ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಯೋಧ್ಯಾ ತೀರ್ಪು: ವೀರೇಂದ್ರ ಹೆಗ್ಗಡೆಯವರು ಹೇಳಿದ್ದೇನು?

|
Google Oneindia Kannada News

ಮಂಗಳೂರು, ನವೆಂಬರ್ 9: ಅಯೋಧ್ಯಾ ಭೂ ವಿವಾದದ ಕುರಿತು ಸುಪ್ರೀಂಕೋರ್ಟ್‌ನಿಂದ ಐತಿಹಾಸಿಕ ತೀರ್ಪು ಹೊರಬಿದ್ದಿರುವ ಹೊತ್ತಿನಲ್ಲೇ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸುಪ್ರೀಂಕೋರ್ಟ್ ತೀರ್ಪಿಗೆ ಎಲ್ಲರೂ ತಲೆ ಬಾಗಲೇ ಬೇಕು. ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಲಾಗಿದೆ. ಮುಸ್ಲಿಮರಿಗೆ ಪ್ರತ್ಯೇಕ ಮಸೀದಿ ನೀಡಲು ಜಾಗವನ್ನೂ ನೀಡಲಾಗಿದೆ. ಯಾರಿಗೂ ಅನ್ಯಾಯವಾಗಿಲ್ಲ ಎಂದು ಹೇಳಿದ್ದಾರೆ.

ಸುಪ್ರೀಂ ತೀರ್ಪು: ಅಯೋಧ್ಯಾ ಭೂ ವ್ಯಾಜ್ಯ ಅಂತ್ಯ, ಮಂದಿರ-ಮಸೀದಿಗೆ ಹಂಚಿಕೆಸುಪ್ರೀಂ ತೀರ್ಪು: ಅಯೋಧ್ಯಾ ಭೂ ವ್ಯಾಜ್ಯ ಅಂತ್ಯ, ಮಂದಿರ-ಮಸೀದಿಗೆ ಹಂಚಿಕೆ

ನಾವು ತಿನ್ನುವ ಅನ್ನ ಯಾರು ಬೆಳೆದಿದ್ದಾನೆಯೋ ಗೊತ್ತಿಲ್ಲ. ನಾವು ಸೇವಿಸುವ ತರಕಾರಿಯನ್ನು ಹಿಂದೂ ಬೆಳೆದಿರುವುದಾ, ಮುಸಲ್ಮಾನ ಅಥವಾ ಕ್ರೈಸ್ತ ಬೆಳೆದಿರುವುದಾ ಗೊತ್ತಿಲ್ಲ. ಅದೇ ರೀತಿ ಹಾಲು-ನೀರು ಬೆರೆತಂತೆ ಸಮಾಜ ಇರಬೇಕು.

Ayodhya verdict What did Veerendra Heggade Said

ತೀರ್ಪಿನಿಂದ ಯಾರೂ ಚಂಚಲ ಆಗಬಾರದು. ತೀರ್ಪಿನ ನಂತರ ಸಾಮರಸ್ಯದಿಂದ ಬದುಕಬೇಕು. ಈ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳೋಣ ಎಂದು ಹೆಗ್ಗಡೆಯವರು ರಾಷ್ಟ್ರದ ಜನತೆಯಲ್ಲಿ ಮನವಿ ಮಾಡಿದರು.

ಅಯೋಧ್ಯೆ ತೀರ್ಪು: ಮೋದಿ ಟ್ವೀಟ್ ನಲ್ಲಿ ರಾಮಭಕ್ತಿ, ರಹೀಮಭಕ್ತಿಅಯೋಧ್ಯೆ ತೀರ್ಪು: ಮೋದಿ ಟ್ವೀಟ್ ನಲ್ಲಿ ರಾಮಭಕ್ತಿ, ರಹೀಮಭಕ್ತಿ

ಮುಸ್ಲಿಮರಿಗೆ 5 ಎಕರೆ ಪರ್ಯಾಯ ಭೂಮಿ ನೀಡಬೇಕು. ದೇವಸ್ಥಾನ ನಿರ್ಮಾಣಕ್ಕೆ 3 ತಿಂಗಳಲ್ಲಿ ಸಮಿತಿ ರಚಿಸಬೇಕು. ರಾಮ ಮಂದಿರ ನಿರ್ಮಾಣ ಹೊಣೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ದೇವಸ್ಥಾನ ನಿರ್ಮಾಣಕ್ಕೆ ಟ್ರಸ್ಟ್‌ ಸ್ಥಾಪಿಸಬೇಕು. ವಿವಾದಿತ 2.77 ಎಕರೆಯಲ್ಲಿ ಕೇವಲ ರಾಮಲಲ್ಲಾಗಷ್ಟೇ ಅಧಿಕಾರವಿದೆ.

English summary
Everyone should bow to the Supreme Court Verdict. Hindus are allowed to worship. Muslims have been given space to provide a separate mosque Said Dharmastala Dharmadhikari Veerendra Heggade.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X