Get Updates
Get notified of breaking news, exclusive insights, and must-see stories!

ಬಂಟ್ವಾಳ: ನಿಧಿ ಆಸೆಗೆ ಮನೆ ಮಂದಿಯನ್ನು ಕಟ್ಟಿ ಹಾಕಿದ್ದ ಆರೋಪಿಗಳ ಬಂಧನ

ಮಂಗಳೂರು, ಫೆಬ್ರವರಿ. 05 : ಬಂಟ್ವಾಳ ತಾಲೂಕಿನ ಕರೋಪಾಡಿಯಲ್ಲಿ ಜನವರಿ 24ರಂದು ನಡೆದಿದ್ದ ನಿಧಿ ಶೋಧ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಪೈವಳಿಕೆ ನಿವಾಸಿ ಆಶಿಕ್ ಪಿ. (19), ಬಂಟ್ವಾಳ ತಾಲೂಕು ಕನ್ಯಾನ ಗ್ರಾಮ ಇಕ್ಬಾಲ್ ಯಾನೆ ಇಕ್ಕು (22), ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಯಾನೆ ಅಲಿ ಮೋನು (29), ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಅಬ್ಬಾಸ್ (26), ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಅಶ್ರಫ್ ಯಾನೆ (ಎಲ್‌ಟಿಟಿ ಅಶ್ರಫ್) (21) ಎಂದು ಗುರುತಿಸಲಾಗಿದೆ. [ನಿಧಿ ಆಸೆಗೆ ಮನೆ ಮಂದಿಯನ್ನು ಕಟ್ಟಿ ಹಾಕಿದ ಭಲೇ ಕಿಲಾಡಿಗಳು!]

Bantwal gang which bound family and dug ground for hidden treasure arrested

ಬಂಧಿತರಿಂದ ಒಂದು ಇನ್ನೋವಾ, ಒಂದು ಆಲ್ಟೊ ಕಾರು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಪೈವಳಿಕೆ ವಾಸಿ ಶಫಿ ಯಾನೆ ಎಂಎಲ್ ಎ ಶಫಿ, ಕೇರಳದ ಶಫಿ ಯಾನೆ ಚೋಟು ಶಫಿ, ಮಿತ್ತನಡ್ಕ ಹ್ಯಾರಿಸ್ ಸಹಿತ ಕೆಲವರಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಎರಡು ಕಾರುಗಳಲ್ಲಿ ಬಂದಿದ್ದ ತಂಡ ಎರಡು ಗಂಟೆಗಳ ಕಾಲ ಭೂಮಿ ಅಗೆದು ಬೆಳಗ್ಗೆ 4.30 ಕ್ಕೆ ಬರಿಗೈಲಿ ತೆರಳಿದ್ದರು. ಪೊಲೀಸರಿಗೆ ಸುಳಿವು ಸಿಗಬಾರದು ಎಂದು ಸಿಸಿ ಕ್ಯಾಮಾರದ ಡಿವಿಆರ್ ಹಾಗೂ ಎರಡು ಮೊಬೈಲ್‌ನಲ್ಲಿದ್ದ ನಾಲ್ಕು ಸಿಮ್ ಗಳನ್ನು ಕದ್ದಿದ್ದರು. ಈ ಸಂಬಂಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜನವರಿ 24ರಂದು ಕರೋಪಾಡಿ ಗ್ರಾಮದ ಅರಸಳಿಕೆ ವಿಘ್ನರಾಜ ಭಟ್ ಮನೆಗೆ ನುಗ್ಗಿ, ಮನೆಯವರನ್ನು ಬೆದರಿಸಿ ನಿಧಿಶೋಧಕ್ಕೆ ಮುಂದಾಗಿದ್ದರು. ಬಳಿಕ ಅಲ್ಲಿ ನಿಧಿ ಸಿಗದೆ ಬರಿಗೈನಲ್ಲಿ ಪರಾರಿಯಾಗಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+