ಬೀಕನ್ಸ್ ನಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಚಾಂಪಿಯನ್ಸ್
ಮಂಗಳೂರು, ಅಕ್ಟೋಬರ್. 07: ನಿಟ್ಟೆ ಸಮೂಹ ಸಂವಹನ ಸಂಸ್ಥೆಯ ವತಿಯಿಂದ ನಡೆದ ಆರನೇ ಆವೃತ್ತಿಯ ರಾಷ್ಟ್ರ ಮಟ್ಟದ ಬೀಕನ್ಸ್ ಮಾಧ್ಯಮೋತ್ಸವದಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು.
ಗೋವಾದ ಸೇಂಟ್ ಕ್ಸೇವಿಯರ್ ಕಾಲೇಜು ತಂಡ ರನ್ನರ್-ಅಪ್ ಆಗಿ ಹೊರಹೊಮ್ಮಿತು. ಬೀಕನ್ಸ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಡಾಕ್ಯೂಮೆಂಟರಿ, ಪಿಎಸ್ ಆಡ್, ಕಿರುಚಿತ್ರ, ಪಾಟ್ ಪೌರಿ, ನ್ಯೂಸ್ ಬುಲೆಟಿನ್, ಮಾಕ್ ಪ್ರೆಸ್, ಕ್ರಿಯೇಟಿವ್ ರೈಟಿಂಗ್, ಡಿಬೇಟ್, ರೇಡಿಯೋಜಾಕಿ, ಪ್ರಾಡಕ್ಟ್ ಲಾಂಚ್, ಕ್ರೈಸಿಸ್ ಮ್ಯಾನೇಜ್ ಮೆಂಟ್, ಕ್ವಿಜ್, ಮೂವಿ ಸ್ಪೂಫ್, ಎಸ್ಕೇಪ್ರೂಮ್, ಬೀದಿ ನಾಟಕ ಸೇರಿದಂತೆ ಅನೇಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಆಳ್ವಾಸ್ ನ ಶ್ರೀರಾಜ್, ಜಾಫರ್, ಅಕ್ಷಯ, ನಿವೇದಿತಾ, ಅನುಷಾ, ಚೈತ್ರಾ, ವರುಣ್, ತೇಜು ಹಾಗೂ ಓಂಕಾರರನ್ನು ಒಳಗೊಂಡ ವಿದ್ಯಾರ್ಥಿ ತಂಡ ಬೀದಿ ನಾಟಕದಲ್ಲಿ ಪ್ರಥಮ, ಪಿಎಸ್ ಆಡ್ ನಲ್ಲಿ ರಕ್ಷಿತ, ಸುಶಾಂತ್, ವರುಣ್, ಅಭಿನಂದನ್ ತಂಡ ಪ್ರಥಮ, ಹಾಗೂ ಎಸ್ಕೇಪ್ರೂಮ್ ಸ್ಪರ್ಧೆಯಲ್ಲಿ ತೆಂಝಿಲ್ ಪ್ರಥಮ ಸ್ಥಾನ ಪಡೆದರು.

ಮಾಕ್ ಪ್ರೆಸ್ ನಲ್ಲಿ ಶ್ರೇಯಾ ಶೆಟ್ಟಿ ದ್ವಿತೀಯ, ಪ್ರಾಡಕ್ಟ್ ಲಾಂಚ್ ನಲ್ಲಿ ಶ್ರೇಯಾ ಶೆಟ್ಟಿ ಹಾಗೂ ಓಂಕಾರ್ ದ್ವಿತೀಯ, ಕ್ರೈಸಿಸ್ ಮ್ಯಾನೇಜ್ ಮೆಂಟ್ ನಲ್ಲಿ ಗಗನ್ ದೀಪ್ ಹಾಗೂ ಪುನೀತ್ ತಂಡ ದ್ವಿತೀಯ ಪ್ರಶಸ್ತಿಯನ್ನು ಬಾಚಿಕೊಂಡರು.
ವಿದ್ಯಾರ್ಥಿಗಳಲ್ಲಿ ಮಾಧ್ಯಮದ ಕುರಿತು ಅರಿವು ಮೂಡಿಸುವ ಹಾಗೂ ಅದರ ಸಾಧನೆಗಳನ್ನು ಸ್ಮರಿಸುವ ಉದ್ದೇಶದಿಂದ ನಿಟ್ಟೆ ಸಂಸ್ಥೆ ಪ್ರತಿವರ್ಷ ಬೀಕನ್ಸ್ ಮಾಧ್ಯಮೋತ್ಸವವನ್ನು ನಡೆಸಿಕೊಂಡು ಬಂದಿದೆ. ನಿಟ್ಟೆ ವಿಜ್ಞಾನ ಮತ್ತು ತಂತ್ರಜ್ಞಾನ ಕಾಲೇಜಿನ ಡಾ. ಸ್ಮಿತಾ ಹೆಗ್ಡೆ ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications