ಬೀದಿಬದಿ ವ್ಯಾಪಾರಿಗಳಿಗೆ ಶುಭ ಸುದ್ದಿ ಕೊಟ್ಟ ಸಚಿವ ಬಂಡೆಪ್ಪ ಕಾಶಂಪುರ್
Recommended Video

ಮಂಗಳೂರು, ಅಕ್ಟೋಬರ್. 11: ಬೀದಿಬದಿ ಹಾಗೂ ಸಣ್ಣ ವ್ಯಾಪಾರಿಗಳನ್ನು ಮೀಟರ್ ಬಡ್ಡಿ ಸಂಕಷ್ಟದಿಂದ ಪಾರು ಮಾಡಲು ರಾಜ್ಯ ಸರಕಾರ ಬಡವರ ಬಂಧು ಸಾಲ ಸೌಲಭ್ಯ ಯೋಜನೆ ಆರಂಭಿಸಲಿದೆ ಎಂದು ಸಚಿವ ಬಂಡೆಪ್ಪ ಕಾಶಂಪುರ್ ತಿಳಿಸಿದ್ದಾರೆ .
ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಬುಧವಾರ (ಅ.11) ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು 'ಬಡವರ ಬಂಧು' ಯೋಜನೆಗೆ ದೀಪಾವಳಿಗೆ ಮೊದಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.
ಈ ಯೋಜನೆಯಡಿ 2 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿವರೆಗೆ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಸಿಗಲಿದೆ. ಮೊಬೈಲ್ ಸೇವೆ ಮೂಲಕ ಬಡ್ಡಿರಹಿತ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 3 ಸಾವಿರ ರೂಪಾಯಿ ಸಾಲ ದೊರಕಲಿದೆ ಎಂದರು.

ಸ್ವಸಹಾಯ ಗುಂಪುಗಳು ಉದ್ಯಮ ಆರಂಭಿಸಲು ಸಹಕಾರ ಇಲಾಖೆ 'ಕಾಯಕ ಯೋಜನೆ 'ಯ ಮೂಲಕ 10 ಲಕ್ಷ ರೂಪಾಯಿ ಸಾಲ ಒದಗಿಸಲಿದೆ. ಇದರಲ್ಲಿ 5 ಲಕ್ಷ ರೂಪಾಯಿ ಶೂನ್ಯ ಬಡ್ಡಿ ದರದಲ್ಲಿ ಹಾಗೂ ಉಳಿದ 5 ಲಕ್ಷ ರೂಪಾಯಿ ಶೇಕಡ 4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರಕಲಿದೆ ಎಂದು ಸ್ಪಷ್ಟಪಡಿಸಿದರು.
ಶೀಘ್ರವೇ ಎಲ್ಲಾ ಜಿಲ್ಲೆಗಳಲ್ಲಿಯೂ ಈ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಬಂಡೆಪ್ಪ ಕಾಶಂಪುರ್ ತಿಳಿಸಿದರು.

ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸಾಲ ಮನ್ನಾ ಯೋಜನೆಯಡಿ ದಕ್ಷಿಣಕನ್ನಡ ಜಿಲ್ಲೆಯ ರೈತರ 713 ಕೋಟಿ ರೂಪಾಯಿ ಸಾಲ ಮನ್ನಾ ಆಗಲಿದೆ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ಸಂದರ್ಭ ಸಾಲ ಮನ್ನಾದಡಿ ಜಿಲ್ಲೆಯ 380 ಕೋಟಿ ರೂಪಾಯಿ ರೈತರ ಸಾಲ ಮನ್ನಾ ಆಗಿದೆ ಎಂದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications