ಉಚಿತ ಕ್ಷೌರ ಮಾಡಿ ಮೋದಿ ಅಭಿಮಾನ ಮೆರೆದ ಪುತ್ತೂರಿನ ಕ್ಷೌರಿಕ
ಮಂಗಳೂರು, ಮೇ 25: ದೇಶದಲ್ಲಿ ಮೋದಿ ಅಲೆ ಮರುಕಳಿಸಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ತರಗೆಲೆಗಳಂತೆ ಉದುರಿ ಹೋಗಿವೆ. ಭಾರೀ ಬಹುಮತದೊಂದಿಗೆ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗಲಿರುವ ನರೇಂದ್ರ ಮೋದಿಯವರ ಗೆಲುವಿನ ಹರ್ಷಾಚರಣೆ ದೇಶದಾದ್ಯಂತ ವಿವಿಧ ರೀತಿಯಲ್ಲಿ ನಡೆಯುತ್ತಿದೆ. ಒಂದೆಡೆ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರೆ, ಪುತ್ತೂರಿನ ಮೋದಿ ಅಭಿಮಾನಿಯೊಬ್ಬರು ತಮ್ಮ ಒಂದು ದಿನದ ಕೆಲಸವನ್ನೇ ಮೋದಿ ಗೆಲುವಿಗಾಗಿ ಮುಡಿಪಾಗಿಟ್ಟಿದ್ದಾರೆ.
ಪುತ್ತೂರು ಸಮೀಪದ ಸಂಟ್ಯಾರುವಿನಲ್ಲಿ ಹೇರ್ ಸಲೂನ್ ನಡೆಸುತ್ತಿರುವ ಬಾಲಸುಂದರ್, ಪ್ರಧಾನಿ ಮೋದಿ ಅವರ ಅಪ್ಪಟ ಅಭಿಮಾನಿ. ಬೃಹತ್ ರಾಲಿ, ಸಿಹಿ ತಿಂಡಿ ಹಂಚಿ, ಪಟಾಕಿ ಸಿಡಿಸಿ ಮೋದಿ ಗೆಲುವನ್ನು ಸಂಭ್ರಮಿಸುವ ಆರ್ಥಿಕ ತಾಕತ್ತು ಬಾಲಸುದರ್ ಅವರಿಗಿಲ್ಲ. ಈ ಕಾರಣಕ್ಕಾಗಿ ಇವರು ತಮ್ಮ ದುಡಿಮೆಯ ಒಂದು ದಿನವನ್ನು ಮೋದಿ ಗೆಲುವಿಗಾಗಿ ಸಮರ್ಪಿಸುವ ಮೂಲಕ ಮೋದಿ ಅವರ ಮೇಲೆ ಅಭಿಮಾನ ಮೆರೆದಿದ್ದಾರೆ.

ತಮ್ಮ ಕ್ಷೌರದಂಗಡಿಗೆ ಬರುವ ಎಲ್ಲಾ ಗ್ರಾಹಕರಿಗೆ ಒಂದು ದಿನ ಉಚಿತವಾಗಿ ಕ್ಷೌರ ಮಾಡುವ ಮೂಲಕ ಮೋದಿಯ ಗೆಲುವಿನ ಸಂಭ್ರಮಾಚರಣೆ ನಡೆಸಿದ್ದಾರೆ. ಒಂದು ವರ್ಷದ ಹಿಂದೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಲಸುಂದರ್ ಗೆ ಆಸ್ಪತ್ರೆಯ ಬಿಲ್ ಹೊಂದಿಸಲೂ ಸಾಧ್ಯವಾಗಿರಲಿಲ್ಲ. ಆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಆಯುಷ್ಮಾನ್ ಭಾರತ್ ಯೋಜನೆ ಬಾಲಸುಂದರ್ ಗೆ ವರದಾನವಾಗಿ ಬಂದಿತ್ತು.

ಈ ಯೋಜನೆಯಡಿ ಚಿಕಿತ್ಸೆ ಪಡೆದ ಬಾಲಸಂದರ್ ಗುಣಮುಖರಾದರು. ಈ ಯೋಜನೆಯಿಂದ ಅವರ ಪ್ರಾಣ ಉಳಿದಿತ್ತು. ಆ ಸಂದರ್ಭದಲ್ಲಿ ಮೋದಿ ಮತ್ತೊಮ್ಮೆ ಪ್ರದಾನಿಯಾದರೆ ಒಂದು ದಿನದ ಕ್ಷೌರವನ್ನು ಉಚಿತವಾಗಿ ಮಾಡುವುದಾಗಿ ಸಂಕಲ್ಪ ತೊಟ್ಟಿದ್ದರು. ಇದೀಗ ತಮ್ಮ ನಿರ್ಧಾರವನ್ನು ಕಾರ್ಯರೂಪಕ್ಕೆ ತಂದು ಮೋದಿ ಅವರ ಗೆಲುವನ್ನು ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಿದ್ದಾರೆ.
ಬಾಲಸುಂದರ್ ಅವರ ಮೋದಿ ಭಕ್ತಿಯನ್ನು ಸಾರ್ವಜನಿಕರು ಶ್ಲಾಘಿಸಿದ್ದು, ಉಚಿತವಾಗಿ ಕ್ಷೌರವನ್ನೂ ಮಾಡಿಸಿಕೊಂಡಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications