ಬಪ್ಪನಾಡು ದುರ್ಗಾ ಪರಮೇಶ್ವರಿ ದೇಗುಲದಲ್ಲಿ ಬಾಹುಬಲಿಯ 'ದೇವಸೇನಾ' ಅನುಷ್ಕಾ
ಬಾಹುಬಲಿ ಚಿತ್ರದ ನಾಯಕಿ, ಕರ್ನಾಟಕದ ಪುತ್ತೂರು ಮೂಲದ ಅನುಷ್ಕಾ ಶೆಟ್ಟಿ ಶನಿವಾರ ಬಪ್ಪನಾಡು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ದರು. ಅವರ ಜತೆಗೆ ತಾಯಿ ಪ್ರಫುಲ್ ಶೆಟ್ಟಿ ಹಾಗೂ ಮುತ್ತಪ್ಪ ರೈ ಇದ್ದರು
ಮಂಗಳೂರು, ಮೇ 20: ತೆಲುಗಿನ ಸಿನಿಮಾ ಬಾಹುಬಲಿ ಎರಡನೇ ಭಾಗದ ಯಶಸ್ಸಿನಲ್ಲಿ ಸಂಭ್ರಮಿಸುತ್ತಿರುವ ಚಿತ್ರದ ನಾಯಕಿ ಅನುಷ್ಕಾ ಶೆಟ್ಟಿ ಶನಿವಾರ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ದರು. ತುಂಬ ಸರಳವಾದ ದಿರಿಸು ತೊಟ್ಟಿದ್ದ ಆಕೆಯ ಜತೆಗೆ ತಾಯಿ ಪ್ರಫುಲಾ ಶೆಟ್ಟಿ, ಜಯ ಕರ್ನಾಟಕ ಸಂಘಟನೆಯ ಮುತ್ತಪ್ಪ ರೈ ಇದ್ದರು.
ದೇವರಿಗೆ ಪೂಜೆ ಸಲ್ಲಿಸಿ, ಎಲ್ಲ ಧಾರ್ಮಿಕ ವಿಧಿ-ವಿಧಾನಗಳನ್ನು ಪೂರೈಸಿದ ಬಳಿಕ ದೇವಾಲಯ ಅಡಳಿತ ಮಂಡಳಿಯಿಂದ ಅನುಷ್ಕಾ ಶೆಟ್ಟಿ ಅವರಿಗೆ ಸನ್ಮಾನ ಮಾಡಲಾಯಿತು. ಮೊದಲಿಗೆ ಮಾಧ್ಯಮಗಳ ಜತೆಗೆ ಮಾತನಾಡಲು ನಿರಾಕರಿಸಿದ ಅನುಷ್ಕಾ ಶೆಟ್ಟಿ, ಸಿನಿಮಾದ ಯಶಸ್ಸಿನಿಂದ ತುಂಬ ಖುಷಿಯಾಗಿದೆ. ಆದ್ದರಿಂದಲೇ ವಿವಿಧ ದೇವಾಲಯಗಳಿಗೆ ಭಕ್ತಿ ಸಮರ್ಪಿಸುವುದಕ್ಕೆ ತೆರಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.[ಬಾಹುಬಲಿ ಚಿತ್ರಕ್ಕೆ 200 ಕೋಟಿ ರು. ಇನ್ಶುರೆನ್ಸ್]

ಮೇ 19ರಂದು ಅನುಷ್ಕಾ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದರು. ಇಲ್ಲಿ ಪೂಜೆ ಸಲ್ಲಿಸಿದ ನಂತರ ಹೈದರಾಬಾದ್ ಗೆ ತೆರಳಿದರು. ಬಾಹುಬಲಿ ಸಿನಿಮಾದ ಎರಡನೇ ಭಾಗವು ಬಿಡುಗಡೆಯಾದ ಎಲ್ಲ ಕಡೆ ಅದ್ಭುತವಾದ ಪ್ರದರ್ಶನವನ್ನು ಕಾಣುತ್ತಿದೆ. ಈಗಾಗಲೇ ನೂರಾರು ಕೋಟಿ ರುಪಾಯಿ ಆದಾಯ ಮಾಡುವ ಮೂಲಕ ದಾಖಲೆ ಸ್ಥಾಪಿಸಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications