ಕಷ್ಟ ಕಾಲದಲ್ಲಿ ನೆರವಾದವರಿಗೆ ಗುರುತಿನ ಚೀಟಿ : ಫರ್ನಾಂಡಿಸ್
ಮಂಗಳೂರು, ಜನವರಿ 23 : ಅಪಘಾತ, ಹೆರಿಗೆ ಸೇರಿದಂತೆ ತುರ್ತು ಸಮಯದಲ್ಲಿ ಸಹಾಯ ಮಾಡಿ ಜನರ ಪ್ರಾಣ ಕಾಪಾಡಿದ ಆಟೋ ಹಾಗೂ ಟ್ಯಾಕ್ಸಿ ಚಾಲಕರ ಸೇವೆಯನ್ನು ಪರಿಗಣಿಸಿ ಅವರಿಗೆ ವಿಶೇಷ ಗುರುತು ಪತ್ರ ನೀಡಲು ಚಿಂತಿಸಲಾಗಿದೆ.
ಈ ಕುರಿತು ಸ್ವತಃ ತಾವೇ ಆಸಕ್ತಿ ತೆಗೆದುಕೊಂಡು ಕಾರ್ಮಿಕ ಸಚಿವಾಲಯದಲ್ಲಿ ಮಾತುಕತೆ ನಡೆಸುತ್ತೇನೆ ಎಂದು ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಭರವಸೆ ನೀಡಿದ್ದಾರೆ.
ಇದು ಮಾನವೀಯ ಗುಣವುಳ್ಳ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಖುಷಿ ನೀಡಿದ್ದಲ್ಲದೇ ಇನ್ನಷ್ಟು ಸಹಾಯ ಮಾಡುವಂತೆ ಪ್ರೇರೆಪಿಸಲಿದೆ ಎಂದರು.

ಕರಾವಳಿ ಜಿಲ್ಲೆಯಲ್ಲಿ ಹೆಚ್ಚಾಗಿ ಅಪಘಾತ ನಡೆದಾಗ ಸ್ಥಳಕ್ಕೆ ಭೇಟಿ ನೀಡಿ ಆಟೋ ಮತ್ತು ಟ್ಯಾಕ್ಸಿ ಚಾಲಕರು ಅವರ ಕಷ್ಟಗಳಿಗೆ ಸ್ಪಂದಿಸುತ್ತಾರೆ. ಇವರ ಸಮಯ ಪ್ರಜ್ಞೆಯ ಕೆಲಸದಿಂದಾಗಿ ಇಂದಿಗೂ ಸಾಕಷ್ಟು ಪ್ರಾಣಗಳು ಉಸಿರಾಡುತ್ತಿವೆ.
ಆದರೆ, ಇವನ್ನೆಲ್ಲಾ ಗುರುತಿಸಿದವರು ಬಹಳ ವಿರಳ. ಇದು ಯಾರಿಗೂ ಕಾಣದ ಸಮಾಜ ಸೇವೆ. ಹೀಗಾಗಿ ಅವರು ಮಾಡುವ ಸೇವಾ ಮನೋಭಾವವನ್ನು ಗಣನೆಗೆ ತೆಗೆದುಕೊಂಡು ಅಂತಹವರಿಗೆ ವಿಶೇಷ ಗುರುತು ಪತ್ರ ನೀಡುವಂತೆ ಕಾರ್ಮಿಕ ಸಚಿವಾಲಕ್ಕೆ ಮನವಿ ಮಾಡಲಾಗುವುದು ಎಂದು ಆಸ್ಕರ್ ಹೇಳಿಕೆ ತಿಳಿಸಿದ್ದಾರೆ
ಕರಾವಳಿಯಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರಲ್ಲದೇ ಇತರರು ಸಹ ತುರ್ತು ಪರಿಸ್ಥಿತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಅಂತವರನ್ನು ಗುರುತಿಸಿ ಗುರಿತಿನ ಚೀಟಿ ನೀಡಬೇಕೆಂಬ ಕೂಗುಗಳು ಸಹ ಕೇಳಿ ಬಂದಿವೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications