'ಗೋಮಾಂಸ ತಿನ್ನುತ್ತೇನೆ ಎಂದ ಸಿಎಂ ಕ್ಷಮೆಯಾಚಿಸಲಿ'
ಮಂಗಳೂರು, ಅಕ್ಟೋಬರ್. 30: ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಸಂಖ್ಯಾತ ಸಮಾಜದ ಭಾವನೆಗಳನ್ನು ಧಿಕ್ಕರಿಸಿ, ನಾನು ಈವರೆಗೆ ಗೋಮಾಂಸ ತಿಂದಿಲ್ಲ, ಇನ್ನು ಮುಂದೆ ತಿನ್ನುತ್ತೇನೆ ಎಂದಿರುವುದನ್ನು ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಖಂಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಉದ್ದಟ, ಬೇಜವಾಬ್ದಾರಿಯ ಮತ್ತು ವಿಷಾದನೀಯ ಹೇಳಿಕೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಮಣ್ಣು ಪಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.['ಗೋಮಾಂಸ ತಿನ್ನಬೇಕೆನಿಸಿದರೆ ತಿನ್ನುತ್ತೇನೆ']

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಭಾವನೆಗಳನ್ನು ಸಮಾನವಾಗಿ ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯದ ಸಮಸ್ತ ಪ್ರಜೆಗಳನ್ನು ಸಮಾನವಾಗಿ ಕಾಣುವುದು ಮುಖ್ಯಮಂತ್ರಿಗಳ ಸಾಂವಿಧಾನಿಕ ಕರ್ತವ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ಸಂವಿಧಾನದ ಹೆಸರಿನಲ್ಲಿ ಮಾಡಿದ ಪ್ರಮಾಣ ವಚನದ ವಾಕ್ಯಗಳನ್ನು ನೆನಪಿಸುತ್ತಾ, ಬಹುಸಂಖ್ಯಾತ ಸಮಾಜದ ಭಾವನೆಗಳನ್ನು ಘಾಸಿಗೊಳಿಸಿರುವುದಕ್ಕಾಗಿ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.[ಗೋಮಾಂಸ ತಿನ್ನಲು ಮುಂದಾದವರಿಗೆ ಜನರ ಪ್ರಶ್ನೆ]
ಈ ರೀತಿಯ ಹೇಳಿಕೆಗಳು ಸಮಾಜದಲ್ಲಿನ ಸಮುದಾಯಗಳ ನಡುವೆ ದ್ವೇಷ ಹಾಗೂ ಅಶಾಂತಿಯ ವಾತಾವರಣ ಸೃಷ್ಟಿಸುವ ಸಾಧ್ಯತೆಯಿದೆ. ಮುಖ್ಯಮಂತ್ರಿ ತಮ್ಮ ಹೇಳಿಕೆಯನ್ನು ಕೂಡಲೆ ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications