ಥಿಗಳು ಅಲ್ಲಿಂದ ಹೋಗಿದ್ದಾರೆ. ತುಂಡುಡುಗೆ ತೊಟ್ಟು, ಕುಡಿದು ವಿದ್ಯಾರ್ಥಿಗಳು ಮೋಜು ಮಸ್ತಿಯಲ್ಲಿ ತೊಡಗಿದ್ದರು ಎಂದು ದೂರಲಾಗುತ್ತಿದೆ.

ಬಜರಂಗದಳ ಮುಖಂಡ ಪುನೀತ್ ಅತ್ತಾವರ ನೇತೃತ್ವದಲ್ಲಿ ಕಾರ್ಯಕರ್ತರು ಪಬ್ ಮೇಲೆ ದಾಳಿ ಮಾಡಿದ್ದಾರೆ. ಇತ್ತೀಚೆಗೆ ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಕಿಸ್ ಪಂದ್ಯವನ್ನು ವಿರೋಧಿಸಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾಲೇಜಿನ ಆಡಳಿತ ಮಂಡಳಿಗೆ ನೇರ ಎಚ್ಚರಿಕೆಯನ್ನು ನೀಡಿತ್ತು.
ಕಾಲೇಜಿನ ಮಕ್ಕಳನ್ನು ಶಿಸ್ತು ಬದ್ಧವಾಗಿ ಇಡಬೇಕು ಮತ್ತು ಅವರು ನೆಲೆಸುವ ಪಿಜಿ ಮತ್ತು ರೂಂಗಳಲ್ಲಿ ಕಡ್ಡಾಯವಾಗಿ ಶಿಸ್ತು ನಿಯಮಗಳನ್ನು ತರಬೇಕು ಎಂದು ಬಜರಂಗದಳ ಆಗ್ರಹಿಸಿತ್ತು.

ಸೋಮವಾರ ರಾತ್ರಿ ವಿದ್ಯಾರ್ಥಿಗಳೆಲ್ಲರೂ ಎಂಟು ಗಂಟೆಗೆ ಪಬ್ಗೆ ಹೋಗಿದ್ದರು. ವಿದ್ಯಾರ್ಥಿನಿಯರು ತುಂಡುಡುಗೆಯನ್ನು ಧರಿಸಿದ್ದರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಬ್ನಲ್ಲಿ ಅಸಭ್ಯವಾಗಿ ವರ್ತನೆ ಮಾಡಿದ್ದರು ಎಂದು ಬಜರಂಗದಳ ಆರೋಪ ಮಾಡಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications