Balipa Narayana Bhagavatha: ಕಂಚಿನ ಕಂಠದ ಯಕ್ಷಗಾನ ಭಾಗವತ 'ಬಲಿಪಜ್ಜ' ವಿಧಿವಶ
'ಬಲಿಪ' ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸಿ ಆ ಪರಂಪರೆಗೆ ಮೆರುಗು ತಂದ ತೆಂಕುತಿಟ್ಟಿನ ಮೇರು ಭಾಗವತ ಬಲಿಪ ನಾರಾಯಣ ಭಾಗವತರು ಫೆ.16ರಂದು ಸಂಜೆ 6.30ವೇಳೆಗೆ ಇಹಲೋಕ ತ್ಯಜಿಸಿದ್ದಾರೆ.
'ಬಲಿಪ' ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸಿ ಆ ಪರಂಪರೆಗೆ ಮೆರುಗು ತಂದ ತೆಂಕುತಿಟ್ಟಿನ ಮೇರು ಭಾಗವತ ಫೆ.16ರಂದು ಸಂಜೆ 6.30ವೇಳೆಗೆ ಇಹಲೋಕ ತ್ಯಜಿಸಿದ್ದಾರೆ.
ಯಕ್ಷಗಾನದ ದಂತಕಥೆಯೆನಿಸಿದ್ದ ಬಲಿಪ ನಾರಾಯಣ ಭಾಗವತರು(86) ಕಳೆದ ಕೆಲ ದಿನಗಳಿಂದ ಅಸ್ವಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಸಂಜೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ತಮ್ಮ ತಂದೆ ಮಾಧವ ಭಟ್ಟರಿಂದ ಯಕ್ಷಗಾನ ಭಾಗವತಿಕೆಯನ್ನು ಕಲಿತ ಬಲಿಪ ನಾರಾಯಣ ಭಾಗವತರು ಅನಂತರ ತಮ್ಮ ಅಜ್ಜ ಬಲಿಪ ಭಾಗವತರಿಂದ ಭಾಗವತಿಕೆಯ, ಯಕ್ಷಗಾನ ನಡೆಯ ಪಟ್ಟುಗಳನ್ನು ಕರಗತ ಮಾಡಿಕೊಂಡರು.
1952ರಲ್ಲಿ ಮುಲ್ಕಿ ಮೇಳದಲ್ಲಿ ಸಂಗೀತಗಾರರಾಗಿ ಯಕ್ಷ ಪಯಣವನ್ನು ಆರಂಭಿಸಿದರು. ಬಳಿಕ ಕೂಡ್ಲು ಮೇಳದಲ್ಲಿ ಸಂಗೀತಗಾರರಾಗಿ ತಿರುಗಾಟ ಮಾಡಿದರು. 1953ರಲ್ಲಿ ಭಗವತಿ ಮೇಳದಲ್ಲಿ ಭಾಗವತರಾಗಿ ತಿರುಗಾಟ ಮಾಡಿ ಬಳಿಕ ಪೆಡ್ರೆ ಜಟಾಧಾರಿ ಮೇಳ, ಕೂಡ್ಲು, ಇರಾ, ರೆಂಜಾಳ, ಸೌಕೂರು, ಧರ್ಮಸ್ಥಳ, ಸುರತ್ಕಲ್ ಮೇಳಗಳಲ್ಲಿ ಸೇವೆ ಸಲ್ಲಿಸಿದರು. 1972ರಲ್ಲಿ ಕಟೀಲು ಮೇಳ ಸೇರಿದ ಅವರು 2003ರವರೆಗೆ ದೀರ್ಘಾವಧಿ ಕಾಲ ಪ್ರಧಾನ ಭಾಗವತರಾಗಿ ತಿರುಗಾಟ ನಡೆಸಿದ್ದರು.

ಆಟ-ಕೂಟ-ಗಾನ ವೈಭವ ಎಲ್ಲದಕ್ಕೂ ಸೈ ಎನಿಸಿಕೊಂಡಿದ್ದ ಬಲಿಪ ನಾರಾಯಣ ಭಾಗವತರು, ಕಿರಿಯ ಬಲಿಪರೆಂದೇ ಪ್ರಸಿದ್ಧರಾದವರು. ತಮ್ಮ ಅಜ್ಜ ಹಿರಿಯ ಬಲಿಪ ನಾರಾಯಣ ಭಾಗವತರು ಹಾಕಿಕೊಟ್ಟ ತೆಂಕುತಿಟ್ಟು ಯಕ್ಷಗಾನದ 'ಬಲಿಪ ಶೈಲಿ'ಯನ್ನು ಸಮರ್ಥವಾಗಿ ಮುನ್ನಡೆಸಿದವರು.
ಪಾರ್ತಿಸುಬ್ಬನ 'ಪಂಚವಟಿ', ಮುದ್ದಣನ 'ಕುಮಾರ ವಿಜಯ' ಪ್ರಸಂಗಗಳನ್ನು ಇವರ ಹಾಗೆ ಹಾಡುವವರು ಮತ್ತೊಬ್ಬರಿಲ್ಲ ಎಂಬ ಕೀರ್ತಿಯನ್ನು ಪಡೆದಿದ್ದರು. ಹಲವಾರು ಯಕ್ಷಗಾನ ಪ್ರಸಂಗಗಳು ಇವರಿಗೆ ಕಂಠಸ್ಥವಾಗಿತ್ತು. ರಂಗಸ್ಥಳದಲ್ಲಿ ಇವರ ಕಂಚಿನ ಕಂಠವನ್ನು ಆಲಿಸಲೆಂದೇ ಯಕ್ಷ ರಸಿಕರು ಭಾರೀ ಸಂಖ್ಯೆಯಲ್ಲಿ ಸೇರುತ್ತಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications