ಬಾಡೂಟ ಪ್ರಕರಣ, ಅಧಿಕಾರಿಗಳಿಂದ ಮಂಗಳೂರು ಜೈಲಲ್ಲಿ ಪರಿಶೀಲನೆ
ಮಂಗಳೂರು, ಜುಲೈ 20: ನಗರದ ಜಿಲ್ಲಾ ಕಾರಾಗೃಹದಲ್ಲಿ ನಡೆದಿತ್ತು ಎನ್ನಲಾದ ಬಾಡೂಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಬರ್ಕೆ ಠಾಣೆ ಇನ್ ಸ್ಪೆಕ್ಟರ್ ಹಾಗೂ ಇತರ ಸಿಬ್ಬಂದಿ ಇಂದು ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಡೆದ ಕರ್ಮಕಾಂಡ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಬೆಂಗಳೂರಿನಿಂದ ಬಂದೀಖಾನೆ ಇಲಾಖೆಯ ಹಿರಿಯ ಅಧಿಕಾರಿಗಳು ಮಂಗಳೂರು ಜೈಲಿನ ಮಾಹಿತಿ ಕೇಳಿದ್ದಾರೆ. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸುವಂತೆ ಬರ್ಕೆ ಠಾಣೆ ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದರು.

ಈ ಕುರಿತು 'ಒನ್ಇಂಡಿಯಾ ಕನ್ನಡ'ದ ಅಧಿಕಾರಿಗಳ ಜತೆ ಮಾತನಾಡಿದ ಪ್ರಭಾರ ಜೈಲು ಅಧೀಕ್ಷಕರು 'ಜೈಲ್ ನಲ್ಲಿ ಯಾವುದೇ ಬಾಡೂಟ ಪ್ರಕರಣ ನಡೆದಿಲ್ಲ,' ಎಂದು ಸಮಜಾಯಿಸಿ ನೀಡಿದ್ದಾರೆ.
ಆದರೆ, ಜೈಲ್ ಒಳಗಡೆ ಪಾರ್ಟಿ ಮಾಡುವ ಫೋಟೋಗಳು ಬಯಲಾಗಿದ್ದು, ಹೊರಗಡೆಯಿಂದ ಊಟ ಪೊರೈಕೆಯಾಗಿದ್ದಕ್ಕೆ ಪುಷ್ಟಿ ನೀಡುತ್ತಿವೆ. ಐದಾರು ಆರೋಪಿಗಳು ಒಟ್ಟಿಗೆ ಕುಳಿತು ಊಟ ಮಾಡುತ್ತಿದ್ದು, ತಟ್ಟೆ ಬಳಿ ಬಾಟಲಿಗಳು ಕಂಡು ಬಂದಿವೆ. ಇದನ್ನು ಗಮನಿಸಿದಾಗ ಜೈಲ್ ಸಿಬ್ಬಂದಿಗಳ ಸಹಕಾರದಿಂದಲೇ ಈ ಭರ್ಜರಿ ಪಾರ್ಟಿ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಆರೋಪಿಗಳು ಹಳೆ ಜೈಲ್ ನ ಕೊಠಡಿ ಒಳಗಡೆ ಬಾಗಿಲಿಗೆ ಕರ್ಟನ್ ಹಾಕಿ ಪಾರ್ಟಿ ಮಾಡುತ್ತಿದ್ದಾರೆ. ಇದು ಆಗಾಗ ನಡೆಯುತ್ತಿದ್ದು, ಕೈದಿಗಳನ್ನು ಇಷ್ಟು ಸಲುಗೆಯಿಂದ ಇಲ್ಲಿ ಬಿಟ್ಟಿರುವುದೇ ಇದಕ್ಕೆ ಕಾರಣ ಎಂದು ಜೈಲ್ ಸಿಬ್ಬಂದಿಗಳು ಅಳಲು ತೋಡಿಕೊಂಡಿದ್ದಾರೆ.
ಈ ಹಿಂದೆ ಮಂಗಳೂರು ಕಾರಾಗೃಹದಲ್ಲಿ ಕುಖ್ಯಾತ ಕ್ರಿಮಿನಲ್ ಆರೋಪ ಹೊತ್ತು ಕೊಂಡ್ಡಿದ್ದ ರಶೀದ್ ಮಲಬಾರಿ ಇದ್ದ ಸಂದರ್ಭ ಆಗಾಗ ಬಾಡೂಟಗಳು, ಪಾರ್ಟಿಗಳು ಆಯೋಜನೆಗೊಳ್ಳುತ್ತಿತ್ತು. ಇದಕ್ಕಾಗಿ ಒಳಗಡೆ ಇರುವ ಸಹ ಕೈದಿಗಳಿಂದಲೇ ಹಫ್ತಾ ಎತ್ತಲಾಗುತ್ತಿತ್ತು ಎಂಬ ಆರೋಪಗಳಿವೆ. ಈ ವಿಚಾರವಾಗಿ ಜೈಲ್ ಒಳಗಡೆ ಹಲವು ಬಾರಿ ಹೊಡೆದಾಟಗಳು ನಡೆದ ಉದಾಹರಣೆಗಳೂ ಇವೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications