ಹಲೋ ಸ್ವಲ್ಪ ಇತ್ತ ಕೇಳಿ, ಡ್ರೋನ್ ಕ್ಯಾಮೆರಾ ಬಳಸಿದರೆ ಜೋಕೆ!
ಮಂಗಳೂರು, ಮೇ 11 : ಮದುವೆ, ಮುಂಜಿ ಹೀಗೆ ಮುಂತಾದ ಖಾಸಗಿ ಕಾರ್ಯಕ್ರಮಗಳಲ್ಲಿ ಸುಂದರ ಛಾಯಾಚಿತ್ರಗಳನ್ನು ಸೆರೆಹಿಡಿಯಬೇಕೆನ್ನುವ ಮಹದಾಸೆಯಿಂದ ಡ್ರೋನ್ ಕ್ಯಾಮೆರಾ ಬಳಸಲು ನೀವೇನಾದರೂ ನಿರ್ಧರಿಸಿದಲ್ಲಿ ನೀವು ತೊಂದರೆಯಲ್ಲಿ ಸಿಲುಕುವುದಂತೂ ಗ್ಯಾರಂಟಿ.
ಹೌದು, ಭದ್ರತಾ ಕಾರ್ಯಗಳಿಗೆ ಹೊರತಾಗಿ ಬೇರೆ ಯಾವುದೇ ಖಾಸಗಿ ಮತ್ತು ಸರಕಾರಿ ಕಾರ್ಯಕ್ರಮಗಳಲ್ಲಿ ಡ್ರೋನ್ ಬಳಸುವವರ ಮೇಲೆ ನಿಗಾ ಇಡಲು ಹಾಗೂ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅಧಿಕಾರವಿದೆ.

ಅಕ್ಟೋಬರ್ 2014ರಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಹೊರಡಿಸಿರುವ ಸುತ್ತೋಲೆಯೊಂದನ್ನು ಗುಪ್ತಚರ ಇಲಾಖೆ ಉಲ್ಲೇಖಿಸಿದೆ. ಏಪ್ರಿಲ್ 2016ರಲ್ಲಿ ಡಿಜಿಸಿಎ ಡ್ರೋನ್ ಬಳಕೆ ಕುರಿತಾದ ಮಾರ್ಗಸೂಚಿಗಳನ್ನು ಪ್ರಸ್ತಾಪಿಸಿದ್ದು, ಇದರನ್ವಯ ಡ್ರೋನ್ ಬಳಕೆದಾರರು ಅನುಮತಿ ಪಡೆದು ಒಂದು ವಿಶಿಷ್ಟ ಗುರುತಿನ ಸಂಖ್ಯೆ ಪಡೆಯಬೇಕಾಗಿದೆ.
ವಾಯು ಕ್ಷೇತ್ರದ ಭದ್ರತೆಯ ದೃಷ್ಠಿಯಿಂದ ಇಂತಹ ಡ್ರೋನ್ ಬಳಕೆಯನ್ನು ನಿಯಂತ್ರಿಸುವ ಉದ್ದೇಶವನ್ನು ಈ ಸುತ್ತೋಲೆ ಹೊಂದಿದೆ. ಈ ಡಿಜಿಸಿಎ ಸುತ್ತೋಲೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ತಿಳಿಸಿದ್ದಾರೆ.
ಸರಕಾರಿ ಸಮಾರಂಭಗಳ ಸಂದರ್ಭ ಕೂಡ ಡ್ರೋನ್ ಬಳಕೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ಸಭೆ ಸಮಾರಮಭಗಳಲ್ಲಿ ಡ್ರೋನ್ ಕ್ಯಾಮೆರಾ ಬಳಸುತ್ತಿರುವುದು ಕಂಡುಬಂದಲ್ಲಿ ಅವುಗಳನ್ನು ವಶಪಡಿಸಿಕೊಳ್ಳುವಂತೆ ಮತ್ತು ನಾಶಗೊಳಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ.
ಡ್ರೋನ್ ಮಾಲಕರು ಹಾಗೂ ಅದರ ನಿರ್ವಾಹಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿರುವ ಎಸ್ಪಿ ಹವ್ಯಾಸಿಗಳು ಕೂಡ ಡ್ರೋನ್ ಬಳಸುವುದು ನಿಷೇಧಿಸಲಾಗಿದೆ ಎಂದಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications