ಸೆ. 29 ರಂದು ಮಂಗಳೂರಿನಲ್ಲಿ ಆತ್ಯಾಕರ್ಷಕ ಹುಲಿವೇಷ ನರ್ತನ ಸ್ಪರ್ಧೆ
ಮಂಗಳೂರು, ಸೆಪ್ಟೆಂಬರ್ 28: ನವರಾತ್ರಿ, ಮಹಾನವಮಿ ಎಂದರೆ ಸಾಕು ಕರಾವಳಿ ಜನರಿಗೆ ಥಟ್ಟನೆ ನೆನಪಾಗುವುದು 'ಪಿಲಿ ನಲಿಕೆ' (ಹುಲಿ ಕುಣಿತ) ಕುಣಿತ. ನವರಾತ್ರಿ ಆರಂಭವಾಗುತ್ತಿದ್ದಂತೆ ಥೇಟ್ ಹುಲಿಯಂತೇ ಕಾಣುವ ವೇಷಧಾರಿಗಳಿಂದ ರಸ್ತೆ-ವೃತ್ತಗಳಲ್ಲಿ ವಿಶಿಷ್ಟ ನರ್ತನ ಕಾಣಬಹುದು.
ಮಂಗಳೂರು ದಸರಾ ವೇಳೆ ರಥಬೀದಿ ವೆಂಕಟರಮಣ ದೇವಸ್ಥಾನ, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನ, ಬೋಳಾರ ಮಂಗಳಾದೇವಿ ದೇವಸ್ಥಾನಗಳಲ್ಲಿ ನವರಾತ್ರಿ ಆರಂಭ ಮತ್ತು ದಸರಾ ಮೆರವಣಿಗೆಯಲ್ಲಿ ಹುಲಿ ಕುಣಿತ ಆಕರ್ಷಣೆಯಾಗಿರುತ್ತದೆ.
ಹುಲಿವೇಷ ತುಳುನಾಡಿನ ಸಂಪ್ರದಾಯಿಕ ಕಲೆಯಲ್ಲಿ ಒಂದಾಗಿದೆ. ಹುಲಿವೇಷ ನರ್ತನವನ್ನು ಪರಿಚಯಿಸುವ, ಬೆಳೆಸುವ, ಉಳಿಸುವ ನಿಟ್ಟಿನಲ್ಲಿ ವೇದಿಕೆಯೊಂದು ಸಿದ್ದಗೊಂಡಿದೆ.

ಹುಲಿವೇಷ ನರ್ತನ ಸ್ಪರ್ಧೆ
ಹೌದು, ಮಂಗಳೂರಿನಲ್ಲಿ ಒಂದು ಕಡೆ ವೈಭವದ ದಸರಾ ಮಹೋತ್ಸವ ನಡೆಯುತ್ತಿದ್ದರೆ ಇನ್ನೊಂದು ಕಡೆ ಹುಲಿವೇಷ ನರ್ತನ ಕಾರ್ಯಕ್ರಮಕ್ಕೆ ಅದ್ದೂರಿಯ ವೇದಿಕೆ ಸಿದ್ದಗೊಳ್ಳುತ್ತಿದೆ. ಮಂಗಳೂರು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರ ಸಾರಥ್ಯದಲ್ಲಿ ಸತತ ನಾಲ್ಕನೇ ವರ್ಷ ಈ ಹುಲಿವೇಷ ನರ್ತನ ಸ್ಪರ್ಧೆ ನಡೆಯುತ್ತಿದೆ.
ಒಟ್ಟು ಹತ್ತು ಹುಲಿವೇಷ ತಂಡವನ್ನು ಆಹ್ವಾನಿಸಿ ಪಿಲಿನಲಿಕೆ (ಹುಲಿವೇಷ ನರ್ತನ) ಸ್ಪರ್ಧೆಯನ್ನು ನಡೆಸಲಾಗುತ್ತಿದೆ.

ಮಂಗಳಾ ಕ್ರೀಡಾಂಗಣದಲ್ಲಿ ಸ್ಪರ್ಧೆ
ನಗರದ ಮಂಗಳಾ ಕ್ರೀಡಾಂಗಣದ ವಾಲಿಬಾಲ್ ಮೈದಾನದಲ್ಲಿ ಇದೇ ಸೆಪ್ಟೆಂಬರ್ 29 ರಂದು ಕಾರ್ಯಕ್ರಮ ಅಯೋಜಿಸಲಾಗಿದೆ. ಈಗಾಗಲೇ ಮೂರು ಆವೃತಿಯ ಹುಲಿವೇಷ ಸ್ಪರ್ಧೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದು, ಕರಾವಳಿಯಾದ್ಯಂತ ಉತ್ತಮ ಸ್ಪಂದನೆ ದೊರೆತಿದೆ.

ಪ್ರಸಿದ್ಧಿ ಪಡೆದ ಹುಲಿವೇಷ
ಈ ಸ್ಪರ್ಧೆಯಿಂದಾಗಿ ತುಳುನಾಡಿನಲ್ಲಿ ಹುಲಿವೇಷ ನರ್ತನ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಸೆಪ್ಟೆಂಬರ್ 29 ಬೆಳಗ್ಗೆ11 ಗಂಟೆಗೆ ಹುಲಿವೇಷ ಸ್ಪರ್ಧೆ ಆರಂಭಗೊಳ್ಳಲಿದೆ. ಸಂಜೆಯ ಹೊತ್ತಿನಲ್ಲಿ ಸ್ಪರ್ಧೆ ಸಮಾರೋಪಗೊಳ್ಳಲಿದೆ.

2 ಲಕ್ಷ ರೂಪಾಯಿ ಪುರಸ್ಕಾರ
ಪ್ರತಿ ತಂಡಕ್ಕೆ 22 ನಿಮಿಷಗಳ ಕಾಲಾವಕಾಶ ಕೊಡಲಾಗಿದ್ದು ವಿಜೇತ ತಂಡಕ್ಕೆ ಪ್ರಶಸ್ತಿಯ ಜೊತೆಗೆ ಸುಮಾರು 2 ಲಕ್ಷ ರೂ. ಪುರಸ್ಕಾರ ದೊರೆಯಲಿದೆ. ಅಲ್ಲದೆ ಇತರ ವಿಭಾಗದಲ್ಲಿ ಅತ್ಯುತ್ತಮ ಮರಿಹುಲಿ, ಬಣ್ಣಗಾರಿಕೆ, ಅಕ್ಕಿ ಮುಡಿ ಹಾರಿಸುವುದು, ತಾಸೆ ವಿಭಾಗಕ್ಕೂ ವಿಶೇಷ ಬಹುಮಾನ ನೀಡಲಾಗುವುದು.
ಕಾರ್ಯಕ್ರಮದಲ್ಲಿ ಉಡುಪಿ ಶೀರೂರು ಮಠಧೀಶರಾದ ಲಕ್ಷ್ಮೀವರ ತೀರ್ಥ ಶ್ರೀ ಪಾದರು, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ , ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಚಲನಚಿತ್ರ ತಾರೆಯರು ಈ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತುಂಬಲಿದ್ದಾರೆ. ಒಟ್ಟಿನಲ್ಲಿ ನಾಲ್ಕನೇ ಆವೃತ್ತಿಯ ಪಿಲಿನಲಿಕೆ ಸ್ಪರ್ಧೆ ಸಾಕಷ್ಟು ಕುತೂಹಲ ಮೂಡಿಸಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications