ಜೋಸೆಫ್ ವಾಜ್ ಕ್ಷೇತ್ರದಲ್ಲಿ ಅನ್ನದಾನಕ್ಕೆ ಚಾಲನೆ
ಮಂಗಳೂರು, ಜ. 17: ಏಸು ಪ್ರಭು ಹಸಿದವನಿಗೆ ಆಹಾರ ನೀಡಿ ಸಂತೈಸಿದ್ದ. ಆಧ್ಯಾತ್ಮಿಕ ಹಸಿವು ಜೋಸೆಫ್ವಾಜ್ ಕ್ಷೇತ್ರ ದರ್ಶನದಿಂದ ನೀಗುತ್ತದೆ. ಶಾರೀರಿಕ ಹಸಿವು ನೀಗಿಸಲು ಅನ್ನದಾನ ಆರಂಭಿಸಲಾಗಿದೆ ಎಂದು ಬೆಂಗಳೂರು ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ಬರ್ನಾಡ್ ಮೊರಾಸ್ ಪ್ರಭು ಹೇಳಿದರು.
ಸಂತ ಜೋಸೆಫ್ ವಾಜ್ ಅವರಿಗೆ ಶ್ರೀಲಂಕಾದಲ್ಲಿ ಸಂತ ಪದವಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮುಡಿಪು ಮುಕ್ತಿಧರ ಜೋಸೆಫ್ ವಾಜ್ ಕ್ಷೇತ್ರದಲ್ಲಿ ನಡೆಯುತ್ತಿದ್ದ ಚಾರಿತ್ರಿಕ ಸಂಭ್ರಮ ಸಮಾರೋಪದಲ್ಲಿ ಪ್ರತಿ ಶುಕ್ರವಾರ ಅನ್ನದಾನ ಸೇವೆಗೆ ಚಾಲನೆ ನೀಡಿ ಅವರು ಮಾತನಾಡಿದರು. [ಆಸ್ಟ್ರೇಲಿಯಾ ವಧು ವರಿಸಿದ ಮಂಗಳೂರು ಕುವರ]

ಬರಲೇ ಇಲ್ಲ ಮುಖ್ಯಮಂತ್ರಿ : ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿತ್ತು. ಆದರೆ, ಮಂಗಳೂರಿಗೆ ಬಂದಿದ್ದ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬರದೇ ವಾಪಸ್ ಹೋದರು. ಮುಖ್ಯಮಂತ್ರಿ ಬರುವ ನಿರೀಕ್ಷೆಯಿಂದ ಬಂದಿದ್ದ ಹಲವರು ನಿರಾಸೆಯಿಂದ ಮರಳಿದರು. [ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಸಂಚಾರ ನಿಷೇಧ]
ಸಭೆ ಮುಕ್ತಾಯ ಹಂತದಲ್ಲಿದ್ದಾಗ ಮಾಜಿ ಕೇಂದ್ರ ಮಂತ್ರಿ ಆಸ್ಕರ್ ಫರ್ನಾಂಡಿಸ್ ಆಗಮಿಸಿದರು. ಅವರ ಜೊತೆ ಜಿಲ್ಲಾ ಪಂಚಾಯಿತಿ ಸದಸ್ಯ ಮೆಲ್ವಿನ್ ಡಿಸೋಜ ಇತರರು ಇದ್ದರು.

ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಡಾ. ಅಲೋಸಿಯಸ್ ಪೌಲ್ ಡಿಸೋಜ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಜೆ.ಆರ್. ಲೋಬೋ, ಡೆನ್ನಿಸ್ ಮೊರಾಸ್ ಪ್ರಭು, ಸಾರ್ವಜನಿಕ ಸಂಪರ್ಕಾಧಿಕಾರಿ ಫಾ. ವಿಲ್ಲಿಯಂ ಮಿನೇಜಸ್, ಫಾ. ಗ್ರೆಗರಿ ಡಿಸೋಜ, ಧರ್ಮ ಪ್ರಾಂತ್ಯದ ಪ್ರಧಾನ ಕಾರ್ಯದರ್ಶಿ ಎಂ.ಪಿ. ನೊರೊನ್ಹಾ, ಜೋಸೆಫ್ ವಾಜ್ ಕ್ಷೇತ್ರ ಉಪಾಧ್ಯಕ್ಷ ರೋಶನ್ ಡಿಸೋಜಾ, ಕಾರ್ಯದರ್ಶಿ ಲಿಯೋ ಡಿಸೋಜಾ, ಮಾಜಿ ಉಪಾಧ್ಯಕ್ಷ ಮೈಕಲ್ ಡಿಸೋಜಾ, ಎಲಿಯಾಸ್ ಫೆರ್ನಾಂಡಿಸ್ ಇತರರು ಪಾಲ್ಗೊಂಡಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications