ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶರತ್ ಕೊಲೆ ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ

|
Google Oneindia Kannada News

ಮಂಗಳೂರು, ಆಗಸ್ಟ್ 18 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಶರತ್ ಮಡಿವಾಳ್ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರ ಬಂಧನ ಶರತ್ ಮಡಿವಾಳ್ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರ ಬಂಧನ

ಬುಧವಾರ ಬಂಧಿಸಲಾಗಿದ್ದ ಪಿಎಫ್ಐ ಕಾರ್ಯಕರ್ತರಾದ ಬೆಳ್ತಂಗಡಿಯ ರಿಯಾಜ್, ನೆಲ್ಯಾಡಿಯ ಸಿದ್ದಿಕ್, ಹಾಗೂ ಚಾಮರಾಜನಗರದ ಕಲೀಂ ಎನ್ನುವರನ್ನು ಹೆಚ್ಚಿನ ತನಿಖೆ ನಡೆಸಲು 15 ದಿನಗಳ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಇಂದು (ಶುಕ್ರವಾರ) ಬಂಟ್ವಾಳ 2ನೇ ಜೆಎಂಎಫ್ ಸಿ ಕೋರ್ಟ್ ಆದೇಶಿಸಿದೆ.

Bantwal JMFC court imposes judicial custody of Sharath Madivala murder accused

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಬಂಧಿತರಾದ ಸಜೀಪ ಮುನ್ನೂರು ಹಾಲಾಡಿ ನಿವಾಸಿ ಶಾಫಿ ಮತ್ತು ಚಾಮರಾಜನಗರದ ಖಲೀಲ್ ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆ ವೇಳೆ ಬಂಧಿತರು ನೀಡಿದ ಮಾಹಿತಿ ಮೇಲೆ ಪ್ರಮುಖ ಆರೋಪಿಗಳಿಗೆ ಬಲೆ ಬೀಸಲಾಗಿದ್ದು, ಇನ್ನು ಎರಡ್ಮೂರು ದಿನಗಳಲ್ಲಿ ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

22 ಗೋವುಗಳ ರಕ್ಷಣೆ: ಶುಕ್ರವಾರ ಬೆಳ್ಳಂಬೆಳಗೆ ಸುರತ್ಕಲ್ ಟೋಲ್ ಗೇಟ್ ನ ಬಳಿಯ ಮಲ್ಲಮಾರ್ ಬೀಚ್ ನ ಹತ್ತಿರ ಅಕ್ರಮವಾಗಿ ಪಿಕಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಒಟ್ಟು 22 ಗೋವುಗಳನ್ನು ಪೊಲೀಸರು ರಕ್ಷಿಸಿದ್ದಾರೆ.

English summary
The Bantwal 2nd JMFC court imposes judicial custody of RSS activist sharath madivala murder accused here on Aug 18. Police sources say that 1-2 more persons will be arrested within short span of time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X