ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಹಿಂದುತ್ವವನ್ನೇ ಪ್ರಶ್ನಿಸಿದ ಬೆಳ್ತಂಗಡಿ ಬಿಜೆಪಿ ಶಾಸಕ: ವ್ಯಾಪಕ ಆಕ್ರೋಶ
ಮಂಗಳೂರು, ಮೇ, 24: ದಕ್ಷಿಣ ಕನ್ನಡದಲ್ಲಿ ಹಿಂದುತ್ವ ಮತ್ತು ಬಿಜೆಪಿ ನಡುವಿನ ತಿಕ್ಕಾಟ ಮತ್ತೊಂದು ಸ್ವರೂಪ ಪಡೆದಿದೆ. ಚುನಾವಣೆಯಲ್ಲಿ ಗೆದ್ದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಜಿಲ್ಲೆಯ ಪ್ರಬಲ ಮೂವರು ಹಿಂದೂ ಮುಖಂಡರ ವಿರುದ್ಧ ಮಾತನಾಡಿದ್ದಾರೆ. ಅರುಣ್ ಪುತ್ತಿಲ ಬಳಿಕ ಬಿಜೆಪಿ ನಾಯಕರು ಇತರ ನಾಯಕರನ್ನು ಟಾರ್ಗೆಟ್ ಮಾಡಿದ್ದು, ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಬಿಜೆಪಿ ನಡುವಿನ ಕಂದಕವನ್ನು ಜಾಸ್ತಿ ಮಾಡಿದೆ.
ಬೆಳ್ತಂಗಡಿಯಲ್ಲಿ ಕಾರ್ಯಕರ್ತರ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ್ದ ಶಾಸಕ ಹರೀಶ್ ಪೂಂಜಾ, ಜಿಲ್ಲೆಯ ಹಿರಿಯ ಹಿಂದೂ ಮುಖಂಡರಾದ ಸತ್ಯಜಿತ್ ಸುರತ್ಕಲ್, ಪ್ರವೀಣ್ ವಾಲ್ಕೆ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಅವರು ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಪ್ರಚಾರ ಮಾಡಿದ್ದಾರೆ. ನಾನು ಹಿಂದುತ್ವಕ್ಕಾಗಿ ಮಾಡಿದ ಅವಮಾನ ಏನು? ಹಾಗೆಯೆ ಭಜರಂಗದಳ ನಿಷೇಧ ಮಾಡಲು ಹೊರಟಿರುವ ನಿಮ್ಮ ಹಿಂದುತ್ವ ಯಾವುದು ಎಂದು ಹಿಂದೂ ಮುಖಂಡರನ್ನು ಪ್ರಶ್ನಿಸಿದ್ದರು.

ಹರೀಶ್ ಪೂಂಜಾ ಅವರ ಈ ಹಿಂದುತ್ವದ ಹೇಳಿಕೆಯೇ ಜಿಲ್ಲೆಯಲ್ಲಿ ವಿವಾದ ಸೃಷ್ಟಿಸಿದೆ. ಭಾಗಶಃ ಜೀವನ ಸವೆಸಿದ ಹಿಂದೂ ಮುಖಂಡರ ಹಿಂದುತ್ವದ ಬಗ್ಗೆ ಸಾರ್ವಜನಿಕವಾಗಿಯೇ ಪ್ರಶ್ನಿಸಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಅವರನ್ನು ಟಾರ್ಗೆಟ್ ಮಾಡಿದ ಬಿಜೆಪಿ ನಾಯಕರು ಈಗ ಇತರ ಹಿಂದೂ ಮುಖಂಡರನ್ನು ಗುರಿಯಾಗಿಸಿ ಸಾರ್ವಜನಿಕವಾಗಿ ನಿಂದಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಹರೀಶ್ ಪೂಂಜಾ ವಿರುದ್ಧ ಎಲ್ಲೆಡೆ ಆಕ್ರೋಶ
ಹರೀಶ್ ಪೂಂಜಾ ಹೇಳಿಕೆಗೆ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಹಿಂದುತ್ವನ್ನು ಬಳಸಿರುವ ಶಾಸಕ ಹರೀಶ್ ಪೂಂಜಾ ಅವರಿಂದ ಹಿಂದುತ್ವದ ಪಾಠವನ್ನು ಕೇಳುವ ಅವಶ್ಯಕತೆ ನಮಗಿಲ್ಲ. ನಿಸ್ವಾರ್ಥವಾಗಿ ಜೀವನ ಪರ್ಯಂತ ಹಿಂದುತ್ವದ ಸೇವೆ ಮಾಡಿದ್ದೇವೆ ಎಂದರು.
ಹಾಗೆಯೆ ಸಾವಿರಾರು ದಿನಗಳ ಕಾಲ ಕೋರ್ಟ್, ಪೊಲೀಸ್ ಸ್ಟೇಷನ್ ಅಂತಾ ಕಳೆದಿದ್ದೇನೆ. ಬಿಲ್ಲವ ಸಮಾಜದ ಸಂಘಟನೆಯ ರಾಜ್ಯಾಧ್ಯಕ್ಷನಾಗಿ ಬೆಳ್ತಂಗಡಿಗೆ ಬಂದಿದ್ದೇನೆಯೇ ಹೊರತು, ಯಾವುದೇ ರಾಜಕೀಯ ಅಭ್ಯರ್ಥಿಯ ಪ್ರಚಾರಕ್ಕೆ ಅಲ್ಲ. ಈ ಬಗ್ಗೆ ಎಲ್ಲಿ ಬೇಕದರೂ ಸ್ಪಷ್ಟನೆ ನೀಡುವುದಕ್ಕೆ ಸಿದ್ಧನಾಗಿದ್ದೇನೆ ಅಂತಾ ಸತ್ಯಜಿತ್ ಸುರತ್ಕಲ್ ಹರೀಶ್ ಪೂಂಜಾಗೆ ಸವಾಲೂ ಹಾಕಿದ್ದಾರೆ.
ಇನ್ನು ಹಿರಿಯ ಹಿಂದೂ ಮುಖಂಡ ಪ್ರವೀಣ್ ವಾಲ್ಕೆ ಕೂಡ ಹರೀಶ್ ಪೂಂಜಾ ಹೇಳಿಕೆಗೆ ಕೆಂಡಾಮಂಡಲವಾಗಿದ್ದಾರೆ. ನಮ್ಮ ಹೋರಾಟ ಜೀವನದ ಅನುಭವದಷ್ಟು ವಯಸ್ಸು ಹರೀಶ್ ಪೂಂಜಾಗೆ ಆಗಿಲ್ಲ. ಬೆಳ್ತಂಗಡಿಗೆ ಬಂದ ಸಂಧರ್ಭದಲ್ಲಿ ಕಾಂಗ್ರೆಸ್ನಲ್ಲಿರುವ ಹಿಂದೂ ಕಾರ್ಯಕರ್ತರ ಜೊತೆ ಅವರು ಕೇಳಿದ್ದಕ್ಕೆ ಫೋಟೋ ತೆಗೆದಿದ್ದೇನೆಯೇ ಹೊರತು ಯಾವುದೇ ಪ್ರಚಾರಕ್ಕೆ ಹೋಗಿಲ್ಲ. ಈ ಬಗ್ಗೆ ಪ್ರಮಾಣ ಮಾಡಲು ಬರಲಿ ಎಂದು ಸವಾಲೆಸಿದಿದ್ದಾರೆ.
ಚುನಾವಣೆಯ ಸಂಧರ್ಭದಲ್ಲಿ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರವಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪ್ರಚಾರ ಮಾಡಿದ್ದರು. ಈ ವೇಳೆ ಅರುಣ್ ಕುಮಾರ್ ಪುತ್ತಿಲ ಅವರ ಅಭಿಮಾನಿಗಳು ಪೂಂಜಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹಿಂದುತ್ವದ ಬಗ್ಗೆ ಮಾತನಾಡುವ ಹರೀಶ್ ಪೂಂಜಾ ಹಿಂದುತ್ವದ ಪರವಾಗಿರುವ ಪುತ್ತಿಲ ವಿರುದ್ಧವಾಗಿ ಪ್ರಚಾರ ಮಾಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮತ್ತೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications