'ಮೋದಿ ಕಪ್ಪು ಹಣವನ್ನು ಕರ್ನಾಟಕದ ಬಿಜೆಪಿಯವರಿಗೇನಾದರೂ ನೀಡಿದ್ದಾರಾ?'
ಮಂಗಳೂರು, ಫೆಬ್ರವರಿ 10: ಮುಖ್ಯ ಮಂತ್ರಿ ಕುಮಾರಸ್ವಾಮಿ ಬಿಡುಗಡೆಗೊಳಿಸಿರುವ ಆಡಿಯೋ ಟೇಪ್ನಲ್ಲಿರೋದು ಶೇ.100ರಷ್ಟು ಯಡಿಯೂರಪ್ಪ ಅವರದ್ದೇ ಧ್ವನಿ ಈ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿಯ ಸಂಸದೀಯ ಕಾರ್ಯರ್ಶಿ ಐವನ್ ಡಿಸೋಜ ಒತ್ತಾಯಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿಎಂ ಅವರು ಬಿಡುಗಡೆಗೊಳಿಸಿದ ಆಡಿಯೋ ಸಂಭಾಷಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರು ನ್ಯಾಯಾಧೀಶರನ್ನೂ ಬುಕ್ ಮಾಡಲಿದ್ದಾರೆ ಎಂದೂ ಯಡಿಯೂರಪ್ಪ ಹೇಳಿದ್ದಾರೆ. ಇದೊಂದು ಗಂಭೀರ ವಿಚಾರ . ಈ ಪ್ರಕರಣದ ಕುರಿತು ಸಿಬಿಐನಿಂದಲೇ ತನಿಖೆ ನಡೆಸಲಿ ಎಂದು ತಿಳಿಸಿದರು.
ಜೆಡಿಎಸ್ ಶಾಸಕ ನಾಗನಗೌಡ ಅವರ ಪುತ್ರ ಶರಣಗೌಡ ಅವರನ್ನು ದೇವದುರ್ಗಕ್ಕೆ ಕರೆಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ 10 ಕೋಟಿ ರೂಪಾಯಿ ಲಂಚದ ಆಮಿಷ ಒಡ್ಡಿರುವುದು, ವಿಧಾನಸಭಾಧ್ಯಕ್ಷರಿಗೆ 50 ಕೋಟಿ ರೂಪಾಯಿ ನೀಡಿದ್ದೇವೆ ಎಂಬ ಆರೋಪದ ಬಗ್ಗೆ ತನಿಖೆಯಾಗಲೇಬೇಕು.

ಬೇರೆಯವರ ಮೇಲೆ ಐಟಿ ದಾಳಿ ನಡೆಸಿ ಅಕ್ರಮ ದುಡ್ಡು ಕೂಡಿಟ್ಟಿದ್ದಾರೆ ಎನ್ನುವವರು ಈಗ ಬಿಜೆಪಿಯವರಿಗೆ ಇತರ ಪಕ್ಷಗಳ ಶಾಸಕರಿಗೆ ಇಷ್ಟುಂದು ಪ್ರಮಾಣದಲ್ಲಿ ಹಣ ನೀಡಿ ಖರೀದಿಸುವಷ್ಟು ಕೋಟಿಗಟ್ಟಲೆ ಹಣ ಎಲ್ಲಿಂದ ಬಂತು ? ಎಂದು ಪ್ರಶ್ನಿಸಿದ ಅವರು ಯಡಿಯೂರಪ್ಪ ಅವರು ಕಾಂಗ್ರೆಸ್-ಜೆಡಿಎಸ್- ಶಾಸಕರನ್ನು ಸೆಳೆದು ಕುದುರೆ ವ್ಯಾಪಾರದಲ್ಲಿ ತೊಡಗಿರುವುದು ಆಡಿಯೊ ಟೇಪ್ ಮೂಲಕ ಸಾಬೀತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು ಹಣವನ್ನು ಕರ್ನಾಟಕದ ಬಿಜೆಪಿಯವರಿಗೇನಾದರೂ ನೀಡಿದ್ದಾರಾ ಎಂದು ವ್ಯಂಗ್ಯವಾಡಿದರು.
ಬಿಜೆಪಿಯವರು ಬಜೆಟ್ ಅಂಗೀಕಾರ ಆಗದಂತೆ ನೋಡಿಕೊಳ್ಳುತ್ತೇವೆ ಎನ್ನುತ್ತಿದ್ದಾರೆ. ಅದೆಲ್ಲದಕ್ಕೂ ಕಾಂಗ್ರೆಸ್ ಸಿದ್ಧವಾಗಿದೆ. ಬಜೆಟ್ ಅಂಗೀಕಾರ ಆಗಿಯೇ ಆಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು .
ಹಲವು ವರ್ಷಗಳ ಬೇಡಿಕೆಯಾದ ಕ್ರೈಸ್ತ ಅಭಿವೃದ್ಧಿಗೆ ನಿಗಮ ಸ್ಥಾಪನೆಯ ಘೋಷಣೆಯನ್ನು ಬಜೆಟ್ ನಲ್ಲಿ ಮಾಡಲಾಗಿದೆ. ಅದಕ್ಕಾಗಿ 200 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಇನ್ನು ಮೂರು ತಿಂಗಳೊಳಗೆ ಕ್ರೈಸ್ತ ನಿಗಮದ ಆಡಳಿತ ಕಚೇರಿ ಸ್ಥಾಪನೆಯಾಗಲಿದೆ ಎಂದು ಡಿಸೋಜ ತಿಳಿಸಿದರು.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications