ಮಂಗಳೂರು: ನಾಗಮೂರ್ತಿಗಳಿಗೆ ಅಪಚಾರ; ಕೋಡಿಕಲ್ ಬಂದ್ ಮಾಡಿ ಪ್ರತಿಭಟನೆ
ಮಂಗಳೂರು, ನವೆಂಬರ್ 15: ಮಂಗಳೂರು ನಗರ ಹೊರವಲಯದ ಕೋಡಿಕಲ್ ಪ್ರದೇಶದಲ್ಲಿ ನಾಗದೇವರ ಕಲ್ಲಿಗೆ ಭಗ್ನಗೊಳಿಸಿದ ಪ್ರಕರಣವನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ ಮತ್ತು ಸ್ಥಳೀಯರು ಕೋಡಿಕಲ್ ಬಂದ್ ಮಾಡಿ ಪ್ರತಿಭಟಿಸಲಾಯಿತು.
ನವೆಂಬರ್ 13ರಂದು ಕೋಡಿಕಲ್ ಪ್ರದೇಶದಲ್ಲಿರುವ ನಾಗಬ್ರಹ್ಮ ದೇವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು ನಾಗದೇವರ ಮೂರ್ತಿಯನ್ನು ಭಗ್ನಗೊಳಿಸಿದ್ದರು. ಈ ಘಟನೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಪೊಲೀಸರಿಗೆ ಆರೋಪಿಗಳ ಬಂಧನ ಮಾಡುವಂತೆ 48 ಗಂಟೆಗಳ ಗಡುವು ನೀಡಿದ್ದರು. ಆದರೆ ಪೊಲೀಸರು ಇನ್ನೂ ಆರೋಪಿಗಳು ಬಂಧನ ಮಾಡದ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕೋಡಿಕಲ್ ಬಂದ್ಗೆ ಕರೆ ನೀಡಿದ್ದರು.
ಈ ಹಿನ್ನಲೆಯಲ್ಲಿ ಕೋಡಿಕಲ್ ಪ್ರದೇಶದ ಜನರು ಅಂಗಡಿ- ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಕೋಡಿಕಲ್ ಬಂದ್ ಹಿನ್ನಲೆಯಲ್ಲಿ ಕೋಡಿಕಲ್ ಸಂಪರ್ಕಿಸುವ ರಸ್ತೆಗಳನ್ನು ಹಿಂದೂ ಸಂಘಟನೆ ಕಾರ್ಯಕರ್ತರು ರಸ್ತೆ ತಡೆ ಮಾಡಿದ್ದಾರೆ.

ಕೋಡಿಕಲ್ ಮೈದಾನದಲ್ಲಿ ಘಟನೆಯನ್ನು ಖಂಡಿಸಿ ಪ್ರತಿಭಟನಾ ಸಭೆ ನಡೆದಿದ್ದು, ಸಭೆಯಲ್ಲಿ ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಗುರುಪುರ ವಜ್ರದೇಹಿ ಮಠದ ಶ್ರೀರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ಹಿಂದೂ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದಾರೆ.
ಈ ವೇಳೆ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಎಚ್ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಒಂದೂವರೆ ತಿಂಗಳಿನಲ್ಲಿ ಮಂಗಳೂರಿನ ಮೂರು ಪ್ರದೇಶದಲ್ಲಿ ನಾಗಬನಕ್ಕೆ ನುಗ್ಗಿ ನಾಗ ದೇವರ ಕಲ್ಲುಗಳನ್ನು ಭಗ್ನ ಮಾಡಿದ್ದಾರೆ. ಬೈಕಂಪಾಡಿ, ಕುಳೂರಿನ ಬಳಿಕ ಈಗ ಕೋಡಿಕಲ್ನಲ್ಲಿ ನಾಗ ದೇವರ ಕಲ್ಲುಗಳ ಮೇಲೆ ದಾಳಿ ಮಾಡಲಾಗಿದೆ. ಪೊಲೀಸರು ಈ ಹಿಂದಿನ ಘಟನೆಗಳಲ್ಲಿ ಓರ್ವನನ್ನು ಬಂಧನ ಮಾಡಿ ನಂತರ ಆತ ಮಾನಸಿಕ ಅಸ್ವಸ್ಥನೆಂದು ಹೇಳಿದ್ದಾರೆ. ಮಾನಸಿಕ ಅಸ್ವಸ್ಥ ಕೇವಲ ನಾಗ ದೇವರ ಮೂರ್ತಿಗಳನ್ನೇ ಯಾಕೆ ಕೆಡವುತ್ತಾನೆ. ಆತನಿಗೆ ಬೇರೆ ಧರ್ಮದ ಕೇಂದ್ರಗಳು ಕಾಣೋದಿಲ್ವೇ? ಇದರ ಹಿಂದೆ ವ್ಯವಸ್ಥಿತ ತಂಡ ಇದೆ ಎಂದು ಆರೋಪಿಸಿದ್ದಾರೆ.

ಮಂಗಳೂರು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಆರೋಪಿಗಳ ಪತ್ತೆಗೆ ಸ್ವಲ್ಪ ದಿನ ಸಮಯಾವಕಾಶ ಕೇಳಿದ್ದಾರೆ. ಆರೋಪಿಗಳನ್ನು ಹಿಡಿಯುವ ಬದಲು ಅವರನ್ನು ನೇರ ಎನ್ಕೌಂಟರ್ ಮಾಡಿ. ಯಾರ ಯಾರ ಮೇಲೋ ಬುಲೆಟ್ ಪ್ರಯೋಗ ಮಾಡುವ ಬದಲು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವವರ ಮೇಲೆ ಮಾಡಿ, ಆಗ ನಿಯಂತ್ರಣಕ್ಕೆ ಬರುತ್ತದೆ ಎಂದು ಆಗ್ರಹಿಸಿದರು.
ಸಭೆಯಲ್ಲಿ ಮಾತನಾಡಿದ ಗುರುಪುರ ಶ್ರೀ ರಾಜಶೇಖರಾನಂದ ಸ್ವಾಮೀಜಿ, ನಿರಂತರವಾಗಿ ಹಿಂದೂ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಯತ್ನಗಳು ನಡೆಯುತ್ತಿದೆ. ಇದೇನು ಪೊಲೀಸರಿಗೆ ಭೇದಿಸಲಾಗದ ಪ್ರಕರಣವೇನಲ್ಲ. ಪೊಲೀಸರು ಹಲವು ಕ್ಲಿಷ್ಟಕರ ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ಅದೇ ರೀತಿ ಈ ಪ್ರಕರಣದ ಆರೋಪಿಗಳನ್ನೂ ಬಂಧಿಸಿ ಕಠಿಣ ಶಿಕ್ಷೆ ನೀಡಿದರೆ ಸಾರ್ವಜನಿಕವಾಗಿ ಸನ್ಮಾನ ಮಾಡಿ ಬಂಗಾರದ ಪದಕ ನೀಡಿ ಗೌರವಿಸುತ್ತೇವೆ ಎಂದು ಹೇಳಿದರು.

ಪ್ರತಿಭಟನಾ ಸಭೆಯ ಬಳಿಕ ದಾಳಿಗೊಳಗಾದ ನಾಗಬನದವರೆಗೆ ಮೆರವಣಿಗೆ ತೆರಳಿ ಅಲ್ಲಿ ಸಾರ್ವಜನಿಕ ಪ್ರಾರ್ಥನೆ ಮಾಡಲಾಯಿತು. ಕೋಡಿಕಲ್ ಪ್ರದೇಶ ಬಂದ್ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ಸವಾರೊನೊಬ್ಬ ಈ ಬಂದ್ಗೆ ವಿರೋಧ ವ್ಯಕ್ತಪಡಿಸಿದಾಗ ವ್ಯಕ್ತಿ ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಣ ಮಾಡಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications