ವಿಜಯಾ ಬ್ಯಾಂಕ್ ವಿಲೀನ ವಿರೋಧಿಸಿ ಜ.9 ರಂದು ಮಂಗಳೂರು ಬಂದ್ಗೆ ಯೂತ್ ಕಾಂಗ್ರೆಸ್ ಕರೆ
ಮಂಗಳೂರು, ಜನವರಿ 07: ವಿಜಯಾ ಬ್ಯಾಂಕ್ ಅನ್ನು ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್ನೊಂದಿಗೆ ವಿಲೀನ ಮಾಡುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಜವನರಿ 9 ರಂದು ಮಂಗಳೂರು ಬಂದ್ಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕರೆ ನೀಡಿದೆ.
'ತಮ್ಮ ರಾಜ್ಯದ ಬ್ಯಾಂಕ್ ಉಳಿಸಲು ನಮ್ಮ ರಾಜ್ಯದ ಬ್ಯಾಂಕ್ ಹಾಳು ಮಾಡಿದ ಪಿಎಂ'
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ , ಲಾಭದಲ್ಲಿರುವ ವಿಜಯಾ ಬ್ಯಾಂಕ್ ಅನ್ನು ನಷ್ಟದಲ್ಲಿರುವ ಎರಡು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸುವ ಬಗ್ಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಮೌನ ವಹಿಸಿರುವುದು ಯಾಕೆ? ಎಂದು ಪ್ರಶ್ನಿಸಿದರು.
ಬ್ಯಾಂಕುಗಳ ವಿಲೀನಕ್ಕೆ ಸಂಪುಟ ಒಪ್ಪಿಗೆ: ಬರಿ ನೆನಪಾಗಿ ಉಳಿಯಲಿದೆ ವಿಜಯಾ ಬ್ಯಾಂಕ್
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಒತ್ತೆ ಇಟ್ಟಿದ್ದಾರೆಯೇ? ಎಂದು ಮಿಥುನ್ ರೈ ಆಕ್ರೋಶ ವ್ಯಕ್ತಪಡಿಸಿದರು. ವಿಜಯಾ ಬ್ಯಾಂಕ್ ವಿಲೀನ ವಿರೋಧಿಸಿ ಜನವರಿ 9 ರಂದು ಮಂಗಳೂರು ಬಂದ್ ಗೆ ಕರೆ ನೀಡುವುದಾಗಿ ತಿಳಿಸಿದ ಅವರು ಜನವರಿ 9ರಂದು ಬೆಳಗ್ಗೆ 6ರಿಂದ ಸಂಜೆ 4 ರವರೆಗೆ ಜಿಲ್ಲೆಯನ್ನು ಬಂದ್ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಜ.9ರ ಬಂದ್ ಯಶಸ್ವಿಗೊಳಿಸಲು ಬಸ್ ಮಾಲೀಕರು, ಹೊಟೇಲ್ ಉದ್ಯಮಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಜೊತೆ ಮಾತನಾಡಲಾಗುವುದು. ಬಂದ್ ಗೆ ಸಂಸದ ನಳಿನ್ ಕೂಡ ಕೈ ಜೋಡಿಸಲಿ ಎಂದು ಒತ್ತಾಯಿಸಿದರು.