ಸಂತ್ರಸ್ತರಿಗೆ ಪಿಗ್ಗಿ ಬ್ಯಾಂಕ್ ಮುಡುಪಿಟ್ಟ ಕಂದಮ್ಮಗಳು
ಮಂಗಳೂರು ಆಗಸ್ಟ್ 25: ಕೇರಳ ಹಾಗು ಕೊಡಗಿನಲ್ಲಿನಿರಂತರವಾಗಿ ಸುರಿದ ಮಳೆ ಅಪಾರ ನಷ್ಟವನ್ನು ಉಂಟು ಮಾಡಿದೆ. ಭೂ ಕುಸಿತ ಸೇರಿದಂತೆ ಸುರಿದ ಭಾರೀ ಮಳೆ ದುರಂತ ಪರಿಸ್ಥಿತಿಯನ್ನೇ ಸೃಷ್ಠಿಸಿದೆ. ಮಳೆಯ ತೀವ್ರತೆಗೆ ಕೊಡಗಿನಲ್ಲಿ ಭೂಮಿ ಕುಸಿಯುತ್ತಿದೆ. ಹಲವು ರಸ್ತೆಗಳು ಮುಚ್ಚಿ ಹೋಗಿವೆ , ಮನೆಗಳು ತರಗೆಲೆಗಳಂತೆ ಧರೆಗುರುಳಿವೆ.
ಕೇರಳ ಸೇರದಂತೆ ಕೊಡಗಿನಲ್ಲಿ ಸಾವಿರಾರು ಜನ ಮನೆ ಮಠ ಕಳೆದುಕೊಂಡು ಅಕ್ಷರಸಹ ದಾರಿಗೆ ಬಿದ್ದಿದ್ದಾರೆ. ಸಂಭವಿಸಿರುವ ದುರಂತಕ್ಕೆ ಕೊಡಗು ಹಾಗು ಕೇರಳದ 13 ಜಿಲ್ಲೆಗಳು ನಲುಗಿ ಹೋಗಿದೆ.
ಭಾರೀ ಮಳೆ ಹಾಗು ಬೂ ಕುಸಿತ ದಿಂದಾದ ನಷ್ಟಗಳ ಬಗ್ಗೆ ಲೆಕ್ಕಾಚಾರ ಆರಂಭವಾಗಿದೆ. ಕೊಡಗು ಹಾಗು ಕೇರಳದ ಸಂತ್ರಸ್ತರಿಗಾಗಿ ದೇಶದ ಮೂಲೆ ಮೂಲೆ ಯಿಂದ ಸಹಾಯ ಹಸ್ತ ಹರಿದು ಬರುತ್ತಿದೆ. ಸ್ವಯಂ ಸೇವಾ ಸಂಸ್ಥೆಗಳು ,ಸಂಘಟನೆಗಳು ಟ್ರಸ್ಟ್ ಗಳು ನೆರೆ ಸಂತ್ರಸ್ತರ ನೆರವಿಗೆ ದಾವಿಸುತ್ತಿವೆ.

ಎಲ್ಲೆಡೆಯಿಂದ ಸಹಾಯದ ಮಹಾಪೂರವೇ ಹರಿದು ಬರುತ್ತಿದೆ. ಈ ಮಧ್ಯೆ ಇಬ್ಬರು ಮುದ್ದು ಕಂದಮ್ಮಗಳ ಹೃದಯ ಈ ನೆರೆ ಸಂಗ್ರಸ್ತರಿಗಾಗಿ ಮಿಡಿದಿದೆ. ಈ ಮುದ್ದು ಕಂದಮ್ಮಗಳು ತಮ್ಮ ದೇಣಿಗೆ ಯನ್ನು ನೆರೆ ಸಂತೃಸ್ತರಿಗೆ ಅರ್ಪಿಸಿದ್ದಾರೆ. ಈ ಕಂದಮ್ಮಗಳ ನೆರವು ಸಾಮಜಿಕ ಜಾಲತಾಣಗಳಲ್ಲಿ ಬಾರಿ ಪ್ರಶಂಸೆಗೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ನೆಲೆಸಿರುವ , ಕರಾವಳಿ ಮೂಲದ ಇಬ್ಬರು ಎಲ್ ಕೆ ಜಿ ಓದುತ್ತಿರುವ ಕಂದಮ್ಮಗಳು ತಮ್ಮ ಪಿಗ್ಗಿ ಬ್ಯಾಂಕ್ ನಲ್ಲಿ ಕೂಡಿಟ್ಟ ಹಣವನ್ನು ನೆರೆ ಪೀಡಿತರಿಗಾಗಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸಿವಿಲ್ ಎಂಜೀನಿಯರ್ ಅಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿಯ ಪ್ರಶಾಂತ್ ರೈ ಯವರ ಪುತ್ರಿ ಪ್ರಾಪ್ತಿ ರೈ ಹಾಗೂ ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿ ಕಾರ್ಕಳ ಮೂಲದ ಗೋಪಾಲ ಪೂಜಾರಿಯವರ ಮಗಳು ಜೀವಿತಾ ತಾವು ಉಳಿಸಿದ ಪಿಗ್ಗಿ ಬ್ಯಾಂಕಿನ ಹಣವನ್ನು ನೆರೆ ಸಂತ್ರಸ್ತರಿಗೆ ಕೊಡುವ ಮೂಲಕ ಕೇರಳ ಹಾಗು ಕೊಡಗಿನ ದುರಂತಕ್ಕೆ ಮಿಡಿದಿದ್ದಾರೆ.

ಅಪ್ಪ, ಅಮ್ಮ, ಅಕ್ಕ,ಅಜ್ಜಾ, ಅಜ್ಜಿ , ಅಣ್ಣ, ಮಾಮ, ಹೀಗೆ ಪ್ರೀತಿಯಿಂದ ನೀಡಿದ ಚಿಕ್ಕ ಚಿಕ್ಕ ಮೊತ್ತವನ್ನು ಪಿಗ್ಗಿ ಬ್ಯಾಂಕ್ ನಲ್ಲಿ ಸಂಗ್ರಹಿಸಿದ್ದ ಈ ಪೋರಿಯರು ಹಣವನ್ನು ನೆರೆ ಸಂತ್ರಸ್ತರ ಪರವಾಗಿ ಧನ ಸಂಗ್ರಹ ಕ್ಕೆ ನೀಡಿದ್ದಾರೆ. ಈ ಮುದ್ದು ಮರಿಗಳ ಈ ಉದಾರತೆ ಇತರರಿಗೂ ಮಾದರಿ ಯಾಗಿದ್ದು ಸಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆ ವ್ಯಕ್ತ ವಾಗಿದೆ.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications