ಬಪ್ಪನಾಡು ಕ್ಷೇತ್ರದ ಹೆಸರಿನ ಮುಂದೆ ಹಜರತ್: ಸರಿಪಡಿಸಿದ ಗೂಗಲ್
ಮಂಗಳೂರು, ಏಪ್ರಿಲ್ 4: ಉಡುಪಿ ಜಿಲ್ಲೆ ಕಾಪುವಿನ ಸುಗ್ಗಿ ಮಾರಿಪೂಜೆಯಲ್ಲಿ ಆರಂಭವಾದ, ಹಿಂದೂ ಜಾತ್ರೆಗಳಲ್ಲಿ ಅನ್ಯಧರ್ಮೀಯ ವ್ಯಾಪಾರಿಗಳಿಗೆ ನಿಷೇಧ ಹೇರುವ ಪರ್ವ, ರಾಜ್ಯದ ಇತರ ದೇವಾಲಗಳಿಗೂ ಹಬ್ಬಿತ್ತು. ಅದರಂತೇ, ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಕೂಡಾ ನಿಷೇಧ ಹೇರುವಂತೆ ಒತ್ತಡ ಬಂದಿತ್ತು.
ಬಪ್ಪನಾಡು ದೇವಾಲಯದಲ್ಲಿ ಮೂರು ದಿನಗಳ ಕಾಲ ನಡೆಯುವ ವಾರ್ಷಿಕ ಉತ್ಸವದಲ್ಲಿ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಯುತ್ತಿದೆ. ಅದರಲ್ಲಿ ಶಂಕರಪುರ ಮಲ್ಲಿಗೆ ಪ್ರಮುಖವಾದದ್ದು.
ಅಲ್ಲಿನ ಜಾತ್ರಾ ಕಾರ್ಯಕ್ರಮ ಈಗ ಮುಗಿದ ನಂತರ ಕಿಡಿಗೇಡಿಗಳು ಗೂಗಲ್ ಮ್ಯಾಪ್ ನಲ್ಲಿ ದುಷ್ಕೃತ್ಯ ಎಸಗಿದ್ದಾರೆ.
ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ದೇವಾಲಯದ ಆಡಳಿತ ಮಂಡಳಿ ತಕ್ಷಣ ಇದಕ್ಕೆ ಸ್ಪಂದಿಸಿದೆ. ಗೂಗಲ್ ಮ್ಯಾಪ್ ನಲ್ಲಿ ಹಿಂದಿನಂತೆಯೇ ದೇವಸ್ಥಾನದ ಹೆಸರನ್ನು ಬದಲಾಯಿಸಲಾಗಿದೆ.

ಬಪ್ಪನಾಡು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನ ಎಂದಿದ್ದನ್ನು ಕಿಡಿಗೇಡಿಗಳು ಹಜ್ರತ್ ಬಪ್ಪಬ್ಯಾರಿ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನ ಎಂದು ಗೂಗಲ್ ಮ್ಯಾಪ್ ನಲ್ಲಿ ಎಡಿಟ್ ಮಾಡಿದ್ದರು. ಮುಕ್ತ ವೇದಿಕೆಯಾಗಿದ್ದರೂ, ಯಾರೂ ಬೇಕಾದರೂ ಮ್ಯಾಪ್ ನಲ್ಲಿ ಹೆಸರು ಬದಲಾಯಿಸಲು ಅವಕಾಶವಿರುವುದಿಲ್ಲ. ಆದರೂ, ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ದುರುದ್ದೇಶದಿಂದ ಕಿಡಿಗೇಡಿಗಳು ಹೆಸರನ್ನು ಬದಲಾಯಿಸಿ ಚಾಲಾಕಿತನ ತೋರಿದ್ದಾರೆ.
ಈ ವಿದ್ಯಮಾನಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ಬೆಲ್ಲಲ್ಲೇ, ದೇವಳದ ಆಡಳಿತ ಮಂಡಳಿಯ ಸದಸ್ಯರು, ಕ್ಷೇತ್ರದ ಭಕ್ತರು ಸೇರಿ, ಮಂಗಳೂರು ಕಮಿಷನರ್, ಮೂಲ್ಕಿ ಪೊಲೀಸ್ ಠಾಣೆ ಮತ್ತು ಮಂಗಳೂರು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಶನಿವಾರ (ಏಪ್ರಿಲ್ 2) ರಾತ್ರಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.
ಭಕ್ತರ ಮತ್ತು ಕ್ಷೇತ್ರದ ಆಡಳಿತ ಮಂಡಳಿಯ ಸತತ ಫಾಲೋಪ್ ಮತ್ತು ಗೂಗಲ್ ರಿವ್ಯೂ ಬಳಿಕ, ಬಪ್ಪನಾಡು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನ, ಎಂದು ಗೂಗಲ್ ಮ್ಯಾಪ್ ನಲ್ಲಿ ಬದಲಾವಣೆಯಾಗಿದೆ. ಕೃತ್ಯ ಎಸಗಿದವರನ್ನು ಪತ್ತೆಹಚ್ಚಲು ಸೈಬರ್ ಕ್ರೈಂ ಪೊಲೀಸರಿಗೆ ಸಾಧ್ಯವಿರುವುದರಿಂದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಭಕ್ತರು ಒತ್ತಾಯಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications