ಬೆಳ್ತಂಗಡಿ: ಹೃದಯಾಘಾತದಿಂದ ನರ್ಸಿಂಗ್ ವಿದ್ಯಾರ್ಥಿನಿ ಸಾವು
ಮಂಗಳೂರು, ಆಗಸ್ಟ್, 14: ಹೃದಯಾಘಾತದಿಂದ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.
ಸುಮಾ (19) ಮೃತ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ. ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ವಿದ್ಯಾರ್ಥಿನಿ ಸುಮಾ ಅವರು ಅನಾರೋಗ್ಯದ ಹಿನ್ನೆಲೆ ಆಗಸ್ಟ್ 9ರಂದು ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದರು.

ಬಳಿಕ ಲೋ ಬಿಪಿ ಆಗಿ ಮತ್ತೆ ಆಗಸ್ಟ್ 11ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿದ್ದರು. ಆದರೆ ಆಗಸ್ಟ್ 13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಾಕಿಂಗ್ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು
ಶಾಲಾ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ಬುಧವಾರ ಬೆಳಗ್ಗೆ ನಡೆದಿತ್ತು.
ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟ್ನಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಫಿಲಿಶ್ (15) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಈಕೆ ಸಿಎಂಎಸ್ ಅನಾಥಾಲಯದಲ್ಲಿ ವಾಯುವಿಹಾರ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಳು.
ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ವೈದ್ಯರು ತಪಾಸಣೆಗೆ ಒಳಪಡಿಸಿದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದರು. ಇನ್ನು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಮೃತಳ ತಾಯಿ ದೂರು ಕೊಟ್ಟಿದ್ದರು.
ಮೃತ ವಿದ್ಯಾರ್ಥಿನಿ ಫಿಲಿಶ್(15) ಮೂಲತಃ ಬೆಂಗಳೂರಿನ ನಿವಾಸಿಯಾಗಿದ್ದು, ತಂದೆ ನಿಧನರಾದ ಬಳಿಕ ಕ್ರೈಸ್ತ ಮಿಷನರಿಯೊಂದು ವ್ಯಾಸಂಗಕ್ಕಾಗಿ ಪಟ್ಟಣದ ಸಿಎಂಎಸ್ ಅನಾಥಾಲಯಕ್ಕೆ ತಂದು ಬಿಟ್ಟಿದ್ದರು ಎಂದು ನಿಲಯ ಪಾಲಕರಾದ ಸೆಲ್ವರಾಜ್ ಮಾಹಿತಿ ನೀಡಿದ್ದರು.
ಬಾಲಕಿ ಆರೋಗ್ಯವಾಗಿದ್ದು ಧಿಡೀರ್ ಕುಸಿದು ಬಿದ್ದು ಹೃದಯಾಘಾತವಾಗಿರುವುದು ನಮಗೆಲ್ಲರಿಗೂ ಆಘಾತವಾಗಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ. ಮೃತ ಬಾಲಕಿಯ ಶವವನ್ನು ಪಟ್ಟಣದ ಶವಾಗಾರಕ್ಕೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಹಸ್ತಾಂತತರಿಸಲಾಗಿತ್ತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications