ಹೆಬ್ಬಾವಿನೊಂದಿಗೆ ಕಾದಾಡಿ ಗೆದ್ದ 11ರ ಪೋರ!
ಬಂಟ್ವಾಳ, ಅಕ್ಟೋಬರ್, 05 : ತನ್ನ ಪ್ರಾಣ ಹೋಗುವ ಸಂದರ್ಭದಲ್ಲಿ ಮನುಷ್ಯ ತನ್ನ ಪ್ರಾಣ ಕಾಪಾಡಿಕೊಳ್ಳಲು ಏನೇಲ್ಲಾ ಮಾಡುತ್ತಾನೆ ಎಂಬುದುಕ್ಕೆ ಉದಾಹರಣೆಯೊಂದು ಇಲ್ಲಿದೆ.
11 ರ ಪೋರ ಹೆಬ್ಬಾವಿನೊಂದಿಗೆ ಕಾದಾಡಿ ಹೆಬ್ಬಾವನ್ನು ಗಾಯಗೊಳಿಸಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ಬಂಟ್ವಾಳದ ಸಜೀಪ ಎಂಬಲ್ಲಿ ನಡೆದಿದೆ. ಸಜೀಪ ಆದರ್ಶ ಆಂಗ್ಲಮಾಧ್ಯಮ ಶಾಲೆಯ ವ್ಯಾಸಂಗ ಮಾಡುತ್ತಿರುವ 11ರ ಹರೆಯದ ವೈಶಾಖ್ ಹೆಬ್ಬಾವಿನೊಂದಿಗೆ ಕಾದಾಡಿ ಜೀವ ಉಳಿಸಿಕೊಂಡ ಬಾಲಕ.

ವೈಶಾಕ್ ಮಂಗಳವಾರ ಸಂಜೆ ತನ್ನ ಅಜ್ಜಿ ಮನೆಗೆ ಕಾಲು ದಾರಿಯಲ್ಲಿ ಹೋಗುತ್ತಿದ್ದ ವೇಳೆ ಪೊದೆಯಲ್ಲಿದ್ದ ಹೆಬ್ಬಾವೊಂದು ವೈಶಾಕ್ ಮೇಲೆ ಎರಗಿದೆ. ನಂತರ ಆ ಬಾಲಕನನ್ನು ಸುತ್ತಿಕೊಳ್ಳಲು ಪ್ರಾರಂಭಿಸಿದೆ. ಹೆಬ್ಬಾವಿನಿಂದ ಕಾಪಾಡುವಂತೆ ಬಾಲಕ ಕೂಗಿದ್ದಾನೆ ಆದರೆ ದುರಾದೃಷ್ಟ ವೈಶಾಖ್ ನ ಕೂಗು ಯಾರಿಗೂ ಕೇಳಿಸಲಿಲ್ಲ.
ಇನ್ನೇನು ಹೆಬ್ಟಾವು ಬಾಲಕನ ಕೈ, ಕಾಲುಗಳಿಗೆ ಬಾಯಿ ಹಾಕಿ ನುಂಗಲು ಪ್ರಯತ್ನಿಸುತ್ತಿದ್ದಂತಯೇ ವೈಶಾಕ್ ಧೈರ್ಯದಿಂದ ಪಕ್ಕದಲ್ಲಿದ್ದ ಕಲ್ಲೊಂದನ್ನು ಕೈಗೆತ್ತಿಕೊಂಡು ಹಾವಿನ ಮುಖಕ್ಕೆ ಜಜ್ಜಿದ್ದಾನೆ. ಈ ಪೋರ ಕೊಟ್ಟ ಏಟಿಗೆ ಹೆಬ್ಬಾವು ತೀವ್ರ ಗಾಯಗೊಂಡು ಈತನ ಕೈಯನ್ನು ಬಿಟ್ಟಿದೆ.
ನಂತರ ಬಾಲಕ ಹೆಬ್ಬಾವಿನಿಂದ ತಪ್ಪಿಸಿಕೊಂಡು ಬಂದ್ದಾನೆ. ವೈಶಾಖ್ ಗೆ ಗಾಯಗಳಾಗಿದ್ದು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications