ಮಂಗಳೂರು: 11ರ ಪೋರ ವೈಶಾಖ್ ಗೆ ಕಚ್ಚಿದ್ದ ಹೆಬ್ಬಾವು ಸೆರೆ
ಮಂಗಳೂರು, ಅಕ್ಟೋಬರ್. 20 : ಸಜಿಪ ಸಮೀಪ ಕೊಳಕೆ ಕಡೂರು ಆಸುಪಾಸಿನಲ್ಲಿ ಹಲವು ದಿನಗಳಿಂದ ಬೀಡು ಬಿಟ್ಟಿದ್ದ ಹೆಬ್ಬಾವೊಂದನ್ನು ಬುಧವಾರ ರಾತ್ರಿ ಗ್ರಾಮಸ್ಥರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಅಲ್ಲಿನ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಸಜಿಪ ಸಮೀಪ ಕೊಳಕೆ ಕಡೂರು ಎಂಬಲ್ಲಿ 11ರ ಪೋರ ವೈಶಾಖ್ ಹೆಬ್ಬಾವಿನೊಂದಿಗೆ ಸೆಣಸಾಡಿ ಪ್ರಾಣಾಪಾಯದಿಂದ ಪಾರಾಗಿ ಬಂದಿದ್ದನ್ನು ನೀವು ಈಗಾಗಲೇ ಓದಿರಬಹುದು. ಅದೇ ಹಾವು ಅಲ್ಲಿಯೇ ಸುಳಿದಾಡುತಿದ್ದನ್ನು ಕಂಡ ಗ್ರಾಮಸ್ಥರು ಹೆಬ್ಬಾವನ್ನು ಯಶಸ್ವಿಯಾಗಿ ಹಿಡಿದು ಅರಣ್ಯ ಇಲಾಖೆ ಒಪ್ಪಿಸಿದ್ದಾರೆ. [ಹೆಬ್ಬಾವಿನೊಂದಿಗೆ ಕಾದಾಡಿ ಗೆದ್ದ 11ರ ಪೋರ!]

ಹಿಂದಿನ ಘಟನೆ: ಅಕ್ಟೋಬರ್ 14 ರಂದು ವೈಶಾಕ್ ತನ್ನ ಅಜ್ಜಿ ಮನೆಗೆ ಕಾಲು ದಾರಿಯಲ್ಲಿ ಹೋಗುತ್ತಿದ್ದ ವೇಳೆ ಪೊದೆಯಲ್ಲಿದ್ದ ಹೆಬ್ಬಾವೊಂದು ದಾಳಿಮಾಡಿತ್ತು. ಇನ್ನೇನು ಹೆಬ್ಟಾವು ಬಾಲಕನ ಕೈ, ಕಾಲುಗಳಿಗೆ ಬಾಯಿ ಹಾಕಿ ನುಂಗಲು ಪ್ರಯತ್ನಿಸುತ್ತಿದ್ದಂತಯೇ ವೈಶಾಕ್ ಧೈರ್ಯದಿಂದ ಪಕ್ಕದಲ್ಲಿದ್ದ ಕಲ್ಲೊಂದನ್ನು ಕೈಗೆತ್ತಿಕೊಂಡು ಹಾವಿನ ಮುಖಕ್ಕೆ ಜಜ್ಜಿದ್ದಾನೆ.
ಈ ಪೋರ ಕೊಟ್ಟ ಏಟಿಗೆ ಹೆಬ್ಬಾವು ತೀವ್ರ ಗಾಯಗೊಂಡು ಈತನ ಕೈಯನ್ನು ಬಿಟ್ಟಿದೆ. ಹೀಗೆ ಸಾಹಸ ಮೆರೆದ ಬಾಲಕ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ.

ಇಷ್ಟಾಗಿದ್ದಲ್ಲದೆ ಬಾಲಕನ ಮನೆ ಸಮೀಪ ಅದೇ ಹೆಬ್ಬಾವು ಕಾಣಿಸಿಕೊಂಡಿದೆ. ಇದರಿಂದ ವೈಶಾಖ್ ಮನೆಯವರು ಹಾಗೂ ಗ್ರಾಮಸ್ಥರು ಭಯ ಬೀತರಾಗಿದ್ದರು. ಕೊನೆಗೆ ಗ್ರಾಮಸ್ಥರು ಹೆಬ್ಬಾವನ್ನು ಹಿಡಿಯಲು ಮುಂದಾಗಿದ್ದಾರೆ.
ಈ ವೇಳೆ ಜಗದೀಶ್ ಮತ್ತು ಬಾಲಕೃಷ್ಣ ಎಂಬವರಿಗೆ ಹಾವು ಕಚ್ಚಿದ್ದು ಅವರು ಬಂಟವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶತಾಯಗತಾಯವಾಗಿ ಹೆಬ್ಬಾವನ್ನು ಹಿಡಿದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಇದರಿಂದ ವೈಶಾಖ್ ಮತ್ತು ಗ್ರಾಮದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications