ಬಂಟ್ವಾಳದಲ್ಲಿ ರೌಡಿ ಶೀಟರ್ ಕೊಚ್ಚಿ ಕೊಲೆ
ಮಂಗಳೂರು, ಜೂ.22 : ರೌಡಿಶೀಟರ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬಂಟ್ವಾಳದ ಸುಜೀರ್ ಶಾಲಾ ಹಿಂಭಾಗದಲ್ಲಿ ನಡೆದಿದೆ. ನೌಶಾದ್ ಮೇಲೆ ಹಲ್ಲೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಶನಿವಾರ ಸಂಜೆ ಅಪರಿಚಿತರು ನೌಶಾದ್ (27) ಮೇಲೆ ಹಲ್ಲೆ ನಡೆಸಿದ್ದಾರೆ. ಅಪರಿಚಿತರ ತಂಡ ಏಕಾಏಕಿ ಹಲ್ಲೆ ನಡೆಸಿದಾಗ ನೌಶಾದ್ ಕೂಗಿಕೊಂಡಿದ್ದು, ಸ್ಥಳೀಯರು ಬಂದು ತಡೆಯುವ ವೇಳೆಗೆ ಆತನ ಕೈ, ಮುಖದ ಮೇಲೆ ಗಂಭೀರಗಾಯಗಳಾಗಿದ್ದವು. ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ನೌಶಾದ್ ಅಲ್ಲಿ ಮೃತಪಟ್ಟಿದ್ದಾರೆ.

ಒಟ್ಟು ಆರು ಮಂದಿಯ ತಂಡ ಹತ್ಯೆಯನ್ನು ನಡೆಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಟುಕಾಟ ಆರಂಭಿಸಿದ್ದಾರೆ. ಹತ್ಯೆಗೆ ಹಳೆ ದ್ವೇಷವೇ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪ್ರಮುಖ ಆರೋಪಿಯಾಗಿದ್ದ : 2012ರ ಜ. 5ರಂದು ನೂರುದ್ದೀನ್ ಎಂಬುವವರ ಹತ್ಯೆಯಾಗಿದ್ದು, ನೌಶಾದ್ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ಪ್ರಕರಣವು ಸಾಬೀತಾಗದ ಕಾರಣ 2013ರಲ್ಲಿ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದರು. ಈ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಕೊಲೆ ಮಾಡಿರಬಹುದು ಎಂದು ಪೊಲೀಸರು ಹೇಳಿದ್ದಾರೆ.
ಪರಿಚಿತರ ಕೈವಾಡ : ತನ್ನ ಫಾಸ್ಟ್ ಫುಡ್ ಅಂಗಡಿಗಾಗಿ ಸಂಜೆ ವೇಳೆ ಮನೆಯಲ್ಲಿ ಆಹಾರ ತಯಾರಿ ನಡೆಸುತ್ತಿದ್ದ ನೌಶಾದ್ ಮೊಬೈಲ್ ಗೆ ಕರೆ ಮಾಡಿ ಬರುವಂತೆ ಹೇಳಿದ ದುಷ್ಕರ್ಮಿಗಳು ಹೇಳಿದ್ದಾರೆ. ಆಲ್ಟೋ ಕಾರಿನಲ್ಲಿ ಮನೆಯಿಂದ ಮಾರಿಪಳ್ಳಕ್ಕೆ ಬಂದ ರಕ್ಷಣ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ಆದ್ದರಿಂದ ಪರಿಚಯದವರು ಕರೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
-
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ












Click it and Unblock the Notifications