ಮಹಿಳೆಯರ ಮೊಗದಲ್ಲಿ ನಗು ತರದ ಮಲ್ಲಿಗೆ
ಮಂಗಳೂರು, ಜುಲೈ 22 : ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಲ್ಲಿಗೆ ಬೆಳೆ ಕಡಿಮೆಯಾಗಿದೆ. ಇದರಿಂದಾಗಿ ದರ ಏರಿಕೆಯಾಗಿದೆ, ಆದರೆ, ಇದರಿಂದ ಬೆಳೆಗಾರರಿಗೆ ಯಾವುದೇ ಲಾಭವಾಗುತ್ತಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ.
ಮಲ್ಲಿಗೆ ಕರಾವಳಿ ಜನರ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು ಕರಾವಳಿ ಮಣ್ಣಿನಲ್ಲಿ ಬೆಳೆಯುವ ಮಲ್ಲಿಗೆಯನ್ನು ಶಂಕರಪುರ ಮಲ್ಲಿಗೆ ಎಂದು ಕರೆಯಲಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅಂದಾಜು 371 ಹೆಕ್ಟೇರ್ ಭೂಮಿಯಲ್ಲಿ 16,000ಕ್ಕೂ ಅಧಿಕ ಮಂದಿ ಮಲ್ಲಿಗೆ ಕೃಷಿ ಮಾಡುತ್ತಾರೆ.[ಮಾರುಕಟ್ಟೆಯಲ್ಲಿ ಕುಸಿದ ಶಂಕರಪುರ ಮಲ್ಲಿಗೆ ದರ]

ಶಂಕರಪುರ ಮಲ್ಲಿಗೆಯ ದರ ಅಟ್ಟಿಗೆ ರೂ. 820ಗಳ ವರೆಗೆ ಏರಿಕೆಯಾಗಿದ್ದು ಮಲ್ಲಿಗೆ ಹೂವಿದ್ದವರ ಮೊಗದಲ್ಲಿ ಹೂ ನಗೆಮೂಡಿಸಿದೆ. ಸಾಮಾನ್ಯವಾಗಿ ಆಷಾಢ ಮಾಸದಲ್ಲಿ ದರ ಕಡಿಮೆಯಾಗುವುದರಿಂದ ನಿರಂತರ ಮಲ್ಲಿಗೆ ಮೂಡಿಗೇರಿಸಬಹುದೆಂಬ ನಿರೀಕ್ಷೆ ಹೊತ್ತಿದ್ದ ಮಹಿಳೆಯರ ಮೊಗದಲ್ಲಿ ನಿರಾಶೆ ಮೂಡಿದೆ.[ಪುಷ್ಪಲೋಕದ ವಿಸ್ಮಯ ಬ್ರಹ್ಮಕಮಲ]
ನಮ್ಮ ಗಿಡಗಳಲ್ಲಿ ಮಲ್ಲಿಗೆ ಹೂವು ಸಿಗುತ್ತಿಲ್ಲ. ಸೀಸನ್ನಲ್ಲಿ ನಾವು ಪ್ರತಿದಿನ 50 ಚೆಂಡು ಮಲ್ಲಿಗೆ ಮಾರುಕಟ್ಟೆಗೆ ನೀಡುತ್ತಿದೆವು. ಈಗ ದಿನಕ್ಕೆ ಕೇವಲ 100 ಮೊಗ್ಗು ಮಾತ್ರ ನೀಡುತ್ತಿದ್ದೇವೆ. ಕೆಲವೊಮ್ಮೆ ಅದು ಕೂಡಾ ಸಿಗುವುದಿಲ್ಲ ಇದರಿಂದ ಮಾರುಕಟ್ಟೆಯಲ್ಲೂ ಮಲ್ಲಿಗೆ ಹೂ ಸಿಗುತ್ತಿಲ್ಲ ಎನ್ನುತ್ತಾರೆ ಮಲ್ಲಿಗೆ ಬೆಳೆಗಾರರು.
ವಿವಿಧ ಮಲ್ಲಿಗೆಗೆ ವಿವಿಧ ಹೆಸರು : ಕುಂದಾಪುರ ಪ್ರದೇಶದಲ್ಲಿ ಬೆಳೆಯುವ ಮಲ್ಲಿಗೆ ಹೂಗಳಿಗೆ ಭಟ್ಕಳ ಮಲ್ಲಿಗೆ ಎಂದು ಕರೆಯುತ್ತಾರೆ. ಶಂಕರಪುರ, ಶಿರ್ವ ಪ್ರದೇಶದಲ್ಲಿ ಬೆಳೆಯನ್ನು ಶಂಕರಪುರ ಮಲ್ಲಿಗೆ ಎಂದೂ, ಪುತ್ತೂರು, ಸುಳ್ಯ ಭಾಗದಲ್ಲಿ ಬೆಳೆಯುವ ಮಲ್ಲಿಗೆಯನ್ನು ಮಂಗಳೂರು ಮಲ್ಲಿಗೆ ಎಂದು ಕರೆಯುತ್ತಾರೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications