ಬಪ್ಪನಾಡಿನಲ್ಲಿ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು: ವ್ಯಾಪಕ ಆಕ್ರೋಶ
ಮಂಗಳೂರು, ಏಪ್ರಿಲ್ 04: ದೇವರ ರಥ ಹೋಗುವ ದಾರಿಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳನ್ನು ಭಕ್ತರು ಜಖಂಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿರುವ ಪುರಾಣ ಪ್ರಸಿದ್ಧ ಬಪ್ಪನಾಡು ದುರ್ಗಾಪರಮೇಶ್ವರಿ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಮಾರ್ಚ್ 24 ರಿಂದ ಮಾರ್ಚ್ 31ರವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅದ್ಧೂರಿಯಾಗಿ ಸಂಪನ್ನಗೊಂಡಿದೆ. ಆದರೆ ಈ ಬಾರಿ ಜಾತ್ರಾ ಮಹೋತ್ಸವದ ವೇಳೆ ನಡೆದ ಅವಘಡ ಆಕ್ರೋಶಕ್ಕೆ ಕಾರಣವಾಗಿದೆ.

ಬಪ್ಪನಾಡು ಜಾತ್ರಾ ಮಹೋತ್ಸವದ ವೇಳೆ ರಥೋತ್ಸವದ ದಿನ ರಥ ಹೋಗುವ ದಾರಿಯಲ್ಲಿ ಕೆಲವು ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಈ ವೇಳೆ ರಥ ಹೋಗಲು ದಾರಿ ಮಾಡುವ ಸಲುವಾಗಿ ಭಕ್ತರು ನಿಲ್ಲಿಸಿದ್ದ ಕಾರು, ರಿಕ್ಷಾ, ಬೈಕ್ಗಳನ್ನು ಬದಿಗೆ ದೂಡಿ ಹಾಕಿದ್ದಾರೆ. ಈ ವೇಳೆ ಅನೇಕ ವಾಹನಗಳಿಗೆ ಹಾನಿಯಾಗಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಬಪ್ಪನಾಡು ದೇವಾಲಯದ ಡೋಲು ಜಾತ್ರೆ
ಮಲ್ಲಿಗೆ ಪ್ರಿಯೆ ಎಂದೇ ಹೆಸರಾಗಿರುವ ಬಪ್ಪನಾಡು ದೇವಾಲಯದ ಡೋಲು ಜಾತ್ರೆ ತುಳುನಾಡಿನ ಏಳು ಪ್ರಮುಖ ಜಾತ್ರೆಗಳಲ್ಲೊಂದು. ಉಡುಪಿ ಪರ್ಯಾಯ, ಮೂಲ್ಕಿ ಅರಸರ ಕಂಬಳ, ಕವತ್ತಾರು ಆಯನ, ಧರ್ಮಸ್ಥಳದ ಲಕ್ಷದೀಪೋತ್ಸವ, ಪಡುಬಿದ್ರೆಯ ಢಕ್ಕೆಬಲಿ, ಕಾಪು ಸುಗ್ಗಿಮಾರಿ ಪೂಜೆ ಜಾತ್ರೆಯಂತೆ ಬಪ್ಪನಾಡು ದೇವಾಲಯದ ಡೋಲು ಜಾತ್ರೆ ಕೂಡ ಅದ್ಧೂರಿಯಾಗಿ ನಡೆಯುತ್ತದೆ. ಮಾರ್ಚ್ 24 ರಿಂದ ಮಾರ್ಚ್ 31ರವರೆಗೆ ನಡೆದ ಬಪ್ಪನಾಡು ದೇವಾಲಯದ ಡೋಲು ಜಾತ್ರೆಯ ಕೊನೆಯ ದಿನ ಕವಾಟೋದ್ಘಾಟನೆ, ಉತ್ಸವ ಬಲಿ, ಓಕುಳಿ, ಶ್ರೀ ದೇವಿ ಮತ್ತು ಸಸಿಹಿತ್ತು ಶ್ರೀ ಭಗವತೀಯರ ಭೇಟಿ, ಮಹಾ ರಥೋತ್ಸವ ಕಾರ್ಯಕ್ರಮದೊಂದಿಗೆ ಸಂಪನ್ನಗೊಂಡಿತ್ತು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications