ಬಾಹುಬಲಿ ಮಹಾಮಜ್ಜನ ನೋಡಲು ರಾಜ್ಯದೆಲ್ಲೆಡೆಯಿಂದ ಬಂದ ಭಕ್ತರ ದಂಡು
ಮಂಗಳೂರು, ಫೆಬ್ರವರಿ 17: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಗೆ ಮಹಾಮಜ್ಜನ ಆರಂಭವಾಗಿದೆ. ಶನಿವಾರದಿಂದ ಮೂರು ದಿನಗಳ ಕಾಲ ಭಗವಾನ್ ಬಾಹುಬಲಿಯ ಮಹಾಮಜ್ಜನ ನಡೆಯಲಿದೆ. ತ್ಯಾಗ ಮೂರ್ತಿಯ ಮಹಾಮಜ್ಜನ ಕಣ್ತುಂಬಿಸಿಕೊಳ್ಳಲೆಂದೇ ಸಹಸ್ರಾರು ಭಕ್ತರು ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದಾರೆ.
ಇಂದು ಮೊದಲ ದಿನ ಮಹಾಮಸ್ತಕಾಭಿಷೇಕದಲ್ಲಿ ವಿವಿಧ ದ್ರವ್ಯಗಳ ಮೂಲಕ ಭಗವಾನ್ ಬಾಹುಬಲಿಯನ್ನು ಪೂಜಿಸಲಾಯಿತು.
ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ವಿರಾಜಮಾನನಾಗಿರುವ ಭಗವಾನ್ ಬಾಹುಬಲಿಗೆ ನಾಲ್ಕನೇ ಮಹಾಮಸ್ತಕಾಭಿಷೇಕ ನಡೆಯುತ್ತಿದ್ದು, ಕಳೆದ 8 ದಿನಗಳಿಂದ ಪಂಚಮಹಾವೈಭವ ಹಾಗೂ ವಿವಿಧ ಕಾರ್ಯಕ್ರಮಗಳ ಬಳಿಕ ಇಂದು ಮಹಾಮಜ್ಜನ ಆರಂಭವಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಹಾಗೂ ಕುಟುಂಬಿಕರು ಬಾಹುಬಲಿಗೆ ಜಲಾಭಿಷೇಕ ಮಾಡುವ ಮೂಲಕ ಮಹಾಮಜ್ಜನಕ್ಕೆ ಚಾಲನೆ ದೊರೆಯಿತು.
ಸಂಪ್ರದಾಯದಂತೆ ಹದಿನಾರು ನದಿಗಳಿಂದ ತರಲಾದ ನೀರನ್ನು 1008 ಕಲಶಗಳ ಮೂಲಕ ಜೈನ ಸಮುದಾಯದ ಭಕ್ತರು ಅಭಿಷೇಕ ನಡೆಸಿದರು. ಬಳಿಕ ಕ್ಷೀರಾಭಿಷೇಕ, ಹರಿತ, ಶ್ರೀಗಂಧ, ಅಷ್ಟಚಂದನ, ಚಂದನ, ಸೀಯಾಳ, ಕಬ್ಬಿನ ಹಾಲು, ಶ್ವೇತ ಕಲ್ಕ ಚೂರ್ಣ, ಶಾಂತಿಧಾರ ಒಳಗೊಂಡಿರುವ ದ್ರವ್ಯಾಭಿಷೇಕ ನಡೆಸಲಾಯಿತು.ಇನ್ನು ಮಜ್ಜನಕ್ಕೆ ಬೇಕಾದ ದ್ರವ್ಯಗಳನ್ನು ಬಾಹುಬಲಿ ಬೆಟ್ಟದಲ್ಲಿಯೇ ಸಿದ್ಧಪಡಿಸಲಾಯಿತು.

5 ಸಾವಿರ ಜನ ಕುಳಿತು ಅಭಿಷೇಕ ವೀಕ್ಷಿಸಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿತ್ತು. ಮಹಾಮಜ್ಜನಕ್ಕೂ ಮುನ್ನಾ ಭಗವಾನ್ ಬಾಹುಬಲಿಗೆ ಪೂಜೆ ಹಾಗೂ ಆಗ್ರೋದಕ ಮೆರವಣಿಗೆ ನಡೆಯಿತು. ಪ್ರತಿ ಅಭಿಷೇಕದ ನಡುವೆ ಭಕ್ತಿಗೀತೆಗಳು ಕೂಡಾ ಸರಾಗವಾಗಿ ನಡೆಯುತ್ತಿತ್ತು. ಪ್ರತಿ ಹನ್ನೆರಡು ವರುಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಕಣ್ತುಂಬಿಸಿಕೊಳ್ಳಲು ದೇಶ ವಿದೇಶಗಳಿಂದಲೂ ಪ್ರವಾಸಿಗರು ಆಗಮಿಸಿದ್ದರು.
ಇನ್ನೆರೆಡು ದಿನಗಳ ಕಾಲ ಮಹಾಮಸ್ತಕಾಭಿಷೇಕ ನಡೆಯಲಿದ್ದು, ದೇಶದ ಮೂಲೆ ಮೂಲೆಗಳಿಂದ ಭಕ್ತರು ವಿರಾಟ್ ವಿರಾಗಿ ಬಾಹುಬಲಿಗೆ ಅಭಿಷೇಕ ನಡೆಸಲು ಕಾತರರಾಗಿದ್ದಾರೆ. ಈ ಮೂಲಕ ಸರ್ವ ಪರಿತ್ಯಾಗಿ ಬಾಹುಬಲಿಯ ಕೃಪೆಗೆ ಪಾತ್ರರಾಗಲು ಭಕ್ತರು ಉತ್ಸುಕರಾಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications