ಮಂಗಳೂರು; ಬಜರಂಗದಳದಿಂದ ಮತ್ತೆ ಪಬ್ ಮೇಲೆ ದಾಳಿ
ಮಂಗಳೂರು, ಜುಲೈ 26; ಮಂಗಳೂರಿನ ಪಬ್ನಲ್ಲಿ ಪಾರ್ಟಿಯಲ್ಲಿ ನಿರತರಾಗಿದ್ದ ಕಾಲೇಜು ವಿದ್ಯಾರ್ಥಿಗಳನ್ನು ಬಜರಂಗದಳ ಕಾರ್ಯಕರ್ತರು ತಡೆದ ಘಟನೆ ನಡೆದಿದೆ.
ಮಂಗಳೂರಿನ ರಿ-ಸೈಕಲ್ ದಿ ಲಾಂಜ್ ಪಬ್ನಲ್ಲಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಗಳು ಪಾರ್ಟಿ ನಡೆಸುತ್ತಿದ್ದರು. ಕಾಲೇಜು ಫೇರ್ವೆಲ್ ನೆಪದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು ಎಂಬ ಮಾಹಿತಿ ಇದೆ. ಈ ವೇಳೆ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕುಣಿತ, ಮೋಜು, ಮಸ್ತಿಯಲ್ಲಿ ತೊಡಗಿದ್ದರು ಆರೋಪಿಸಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಪಬ್ ಒಳ ಹೊಕ್ಕು ಪಾರ್ಟಿ ನಿಲ್ಲಿಸುವಂತೆ ಸೂಚಿಸಿ ಬೈದು ವಿದ್ಯಾರ್ಥಿಗಳನ್ನು ಹೊರ ಕಳುಹಿಸಿದ್ದಾರೆ. ತಕ್ಷಣ ಮಧ್ಯ ಪ್ರವೇಶಿಸಿದ ಪೊಲೀಸರು ಕಾರ್ಯಕರ್ತರನ್ನು ಚದುರಿಸಿದ್ದಾರೆ. ಸದ್ಯ ಪಾರ್ಟಿ ಅರ್ಧದಲ್ಲೇ ಮೊಟಕುಗೊಳಿಸಿ ವಿದ್ಯಾರ್ಥಿಗಳು ಅಲ್ಲಿಂದ ಹೋಗಿದ್ದಾರೆ. ತುಂಡುಡುಗೆ ತೊಟ್ಟು, ಕುಡಿದು ವಿದ್ಯಾರ್ಥಿಗಳು ಮೋಜು ಮಸ್ತಿಯಲ್ಲಿ ತೊಡಗಿದ್ದರು ಎಂದು ದೂರಲಾಗುತ್ತಿದೆ.

ಬಜರಂಗದಳ ಮುಖಂಡ ಪುನೀತ್ ಅತ್ತಾವರ ನೇತೃತ್ವದಲ್ಲಿ ಕಾರ್ಯಕರ್ತರು ಪಬ್ ಮೇಲೆ ದಾಳಿ ಮಾಡಿದ್ದಾರೆ. ಇತ್ತೀಚೆಗೆ ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಕಿಸ್ ಪಂದ್ಯವನ್ನು ವಿರೋಧಿಸಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾಲೇಜಿನ ಆಡಳಿತ ಮಂಡಳಿಗೆ ನೇರ ಎಚ್ಚರಿಕೆಯನ್ನು ನೀಡಿತ್ತು.
ಕಾಲೇಜಿನ ಮಕ್ಕಳನ್ನು ಶಿಸ್ತು ಬದ್ಧವಾಗಿ ಇಡಬೇಕು ಮತ್ತು ಅವರು ನೆಲೆಸುವ ಪಿಜಿ ಮತ್ತು ರೂಂಗಳಲ್ಲಿ ಕಡ್ಡಾಯವಾಗಿ ಶಿಸ್ತು ನಿಯಮಗಳನ್ನು ತರಬೇಕು ಎಂದು ಬಜರಂಗದಳ ಆಗ್ರಹಿಸಿತ್ತು.

ಸೋಮವಾರ ರಾತ್ರಿ ವಿದ್ಯಾರ್ಥಿಗಳೆಲ್ಲರೂ ಎಂಟು ಗಂಟೆಗೆ ಪಬ್ಗೆ ಹೋಗಿದ್ದರು. ವಿದ್ಯಾರ್ಥಿನಿಯರು ತುಂಡುಡುಗೆಯನ್ನು ಧರಿಸಿದ್ದರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಬ್ನಲ್ಲಿ ಅಸಭ್ಯವಾಗಿ ವರ್ತನೆ ಮಾಡಿದ್ದರು ಎಂದು ಬಜರಂಗದಳ ಆರೋಪ ಮಾಡಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications