Get Updates
Get notified of breaking news, exclusive insights, and must-see stories!

ನಿಮ್ಮ ನಾಲಗೆಯನ್ನು ಎಕ್ಕಡ ರೀತಿ ಬಳಸಿಕೊಳ್ಳಬೇಡಿ: ಆರ್.ಅಶೋಕ್ ವಿರುದ್ಧ ಭಜರಂಗದಳ ಕೆಂಡಾಮಂಡಲ

ಮಂಗಳೂರು, ಫೆಬ್ರವರಿ 21: ವಿಧಾನಮಂಡಲ ಅಧಿವೇಶನಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಂಗಳೂರಿನ ಪಬ್ ಹಾಗೂ ಚರ್ಚ್ ದಾಳಿ ಘಟನೆಯ ಬಗ್ಗೆ ಹೇಳಿಕೆ ವಿರುದ್ಧ ಬಜರಂಗದಳ ಕಿಡಿಕಾರಿದೆ.

ನಾನು ಗೃಹ ಸಚಿವನಾಗಿದ್ದಾಗ ಮಂಗಳೂರಿನ ಘಟನೆಯ ಸಂದರ್ಭದಲ್ಲಿ ಎಷ್ಟೇ ಒತ್ತಡವಿದ್ದರೂ ಮುಲಾಜಿಲ್ಲದೇ ಒದ್ದು ಒಳಗೆ ಹಾಕಿದ್ದೆ ಎಂಬ ಅಶೋಕ್ ಹೇಳಿಕೆಗೆ ದಕ್ಷಿಣ ಕನ್ನಡ ಜಿಲ್ಲೆ ಭಜರಂಗದಳ ಸಹ ಸಂಯೋಜಕ ಪುನೀತ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Bajrang Dal Activists Lashes Out At BJP Leader R. Ashok

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಭಜರಂಗದಳ ಸಹ ಸಂಯೋಜಕ ಪುನೀತ್ ಅತ್ತಾವರ, ಬಿಜೆಪಿ ನಾಯಕ ಆರ್‌. ಅಶೋಕ್ ಅವರನ್ನು ಅಡ್ಜೆಸ್ಟ್‌ಮೆಂಟ್ ಅಶೋಕ್ ಎಂದು ಕಿಡಿಕಾರಿದ್ದಾರೆ.

ಪುನೀತ್ ಅತ್ತಾವರ ಫೇಸ್‌ಬುಕ್‌ ಪೋಸ್ಟ್‌ನಲ್ಲಿರುವುದೇನು..?

ನೀವು ಆರ್ ಅಶೋಕ್ ಅಲ್ಲ..ನಿಮ್ಮ ಹೆಸರನ್ನು ಎ. ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜೆಸ್ಟ್‌ಮೆಂಟ್ ಅಶೋಕ್ ಅವರೇ..!!

ನಿಮ್ಮ ನಾಲಗೆಯನ್ನು ನಾಲಗೆ ರೀತಿಯನ್ನು ಬಳಸಿ ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜೆಸ್ಟ್‌ಮೆಂಟ್ ರಾಜಕಾರಣ ಎಂಬ ಗೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ. ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ.

ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ. ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳಿ ಎಂದು ಪುನೀತ್ ಅತ್ತಾವರ ಆಗ್ರಹಿಸಿದ್ದಾರೆ.

ಇನ್ನು ಪ್ರತಿಪ ಕ್ಷನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ. ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಒಂದಾ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+