ಕತಾರ್ನಲ್ಲಿ ಸಂಕಷ್ಟದಲ್ಲಿದ್ದ ಯುವಕ ಬೆಳ್ತಂಗಡಿಗೆ ವಾಪಸ್
ಮಂಗಳೂರು, ಆ.08 : ಕತಾರ್ನಲ್ಲಿ ಉದ್ಯೋಗದಲ್ಲಿದ್ದಾತನಿಂದ ವಂಚನೆಗೊಳಗಾಗಿ ಸಂಕಷ್ಟದಲ್ಲಿದ್ದ ಬೆಳ್ತಂಗಡಿ ಯುವಕ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ್ದಾನೆ. ಹೆಚ್ಚು ಸಂಬಳ ನೀಡುವ ಉದ್ಯೋಗದ ಆಮಿಷವೊಡ್ಡಿ ಯುವಕನನ್ನು ಕತಾರ್ ಗೆ ಕರೆಸಿಕೊಳ್ಳಲಾಗಿತ್ತು.
ಬೆಳ್ತಂಗಡಿ ತಾಲೂಕಿನ ಕಿಲ್ಲೂರು ನಾಡದ ಅಬ್ದುಲ್ ಹಮೀದ್ ತಾಯ್ನಾಡಿಗೆ ಮರಳಿದ ಯುವಕ. ಕತಾರ್ ಕೆಸಿಎಫ್ ತಂಡದ ಸದಸ್ಯರು ಅಬ್ದುಲ್ ನನ್ನು ರಕ್ಷಿಸಿ ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸಿಕೊಟ್ಟಿದ್ದಾರೆ.

ಅಬ್ದುಲ್ ಹಮೀದ್ ಕತಾರ್ ನಲ್ಲಿ ಚಾಲಕನಾಗಿ ಕೆಲ ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅಲ್ಲಿನ ಪರಿಚಯದ ವ್ಯಕ್ತಿಯೋರ್ವ ಹೆಚ್ಚಿನ ವೇತನ ನೀಡುವ ಅಮಿಷವೊಡ್ಡಿ ಘನವಾಹನ ಚಾಲನೆ ಉದ್ಯೋಗಕ್ಕೆ ಕರೆಸಿಕೊಂಡಿದ್ದ.
ಆರಂಭದಲ್ಲಿ ಸುಲಭವಾಗಿದ್ದ ಕೆಲಸ ಬಳಿಕ 20 ಗಂಟೆಗಳಷ್ಟು ಕಾಲ ದುಡಿಯಬೇಕಾದ ಪರಿಸ್ಥಿತಿ ಎದುರಾಗಿತ್ತು. ಕಂಪೆನಿಯವರಲ್ಲಿ ಅಂಗಲಾಚಿದರೂ ಕೆಲಸದಿಂದ ಬಿಡುಗಡೆ ಮಾಡಲಿಲ್ಲ.ರಾಯಭಾರಿ ಕಚೇರಿಗೆ ಅಲೆದಾಡಿದರೂ ಪ್ರಯೋಜನವಾಗಲಿಲ್ಲ.
ಅಬ್ದುಲ್ ಹಮೀದ್ ಅವರ ಸಂಕಷ್ಟ ಕೆಸಿಎಫ್ ನಾಯಕರ ಗಮನಕ್ಕೆ ಬಂದಿತ್ತು. ತಕ್ಷಣ ಕಾರ್ಯ ಪ್ರವೃತ್ತರಾದ ಕೆಸಿಎಫ್ ತಂಡದ ಕಾರ್ಯದರ್ಶಿ ಅಬ್ದುಲ್ ರಹೀಮ್ ಮತ್ತು ಸಾಂತ್ವನ ವಿಭಾಗದ ನಾಯಕ ಅಬ್ದುಲ್ ರಝಾಕ್ ಮುಂಡ್ಕೂರು ಸೇರಿಕೊಂಡು ಫಾರೂಕ್ ಕೃಷ್ಣಾಪುರ ಮತ್ತು ಇಮ್ರಾನ್ ಕೂಳೂರು ಅವರ ಸಹಕಾರದೊಂದಿಗೆ ಅಬ್ದುಲ್ ಹಮೀದ್ ಅವರನ್ನು ತಾಯ್ನಾಡಿಗೆ ಕಳುಹಿಸಿಕೊಟ್ಟಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications