ಕಾಸರಗೋಡು ಬೀಫ್ ಫೆಸ್ಟ್: ವಾಟ್ಸಪ್ ಗ್ರೂಪ್ ತಂಡಗಳ ಮಧ್ಯೆ ಹೊಡೆದಾಟ
ಮಂಗಳೂರು / ಕಾಸರಗೋಡು, ಜೂನ್ 13: ಬೀಫ್ ಫೆಸ್ಟ್ ವಿಷಯದಲ್ಲಿ ಒಂದೇ ವಾಟ್ಸಪ್ ಗ್ರೂಪ್ಪಿನ ಎರಡು ತಂಡಗಳ ಮಧ್ಯೆ ಹುಟ್ಟಿಕೊಂಡ ವಿವಾದ ಇದೀಗ ಹೊಡೆದಾಟದಲ್ಲಿ ಅಂತ್ಯ ಕಂಡಿದೆ. ಪರಸ್ಪರ ಹೊಡೆದಾಡಿದವರು ಬಿಜೆಪಿ ಹಾಗೂ ಸಿಪಿಎಂ ಪಕ್ಷದವರಾಗಿದ್ದು, ಇದು ರಾಜಕೀಯ ಘರ್ಷಣೆಯಾಗಿ ಬದಲಾಗಿದೆ.
ಕಾಸರಗೋಡಿನ ಪೆರ್ಲದಲ್ಲಿ ಈ ಘಟನೆ ನಡೆದಿದ್ದು, ಘರ್ಷಣೆಯಲ್ಲಿ ಗಾಯಗೊಂಡ ಬಾಡೂರು ನಿವಾಸಿಗಳೂ ಸಿಪಿಎಂ ಕಾರ್ಯಕರ್ತರಾದ ಜಯಂತ್ ಕುಮಾರ್ (28), ವಾಮನ (21), ಪವನ್ ಕುಮಾರ್ (21) ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಜೆಪಿ ಕಾರ್ಯಕರ್ತರಾದ ಪೆರ್ಲ ಬಳಿಯ ನಿವಾಸಿಗಳಾದ ಲೋಕೇಶ್ (28), ಗಣೇಶ್ (22), ಪ್ರಶಾಂತ್ (30), ಸಚಿನ್ (29) ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಘರ್ಷಣೆಯಲ್ಲಿ ಬಿಜೆಪಿಯ ಮೂವರು ಕಾರ್ಯಕರ್ತರು ಗಾಯಗೊಂಡಿದ್ದು, ಇವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವಾಹನದ ಮೇಲೆ ಉಕ್ಕಿನಡ್ಕದಲ್ಲಿ ತಂಡವೊಂದು ಕಲ್ಲೆಸೆದಿದ್ದು, ಇದರಿಂದ ಲೋಕೇಶ ಎಂಬವರು ಗಾಯಗೊಂಡಿದ್ದಾರೆ.

ಘರ್ಷಣೆಯಲ್ಲಿ ಗಾಯಗೊಂಡ ಏಳು ಮಂದಿ ಒಂದೇ ವಾಟ್ಸಪ್ ಗ್ರೂಪ್ ಸದಸ್ಯರಾಗಿದ್ದಾರೆ. ಕೇಂದ್ರ ಸರಕಾರ ಗೋಹತ್ಯೆ ನಿಷೇಧಿಸಿದ ಬಳಿಕ ವಿವಿಧೆಡೆ ಕಾಣಿಸತೊಡಗಿದ ಬೀಫ್ ಫೆಸ್ಟ್ ವಿಷಯದಲ್ಲಿ ಇವರ ವಾಟ್ಸಪ್ ಗ್ರೂಪ್ಪಿನಲ್ಲಿ ಚರ್ಚೆ ನಡೆದಿದೆ. ಕೆಲವರು ಬೀಫ್ ಫೆಸ್ಟ್ ಬೆಂಬಲಿಸಿದರೆ, ಇನ್ನು ಕೆಲವರು ವಿರೋಧ ವ್ಯಕ್ತಪಡಿಸಿದರು. ಇದು ಘರ್ಷಣೆಗೆ ಕಾರಣವೆನ್ನಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications