ಕಟೀಲ್ಗಾಗಿ ಕಟೀಲು ದೇವಾಲಯಕ್ಕೆ ಪಾದಯಾತ್ರೆ ಮಾಡಿದ್ರು
2014ರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಾಗ ದಕ್ಷಿಣ ಕನ್ನಡದಲ್ಲಿ ಅವೀಕ್ಷಿತ್ ರೈ ಹೆಸರು ಪ್ರಸಿದ್ಧಿಯಾಗಿತ್ತು. ನಳೀನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡದಿಂದ ಮರು ಆಯ್ಕೆಯಾಗಲಿ ಎಂದು ಇವರು ಕಟೀಲು ದೇವಾಲಯಕ್ಕೆ ಪಾದಯಾತ್ರೆ ಮಾಡಿದ್ದರು.
ಸದ್ಯ, ನಳೀನ್ ಕುಮಾರ್ ಕಟೀಲ್ ಸಂಸದರಾಗಿ ಒಂದು ವರ್ಷ ಪೂರೈಸಿದ್ದು, ರಾಜ್ಯದಲ್ಲಿಯೇ ಉತ್ತಮ ಕೆಲಸ ಮಾಡಿದ ಸಂಸದ ಎಂಬ ಖ್ಯಾತಿ ಪಡೆದಿದ್ದಾರೆ. ಆದ್ದರಿಂದ, ಅವೀಕ್ಷಿತ್ ರೈ ಪುನಃ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಪಾದಯಾತ್ರೆ ಹೋಗಿಬಂದು, ಅದರ ಪ್ರಸಾದವನ್ನು ಸಂದಸರಿಗೆ ನೀಡಿದ್ದಾರೆ. [ನಳೀನ್ ಕುಮಾರ್ ಕಟೀಲ್ ದತ್ತು ಪಡೆದ ಗ್ರಾಮದ ಪರಿಚಯ]

ಜೂ.5ರಂದು ಮುಂಜಾನೆ 4.30ಕ್ಕೆ ಮಂಗಳೂರಿನಿಂದ ಪಾದಯಾತ್ರೆ ಆರಂಭಿಸಿದ ಅವೀಕ್ಷಿತ್ 10.30ರ ವೇಳೆಗೆ ಕಟೀಲು ಕ್ಷೇತ್ರವನ್ನು ತಲುಪಿದರು. ನಳೀನ್ ಕುಮಾರ್ ಕಟೀಲ್ ದೇಶದಲ್ಲಿಯೇ ಮೊದಲ ಸಂಸದರಾಗಬೇಕು ಎಂದು ವಿಶೇಷ ಪೂಜೆ ಮಾಡಿಸಿ, ಪ್ರಸಾದ ತಂದಿದ್ದಾರೆ.
ಹಿಂದೆಯೂ ಪಾದಯಾತ್ರೆ ಮಾಡಿದ್ದರು : ಮಂಗಳೂರಿನವರಾದ ಅವೀಕ್ಷಿತ್ ರೈ ಸಿ.ಎ. ಅಭ್ಯಾಸ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ನಳಿನ್ ಕುಮಾರ್ ಕಟೀಲ್ ಮರು ಆಯ್ಕೆಯಾದರೆ ಮಂಗಳೂರಿನಿಂದ ಕಟೀಲು ತನಕ ಪಾದಯಾತ್ರೆ ಮಾಡುತ್ತೇನೆ ಎಂದು 2014ರಲ್ಲಿ ಹರಕೆ ಹೊತ್ತಿದ್ದರು.

ನಳೀನ್ ಕುಮಾರ್ ಕಟೀಲ್ ಬಹುಮತದೊಂದಿಗೆ ಜಯಗಳಿಸಿದಾಗ ಪಾದಯಾತ್ರೆ ಮಾಡಿ, ಹರಕೆ ತೀರಿಸಿದ್ದರು. ಈಗ ಕಟೀಲ್ ಅವರ ನೇತೃತ್ವದಲ್ಲಿ ಹೆಚ್ಚು-ಹೆಚ್ಚು ಅಭಿವೃದ್ಧಿ ಕಾರ್ಯಗಳಾಗಬೇಕು. ದೇಶದಲ್ಲಿಯೇ ಅವರು ನಂಬರ್ ಒನ್ ಸಂಸದರಾಗಬೇಕು ಎಂದು ಪಾದಯಾತ್ರೆ ನಡೆಸಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications