ಬಂಟ್ವಾಳ: ನಿಧಿ ಆಸೆಗೆ ಮನೆ ಮಂದಿಯನ್ನು ಕಟ್ಟಿ ಹಾಕಿದ್ದ ಆರೋಪಿಗಳ ಬಂಧನ
ಮಂಗಳೂರು, ಫೆಬ್ರವರಿ. 05 : ಬಂಟ್ವಾಳ ತಾಲೂಕಿನ ಕರೋಪಾಡಿಯಲ್ಲಿ ಜನವರಿ 24ರಂದು ನಡೆದಿದ್ದ ನಿಧಿ ಶೋಧ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕಾಸರಗೋಡು ಪೈವಳಿಕೆ ನಿವಾಸಿ ಆಶಿಕ್ ಪಿ. (19), ಬಂಟ್ವಾಳ ತಾಲೂಕು ಕನ್ಯಾನ ಗ್ರಾಮ ಇಕ್ಬಾಲ್ ಯಾನೆ ಇಕ್ಕು (22), ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಯಾನೆ ಅಲಿ ಮೋನು (29), ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಅಬ್ಬಾಸ್ (26), ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಅಶ್ರಫ್ ಯಾನೆ (ಎಲ್ಟಿಟಿ ಅಶ್ರಫ್) (21) ಎಂದು ಗುರುತಿಸಲಾಗಿದೆ. [ನಿಧಿ ಆಸೆಗೆ ಮನೆ ಮಂದಿಯನ್ನು ಕಟ್ಟಿ ಹಾಕಿದ ಭಲೇ ಕಿಲಾಡಿಗಳು!]

ಬಂಧಿತರಿಂದ ಒಂದು ಇನ್ನೋವಾ, ಒಂದು ಆಲ್ಟೊ ಕಾರು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಪೈವಳಿಕೆ ವಾಸಿ ಶಫಿ ಯಾನೆ ಎಂಎಲ್ ಎ ಶಫಿ, ಕೇರಳದ ಶಫಿ ಯಾನೆ ಚೋಟು ಶಫಿ, ಮಿತ್ತನಡ್ಕ ಹ್ಯಾರಿಸ್ ಸಹಿತ ಕೆಲವರಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಎರಡು ಕಾರುಗಳಲ್ಲಿ ಬಂದಿದ್ದ ತಂಡ ಎರಡು ಗಂಟೆಗಳ ಕಾಲ ಭೂಮಿ ಅಗೆದು ಬೆಳಗ್ಗೆ 4.30 ಕ್ಕೆ ಬರಿಗೈಲಿ ತೆರಳಿದ್ದರು. ಪೊಲೀಸರಿಗೆ ಸುಳಿವು ಸಿಗಬಾರದು ಎಂದು ಸಿಸಿ ಕ್ಯಾಮಾರದ ಡಿವಿಆರ್ ಹಾಗೂ ಎರಡು ಮೊಬೈಲ್ನಲ್ಲಿದ್ದ ನಾಲ್ಕು ಸಿಮ್ ಗಳನ್ನು ಕದ್ದಿದ್ದರು. ಈ ಸಂಬಂಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜನವರಿ 24ರಂದು ಕರೋಪಾಡಿ ಗ್ರಾಮದ ಅರಸಳಿಕೆ ವಿಘ್ನರಾಜ ಭಟ್ ಮನೆಗೆ ನುಗ್ಗಿ, ಮನೆಯವರನ್ನು ಬೆದರಿಸಿ ನಿಧಿಶೋಧಕ್ಕೆ ಮುಂದಾಗಿದ್ದರು. ಬಳಿಕ ಅಲ್ಲಿ ನಿಧಿ ಸಿಗದೆ ಬರಿಗೈನಲ್ಲಿ ಪರಾರಿಯಾಗಿದ್ದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications