Balipa Narayana Bhagavatha: ಕಂಚಿನ ಕಂಠದ ಯಕ್ಷಗಾನ ಭಾಗವತ 'ಬಲಿಪಜ್ಜ' ವಿಧಿವಶ
'ಬಲಿಪ' ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸಿ ಆ ಪರಂಪರೆಗೆ ಮೆರುಗು ತಂದ ತೆಂಕುತಿಟ್ಟಿನ ಮೇರು ಭಾಗವತ ಬಲಿಪ ನಾರಾಯಣ ಭಾಗವತರು ಫೆ.16ರಂದು ಸಂಜೆ 6.30ವೇಳೆಗೆ ಇಹಲೋಕ ತ್ಯಜಿಸಿದ್ದಾರೆ.
'ಬಲಿಪ' ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸಿ ಆ ಪರಂಪರೆಗೆ ಮೆರುಗು ತಂದ ತೆಂಕುತಿಟ್ಟಿನ ಮೇರು ಭಾಗವತ ಫೆ.16ರಂದು ಸಂಜೆ 6.30ವೇಳೆಗೆ ಇಹಲೋಕ ತ್ಯಜಿಸಿದ್ದಾರೆ.
ಯಕ್ಷಗಾನದ ದಂತಕಥೆಯೆನಿಸಿದ್ದ ಬಲಿಪ ನಾರಾಯಣ ಭಾಗವತರು(86) ಕಳೆದ ಕೆಲ ದಿನಗಳಿಂದ ಅಸ್ವಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಸಂಜೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ತಮ್ಮ ತಂದೆ ಮಾಧವ ಭಟ್ಟರಿಂದ ಯಕ್ಷಗಾನ ಭಾಗವತಿಕೆಯನ್ನು ಕಲಿತ ಬಲಿಪ ನಾರಾಯಣ ಭಾಗವತರು ಅನಂತರ ತಮ್ಮ ಅಜ್ಜ ಬಲಿಪ ಭಾಗವತರಿಂದ ಭಾಗವತಿಕೆಯ, ಯಕ್ಷಗಾನ ನಡೆಯ ಪಟ್ಟುಗಳನ್ನು ಕರಗತ ಮಾಡಿಕೊಂಡರು.
1952ರಲ್ಲಿ ಮುಲ್ಕಿ ಮೇಳದಲ್ಲಿ ಸಂಗೀತಗಾರರಾಗಿ ಯಕ್ಷ ಪಯಣವನ್ನು ಆರಂಭಿಸಿದರು. ಬಳಿಕ ಕೂಡ್ಲು ಮೇಳದಲ್ಲಿ ಸಂಗೀತಗಾರರಾಗಿ ತಿರುಗಾಟ ಮಾಡಿದರು. 1953ರಲ್ಲಿ ಭಗವತಿ ಮೇಳದಲ್ಲಿ ಭಾಗವತರಾಗಿ ತಿರುಗಾಟ ಮಾಡಿ ಬಳಿಕ ಪೆಡ್ರೆ ಜಟಾಧಾರಿ ಮೇಳ, ಕೂಡ್ಲು, ಇರಾ, ರೆಂಜಾಳ, ಸೌಕೂರು, ಧರ್ಮಸ್ಥಳ, ಸುರತ್ಕಲ್ ಮೇಳಗಳಲ್ಲಿ ಸೇವೆ ಸಲ್ಲಿಸಿದರು. 1972ರಲ್ಲಿ ಕಟೀಲು ಮೇಳ ಸೇರಿದ ಅವರು 2003ರವರೆಗೆ ದೀರ್ಘಾವಧಿ ಕಾಲ ಪ್ರಧಾನ ಭಾಗವತರಾಗಿ ತಿರುಗಾಟ ನಡೆಸಿದ್ದರು.

ಆಟ-ಕೂಟ-ಗಾನ ವೈಭವ ಎಲ್ಲದಕ್ಕೂ ಸೈ ಎನಿಸಿಕೊಂಡಿದ್ದ ಬಲಿಪ ನಾರಾಯಣ ಭಾಗವತರು, ಕಿರಿಯ ಬಲಿಪರೆಂದೇ ಪ್ರಸಿದ್ಧರಾದವರು. ತಮ್ಮ ಅಜ್ಜ ಹಿರಿಯ ಬಲಿಪ ನಾರಾಯಣ ಭಾಗವತರು ಹಾಕಿಕೊಟ್ಟ ತೆಂಕುತಿಟ್ಟು ಯಕ್ಷಗಾನದ 'ಬಲಿಪ ಶೈಲಿ'ಯನ್ನು ಸಮರ್ಥವಾಗಿ ಮುನ್ನಡೆಸಿದವರು.
ಪಾರ್ತಿಸುಬ್ಬನ 'ಪಂಚವಟಿ', ಮುದ್ದಣನ 'ಕುಮಾರ ವಿಜಯ' ಪ್ರಸಂಗಗಳನ್ನು ಇವರ ಹಾಗೆ ಹಾಡುವವರು ಮತ್ತೊಬ್ಬರಿಲ್ಲ ಎಂಬ ಕೀರ್ತಿಯನ್ನು ಪಡೆದಿದ್ದರು. ಹಲವಾರು ಯಕ್ಷಗಾನ ಪ್ರಸಂಗಗಳು ಇವರಿಗೆ ಕಂಠಸ್ಥವಾಗಿತ್ತು. ರಂಗಸ್ಥಳದಲ್ಲಿ ಇವರ ಕಂಚಿನ ಕಂಠವನ್ನು ಆಲಿಸಲೆಂದೇ ಯಕ್ಷ ರಸಿಕರು ಭಾರೀ ಸಂಖ್ಯೆಯಲ್ಲಿ ಸೇರುತ್ತಿದ್ದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications