ಓಣಂ ಹಿನ್ನೆಲೆಯಲ್ಲಿ ಗಗನಕ್ಕೇರಿದ ಬಾಳೆಹಣ್ಣಿನ ದರ
ಮಂಗಳೂರು, ಆಗಸ್ಟ್ 29: ತಮಿಳುನಾಡಿನಲ್ಲಿ ಒಂದೆಡೆ ಧಾರಾಕಾರ ಮಳೆಯಿಂದ ಬಾಳೆ ಬೆಳೆ ನಾಶ, ಇನ್ನೊಂದೆಡೆ ಬಾಳೆಕಾಯಿ ಇಳುವರಿ ಕಡಿಮೆ, ಮತ್ತೊಂದೆಡೆ ಸಮೀಪಿಸುತ್ತಿರುವ ಓಣಂ, ಬಕ್ರೀದ್ ಹಬ್ಬ.. ಹೀಗೆ ಎಲ್ಲಾ ಕಾರಣಗಳು ಏಕಕಾಲಕ್ಕೆ ಒಟ್ಟಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯಲ್ಲಿ ನೇಂದ್ರ ಮತ್ತು ಕದಳಿ ಬಾಳೆಹಣ್ಣಿನ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.
ಇದೀಗ ಚಿಲ್ಲರೆ ಮಾರುಕಟ್ಟೆಯಲ್ಲಿ ಕದಳಿ ಬಾಳೆಹಣ್ಣು ಕೆಜಿಗೆ 75 - 80 ರೂ. ದರದಲ್ಲಿ ಮಾರಾಟವಾಗುತ್ತಿದೆ. ರಖಂ ಆಗಿ 63 ರೂ. ದರದಲ್ಲಿ ಮಾರಾಟವಾಗುತ್ತಿದೆ. ಇದರ ಮಧ್ಯೆ ಇನ್ನೂ ಹೆಚ್ಚಿನ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಬಾಳೆಹಣ್ಣಿನ ಮಾರಾಟದಲ್ಲಿ ಪಳಗಿರುವ ವ್ಯಾಪಾರಿಗಳು.

ಇನ್ನು ಜುಲೈ ಆರಂಭದಲ್ಲಿ ಕೆಜಿಗೆ 50 ರೂ. ಇದ್ದ ನೇಂದ್ರ ಬಾಳೆಹಣ್ಣಿನ ಬೆಲೆ ಓಣಂ ಸಂದರ್ಭದಲ್ಲಿ 100 ರ ಗಡಿ ದಾಟುವ ಸಾಧ್ಯತೆ ಇದೆ. ಅಲ್ಲದೆ ಇನ್ನು ಬಕ್ರೀದ್ ಹಬ್ಬವೂ ಬರಲಿರುವುದರಿಂದ ವ್ಯಾಪಾರಿಗಳು ಬೆಲೆ ಏರಿಕೆಯ ನಿರೀಕ್ಷೆಯಲ್ಲಿದ್ದಾರೆ .
ವಿಶೇಷ ಎಂದರೆ ಬೆಲೆ ಹೆಚ್ಚಾಗುತ್ತಿದ್ದರೂ ಬಾಳೆಹಣ್ಣಿಗೆ ಗ್ರಾಹಕರು ಮಾತ್ರ ಕಡಿಮೆಯಾಗಿಲ್ಲ ಎನ್ನುವುದು ವ್ಯಾಪಾರಿಗಳ ಅಭಿಮತ. ಇದು ವ್ಯಾಪಾರಿಗಳನ್ನು ಸಂತಸಕ್ಕೀಡುಮಾಡಿದೆ.
ಬೆಲೆ ಏರಿಕೆಗೆ ಕಾರಣ
ಓಣಂ ಹಬ್ಬಕ್ಕೆ ಪ್ರಧಾನವಾಗಿ ನೇಂದ್ರ ಬಾಳೆಹಣ್ಣನ್ನು ಉಪಯೋಗಿಸುತ್ತಾರೆ. ಈ ಕಾರಣಕ್ಕೆ ನೇಂದ್ರ ಸದ್ಯ ಕೇರಳದಲ್ಲಿ ಬಹು ಬೇಡಿಕೆ ಇರುವ ಬಾಳೆಹಣ್ಣಾಗಿದೆ.
ಸಾಮಾನ್ಯವಾಗಸಿ ಕೇರಳದ ಮಾರುಕಟ್ಟೆಗೆ ತಮಿಳುನಾಡಿನಿಂದ ನೇಂದ್ರ ಬಾಳೆ ಹಣ್ಣು ಪೂರೈಕೆಯಾಗುತ್ತದೆ. ಆದರೆ, ಈ ಬಾರಿ ತಮಿಳುನಾಡಿನಲ್ಲಿ ಮಳೆಯಿಂದ ಇಳುವರಿ ಕುಸಿದು ರಖಂ ಮಾರುಕಟ್ಟೆಯಲ್ಲಿ ದುಪ್ಪಟ್ಟು ಬೆಲೆಗೆ ನೇಂದ್ರ ಮಾರಾಟವಾಗುತ್ತಿದೆ.
ಇನ್ನು ಸ್ಥಳೀಯ ನೇಂದ್ರ ಬಾಳೆಹಣ್ಣು ಮಾರುಕಟ್ಟೆಗೆ ಪೂರೈಕೆಯಾಗುತ್ತಿದ್ದರೂ ಬೇಡಿಕೆಗೆ ತಕ್ಕಷ್ಟು ದೊರಕುತ್ತಿಲ್ಲ. ಹೀಗೆ ಎಲ್ಲಾ ಕಾರಣದಿಂದಲೂ ಬಾಣೆಹಣ್ಣಿನ ಬೆಲೆ ಏರುಗತಿಯಲ್ಲಿದ್ದು ಸೆಂಚುರಿ ದಾಟುವ ಸನ್ನಾಹದಲ್ಲಿದೆ.
ಇದು ಬಾಳೆಹಣ್ಣಿನ ಪರಿಸ್ಥಿತಿಯಾದರೆ ತಮಿಳುನಾಡು, ಕರ್ನಾಟಕಗಳಿಂದ ಬರುವ ತರಕಾರಿಗಳು ದುಪ್ಪಟ್ಟು ದರದಲ್ಲಿ ಕೇರಳದ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವುದರಿಂದ ಸ್ಥಳೀಯವಾಗಿ ತರಕಾರಿಯ ಕೊರತೆಯೂ ಕಾಣಿಸಿಕೊಂಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications