'ಕಿಸ್ ಆಫ್ ಲವ್', ಪ್ರಣವಾನಂದ ಶ್ರೀ ಎಚ್ಚರಿಕೆ
ಮಂಗಳೂರು, ನ.21 : 'ಕಿಸ್ ಆಫ್ ಲವ್'ನಲ್ಲಿ ಪಾಲ್ಗೊಳ್ಳುವವರು ಮಾನಸಿಕ ಅಸ್ವಸ್ಥರಿಗೆ, ಎಚ್ಐವಿ ಪೀಡಿತರಿಗೆ ಮುತ್ತು ಕೊಡಲಿ ಎಂದು ಭಾರತೀಯ ಕ್ರಾಂತಿ ಸೇನೆಯ ರಾಷ್ಟ್ರಾಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಸವಾಲು ಹಾಕಿದ್ದಾರೆ. 'ಕಿಸ್ ಆಫ್ ಲವ್'ನಲ್ಲಿ ಪಾಲ್ಗೊಳ್ಳುವವರ ಮೇಲೆ ದಾಳಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಪ್ರಣವಾನಂದ ಸ್ವಾಮೀಜಿಯವರು, 'ಕಿಸ್ ಆಫ್ ಲವ್'ನಲ್ಲಿ ಪಾಲ್ಗೊಳ್ಳುವವರ ವಿರುದ್ಧ ಪ್ರತಿಭಟನೆ ನಡೆಸಲು ಬೆಂಗಳೂರು ಚಲೋ ಹಮ್ಮಿಕೊಂಡಿದ್ದೇವೆ. ಅಂದು ನೂರಾರು ಕಾರ್ಯಕರ್ತರೊಂದಿಗೆ ಬೆಂಗಳೂರಿಗೆ ತೆರಳಿ 'ಕಿಸ್ ಆಫ್ ಲವ್'ನಲ್ಲಿ ಪಾಲ್ಗೊಳ್ಳುವವರ ಮೇಲೆ ದಾಳಿ ನಡೆಸಲಾಗುತ್ತದೆ ಎಂದು ಸ್ವಾಮೀಜಿ ಹೇಳಿದರು. [ಬಗೆಹರಿಯದ ಕಿಸ್ ಆಫ್ ಲವ್ ಆಯೋಜನೆ ಗೊಂದಲ]

ಬೆಂಗಳೂರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ 'ಕಿಸ್ ಆಫ್ ಲವ್' ವಿರೋಧಿಸುವವರು ಬರಬಹುದು. ಅವರಿಗೆ ವಾಹನ ಮತ್ತು ಊಟ ತಿಂಡಿಯ ವ್ಯವಸ್ಥೆಯನ್ನು ಮಾಡಿಕೊಡಲಾಗುತ್ತದೆ. 'ಕಿಸ್ ಆಫ್ ಲವ್' ವಿರೋಧಿಸುವ ಹಲವಾರು ಸಂಘಟನೆಗಳು ನಮ್ಮೊಂದಿಗೆ ಕೈ ಜೋಡಿಸಿವೆ ಎಂದು ಸ್ವಾಮೀಜಿ ತಿಳಿಸಿದರು. [ಕಿಸ್ ಆಫ್ ಲವ್ː ಬೆಂಗಳೂರು ವಿದ್ಯಾರ್ಥಿಗಳು ಏನಂತಾರೆ?]
'ಪ್ರತಿಭಟನೆ ಹೆಸರಿನಲ್ಲಿ ರಸ್ತೆಯಲ್ಲಿ ಮುತ್ತು ಕೊಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ಹೇಳಿದ ಸ್ವಾಮೀಜಿಗಳು, 'ಕಿಸ್ ಆಫ್ ಲವ್'ನಲ್ಲಿ ಪಾಲ್ಗೊಳ್ಳುವವರು ಮಾನಸಿಕ ಅಸ್ವಸ್ಥರಿಗೆ, ಎಚ್ಐವಿ ಪೀಡಿತರಿಗೆ ಮುತ್ತು ಕೊಡಲಿ' ಎಂದು ಸ್ವಾಮೀಜಿ ಸವಾಲು ಹಾಕಿದರು.
ಒಂದು ದಿನದ ನಿರಶನ : 'ಕಿಸ್ ಆಫ್ ಲವ್'ಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ನ.26ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಒಂದು ದಿನ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಎಂದು ಪ್ರಣವಾನಂದ ಸ್ವಾಮೀಜಿ ಘೋಷಿಸಿದರು.
ಶೆಟ್ಟರ್ ವಿರೋಧ : 'ಕಿಸ್ ಆಫ್ ಲವ್'ನಂತಹ ಆಚರಣೆಗೆ ಬಿಜೆಪಿಯಿಂದ ತೀವ್ರವಾದ ವಿರೋಧವಿದೆ. ಇಂತಹ ಕಾರ್ಯಕ್ರಮಗಳು ಎಲ್ಲಿಯೂ ನಡೆಯಬಾರದು. ಕಿಸ್ ಆಫ್ ಲವ್ ನಡೆಸದಂತೆ ರಾಜ್ಯ ಮುಖಂಡರ ಜೊತೆ ಚರ್ಚಿಸುವುದಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಂಗಳೂರಿನಲ್ಲಿ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications