ಚಾರ್ಮಾಡಿಯಲ್ಲಿ ಬಾವಿಗೆ ಬಿದ್ದ ರಿಕ್ಷಾ: ಮಗು ದುರ್ಮರಣ
ಮಂಗಳೂರು, ಜನವರಿ 21 : ಆಟೋ ರಿಕ್ಷಾವೊಂದು ಬಾವಿಗೆ ಬಿದ್ದ ಪರಿಣಾಮ ರಿಕ್ಷಾದಲ್ಲಿದ್ದ ಮಗು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ನಡೆದಿದೆ.
ಕಲಂದರ್ ಎಂಬುವವರು ತಮ್ಮ ಆಟೋ ರಿಕ್ಷಾವನ್ನ ಚಾರ್ಮಾಡಿಯ ದೇವಸ್ಥಾನ ಬಳಿಯಿರುವ ಅಂಗನವಾಡಿ ಎದುರು ನಿಲ್ಲಿಸಿದ್ದರು. ಈ ರಿಕ್ಷಾದಲ್ಲಿ ನಾಲ್ಕು ವರ್ಷದ ಖಲೀಲ್ ಎಂಬ ಮಗು ಇತ್ತು. ಉಳಿದ ಮಕ್ಕಳನ್ನು ಕರೆ ತರಲು ಅವರು ತೆರಳಿದ್ದರು. ಮಗು ಆಟವಾಡುತ್ತಿದ್ದ ವೇಳೆ ಆಟೋ ರಿಕ್ಷಾ ನ್ಯೂಟ್ರಲ್ ಆಗಿ ಆವರಣದ ಪಕ್ಕದಲ್ಲಿದ್ದ ಬಾವಿಗೆ ಉರುಳಿ ಬಿದ್ದಿದೆ. ಬಿದ್ದ ರಭಸಕ್ಕೆ ಸ್ಠಳದಲ್ಲೇ ಮಗು ಸಾವನ್ನಪ್ಪಿದೆ.

ಈ ಕುರಿತು ಬೆಳ್ತಂಗಡಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.
ಇನ್ನು ಆಟೋ ಚಾಲಕ ತನ್ನ ತನ್ನ ಮಗುವಿಗೆ ತನ್ನ ಜೀವನ ನಿರ್ವಹಣೆಗಿದ್ದ ಆಟೋವೇ ಕಾರಣವಾಯಿತಲ್ಲ ಎಂದು ಸಂಕಟದಲ್ಲಿದ್ದಾರೆ. ಅಲ್ಲದೆ ಶಾಲಾ ವಲಯದಲ್ಲಿ ಆಟೋವನ್ನು ನಿಲ್ಲಿಸಿದ ಹಿನ್ನೆಲೆ ಪೊಲೀಸರು ವಿಚಾರಿಸಿ ಸಾಂತ್ವನ ಹೇಳಿದ್ದಾರೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications