ಪೋಷಕರ ಬೇಜವಾಬ್ದಾರಿತನ: ಸ್ವಿಮ್ಮಿಂಗ್ ಪೂಲ್ ಗೆ ಬಿದ್ದ ಮಗು, ಮುಂದೇನಾಯ್ತು?
ಮಂಗಳೂರು, ಜನವರಿ 01: ಪೋಷಕರ ಬೇಜವಾಬ್ದಾರಿತನಕ್ಕೆ ಮಗು ನೀರಿಗೆ ಬಿದ್ದು, ಆನಂತರ ಪಾರಾದ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪುತ್ತೂರಿನ ಕುಂಬ್ರದಲ್ಲಿ ರೆಸಾರ್ಟ್ ಒಂದರ ಸ್ವಿಮ್ಮಿಂಗ್ ಪೂಲ್ ಬಳಿ ಮಗುವನ್ನು ಬಿಟ್ಟು ಪೋಷಕರು ಬೇಜವಾಬ್ದಾರಿ ಮೆರೆದಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪಾರ್ಟಿಯಲ್ಲಿ ಭಾಗವಹಿಸಿದ್ದ ಪೋಷಕರು ಮೊಬೈಲ್ ನಲ್ಲಿ ತಲ್ಲಿನರಾಗಿದ್ದ ಸಂದರ್ಭದಲ್ಲಿ ಹಠಾತ್ತನೆ ನೀರಿಗೆ ಬಿದ್ದ ನಾಲ್ಕು ವರ್ಷ ಪ್ರಾಯದ ಮಗು ಸುಮಾರು 2 ನಿಮಿಷಗಳ ಕಾಲ ನೀರಿನಲ್ಲಿ ಒದ್ದಾಟ ನಡೆಸಿದೆ.
ಇದನ್ನು ಗಮನಿಸಿದ ಮಗುವಿನ ತಾಯಿ ಬೊಬ್ಬೆ ಹೊಡೆದ ಪರಿಣಾಮ ಮಗುವನ್ನು ರಕ್ಷಿಸಲಾಗಿದೆ . ಮೂರು ಬಾರಿ ಮಗು ಮುಳುಗಿ ಮೇಲೇಳುತ್ತ ಸಹಾಯಕ್ಕೆ ಕೈಚಾಚುತ್ತಿರುವುದನ್ನು ಮಗುವಿನ ತಾಯಿ ಗಮನಿಸಿದ್ದಾರೆ. ಕೂಡಲೇ ಅಲ್ಲಿದ್ದ ವ್ಯಕ್ತಿಯೋರ್ವ ನೀರಿಗೆ ಧುಮುಕಿ ಮಗುವನ್ನು ರಕ್ಷಿಸಿದ್ದಾರೆ.

ಮಗು ಸಾಕಷ್ಟು ನೀರು ಕುಡಿದಿದ್ದ ಕಾರಣ ಅಸ್ವಸ್ಥಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಘಟನೆ ನಡೆಯುವ ಸಂದರ್ಭದಲ್ಲಿ ಸ್ವಿಮಿಂಗ್ ಪೂಲ್ ನಲ್ಲಿ ಹಲವು ಮಂದಿ ಇದ್ದರೂ ನೀರಿಗೆ ಬಿದ್ದ ಮಗುವಿನ ಒದ್ದಾಟ ಯಾರೂ ಗಮನಿಸದೇ ಇರುವುದು ಬೇಸರದ ಸಂಗತಿ.

ಪುತ್ತೂರಿನ ಕುಂಬ್ರ ಪರ್ಲಡ್ಕ ಬಿಗ್ರೋಸ್ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ಬಳಿ ಡಿಸೆಂಬರ್ 26 ರಂದು ಈ ಘಟನೆ ನಡೆದಿದ್ದ, ಇದೀಗ ಸಿಸಿಟಿವಿಯ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications