ಅಜ್ಜಿಯನ್ನು ನೋಡಲು ಮಂಗಳೂರಿಗೆ ಬಂದ ಬಹರೇನಿನ ಸಚಿವ
ಮಂಗಳೂರು, ಡಿಸೆಂಬರ್ 29 : ಬಹರೇನ್ ವಿದೇಶಾಂಗ ಸಚಿವ ಖಾಲಿದ್ ಬಿನ್ ಅಹಮ್ಮದ್ ಸದ್ದಿಲ್ಲದೇ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಚಿಕ್ಕಂದಿನಲ್ಲಿ ಸಾಕಿ ಸಲುಹಿದ ಅಜ್ಜಿಯನ್ನು ಭೇಟಿ ಮಾಡಲು ಅವರು ಜಿಲ್ಲೆಗೆ ಆಗಮಿಸಿದ್ದೇನೆ ಎಂದು ಅವರೇ ಇಂಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಬಹರೇನ್ ಸೌದಿ ಅರೇಬಿಯಾ ಬಳಿಯಿರುವ ರಾಷ್ಟವಾಗಿದ್ದು ಕತಾರಿನ ಸಮೀಪ ಇದೆ, ಇಲ್ಲಿ ಗಗನ ಚುಂಬಿ ಕಟ್ಟಡಗಳು, ಸಮುದ್ರ ತೀರ ಮತ್ತು ಮುತ್ತರತ್ನಗಳ ವ್ಯಾಪಾರಕ್ಕೆ ಪ್ರಸಿದ್ದಿ ಪಡೆದಿದೆ ಅಲ್ಲಿಂದ ಯಾಕಪ್ಪ ನಮ್ಮ ಮಂಗಳೂರಿಗೆ ಬಂದದ್ದು ಎಂದು ಕೊಳ್ಳುತ್ತೀರಾ ? ಕರ್ನಾಟಕದ ಮಂಗಳೂರಿನಲ್ಲಿ ಬೆಳೆದಿದ್ದ ಖಾಲಿದ್ ಬಿನ್ ಅಹಮದ್ ಅಲ್ಲಿ ತಮ್ಮ ಹೆಸರು, ಅಂತಸ್ತು ಗಳಿಸಿ ದೊಡ್ಡ ವ್ಯಕ್ತಿಯಾಗಿ ಅಲ್ಲಿನ ವಿದೇಶಾಂಗ ಸಚಿವರೂ ಆಗಿದ್ದಾರೆ ಅವರು ತಮ್ಮ ಬಾಲ್ಯದ ದಿನಗಳನ್ನು ಮರೆಯದೇ ತನ್ನನ್ನು ಸಾಕಿದ್ದ ಅಜ್ಜಿಯನ್ನು ಭೇಟಿಯಾಗಲು ಬಂದಿದ್ದೇನೆ ಎಂದು ತಿಳಿಸಿದ್ದಾರೆ.[ಬಹರೇನ್ನಲ್ಲಿ ಬಿಲ್ಲವರ ದಶಮಾನೋತ್ಸವ ಸಂಭ್ರಮ]

ಅಜ್ಜಿಯನ್ನು ಭೇಟಿ ಮಾಡಲು ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾರೆ ಆದರೆ ಅವರು ಯಾವ ಸ್ಥಳದಲ್ಲಿದ್ದೇವೆ ಎಂದು ಹೇಳಿಕೊಂಡಿಲ್ಲ. ಮಂಗಳೂರಿನ ನಿವಾಸಿ 93 ವರ್ಷದ ದಾದಿ ಕರ್ಮಿನಾ ಮಥಿಯಾಸ್ ಎಂಬುವವರನ್ನ ಭೇಟಿ ಮಾಡಿದ ಫೋಟೋವನ್ನು ಬಹರೇನ್ ಸಚಿವ ತನ್ನ ಇನ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಹೀಗಂತ ಬರೆದುಕೊಂಡಿದ್ದಾರೆ.[ಬಹರೇನ್ ಉದ್ಯಮಿಗಳ ಜೊತೆ ಸಿಎಂ ಸಭೆ]

'ನನ್ನನ್ನ ಬಾಲ್ಯದಲ್ಲಿ ಮಗನಂತೆ ನೋಡಿದ ನನ್ನ ದಾದಿಯ ಜೊತೆ ನಾನು ಮಂಗಳೂರಿನಲ್ಲಿದ್ದೇನೆ. ಬಾಲ್ಯದಲ್ಲಿ ನಮಗೆ ಯಾರು ಸಹಾಯ ಮಾಡುತ್ತಾರೋ ಹಾಗೂ ಯಾರು ನಮ್ಮ ಜೀವನದ ಪ್ರಮುಖ ಭಾಗವಾಗುತ್ತಾರೋ ಅಂತಹ ವ್ಯಕ್ತಿಗಳನ್ನು ನಾವು ಮರೆಯಬಾರದು ಎಂದಿದ್ದಾರೆ.

ಇಷ್ಟೇ ಅಲ್ಲ, ಈ ಅಜ್ಜಿ ತನ್ನ 35 ನೇ ವರ್ಷದಲ್ಲಿ ಮಂಗಳೂರಿನಿಂದ ಬಹರೇನ್ ಗೆ ಹೋಗಿದ್ದರಂತೆ. ಅಲ್ಲದೇ ಬಹರೇನ್ ಸಚಿವರ ಅಣ್ಣ ಅಬ್ದುಲ್ಲಾ ಹಾಗೂ ಸಹೋದರಿಯರಾದ ಮಾಹಿಯಾ ಮತ್ತು ಲುಲುವಾ ಅವರನ್ನು ತಾಯಿ ಪ್ರೀತಿ ನೀಡಿ ಸಾಕಿದ್ದಾರಂತೆ. ಈ ಅಜ್ಜಿಗೆ ದೇವರು ಉತ್ತಮ ಆರೋಗ್ಯ ಮತ್ತು ಆಯುಷ್ಯ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications