ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಟ್ವಾಳದ ಮಿನಿ ವಿಧಾನಸೌಧಕ್ಕೆ ಶೀಘ್ರ ಶಿಲಾನ್ಯಾಸ

|
Google Oneindia Kannada News

ಮಂಗಳೂರು, ಜ. 8: ಬಂಟ್ವಾಳದಲ್ಲಿ 10 ಕೋಟಿ ರೂಪಾಯಿ ವೆಚ್ಚದ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಈಗಾಗಲೇ ಐದು ಕೋಟಿ ರೂಪಾಯಿ ಮಂಜೂರಾಗಿದ್ದು, ಶೀಘ್ರದಲ್ಲಿ ಶಿಲಾನ್ಯಾಸ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದರು.

ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಾರ್ಯಯಕರ್ತರ ಸಭೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಬಿ.ಸಿ. ರೋಡ್ನಲ್ಲಿ 7.5 ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.[ಮಂಗಳೂರು ಮಿನಿ ವಿಧಾನಸೌಧಕ್ಕೆ ಹೊಸ ಡೆಡ್‌ಲೈನ್]

manguluru

ಬಂಟ್ವಾಳಕ್ಕೆ ಟಾಫಿಕ್ ಪೊಲೀಸ್ ಠಾಣೆ ಮಂಜೂರಾಗಿದೆ. ಅಂಬೇಡ್ಕರ್ ಭವನಕ್ಕೆ 2 ಕೋಟಿ ರೂ. ಮಂಜೂರಾಗಿದ್ದು, ಸ್ಥಳ ಪರಿಶೀಲನೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಎಆರ್‌ಟಿಒ ಹಾಗೂ ಎಸಿ ವಿಭಾಗೀಯ ಕಚೇರಿ ಬಂಟ್ವಾಳಕ್ಕೆ ಶೀಘ್ರದಲ್ಲೇ ತರಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಎಂ.ಎಸ್. ಮುಹಮ್ಮದ್, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಭೂ ಅಭಿವದ್ದಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್ ಸಭೆಯಲ್ಲಿ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಎಂ.ಅಬ್ಬಾಸ್ ಅಲಿ, ಮಾಯಿಲಪ್ಪ ಸಾಲಿ ಯಾನ್, ಪಕ್ಷ ಪ್ರಮುಖರಾದ ಪಿಯೂಸ್ ಎಲ್. ರಾಡ್ರಿಗಸ್, ಬಿ. ಪದ್ಮಶೇಖರ್ ಜೈನ್, ಸಂಜೀವ ಪೂಜಾರಿ ಬೊಳ್ಳಾಯಿ, ಐಡಾ ಸುರೇಶ್, ವಸಂತಿ ಚಂದಪ್ಪ, ಯಾಸ್ಮೀನ್ ಹಾಮದ್, ಹೇಮಾವತಿ, ಧನಲಕ್ಷ್ಮಿ ಬಂಗೇರ, ಲುಕ್ಮಾನ್, ಪ್ರಶಾಂತ್ ಕುಲಾಲ್, ಭಾಸ್ಕರ್ ಮೊಲಿ, ಜಗದೀಶ್ ಕೊಲ ಉಪಸ್ಥಿತರಿದ್ದರು.

English summary
Mangaluru: District in charge minister Ramanath rai said that to construct new mini Vidhana Soudha in Bantval dream comes true. Total 10 crore sanctioned to this project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X