ಬೆಂ-ಮಂಗಳೂರು ರೈಲು ರದ್ದು; ಜನರ ಆಕ್ರೋಶ, ಇಲಾಖೆಗೆ ಪತ್ರ
ಮಂಗಳೂರು, ಅಕ್ಟೋಬರ್ 07 : ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು ಸೆಂಟ್ರಲ್ ನಡುವೆ ಸಂಚಾರ ನಡೆಸುತ್ತಿದ್ದ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರ ರದ್ದು ಮಾಡುವುದಾಗಿ ಘೋಷಣೆ ಮಾಡಿದೆ. ಕರಾವಳಿ ಭಾಗದ ಜನರು ಈ ತೀರ್ಮಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರಯಾಣಿಕರ ಕೊರತೆ ಹಿನ್ನಲೆಯಲ್ಲಿ ವಿಶೇಷ ಎಕ್ಸ್ಪ್ರೆಸ್ ರೈಲನ್ನು ರದ್ದು ಮಾಡುವುದಾಗಿ ನೈಋತ್ಯ ರೈಲ್ವೆ ಘೋಷಣೆ ಮಾಡಿದೆ. ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಡುವೆ ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚಾರ ನಡೆಸುತ್ತಿತ್ತು.
ಬೆಂ-ಮಂಗಳೂರು ರೈಲು ಸಂಚಾರದಲ್ಲಿ ಭಾರಿ ಬದಲಾವಣೆ
ಅಕ್ಟೋಬರ್ 7ರಿಂದ ಬೆಂಗಳೂರು-ಮಂಗಳೂರು ವಿಶೇಷ ರೈಲು, ಮಂಗಳೂರು ಸೆಂಟ್ರಲ್-ಬೆಂಗಳೂರು ನಡುವಿನ ಸಂಚಾರ ಅಕ್ಟೋಬರ್ 11ರಿಂದ ಸ್ಥಗಿತಗೊಳ್ಳಲಿದೆ ಎಂದು ರೈಲ್ವೆ ಹೇಳಿತ್ತು. ಇದಕ್ಕೆ ಕರಾವಳಿ ಭಾಗದ ಜನರು ವಿರೋಧ ವ್ಯಕ್ತಪಡಿಸಿದ್ದಾರೆ.
ಮುಂಗಡ ಟಿಕೆಟ್ ಬುಕ್ಕಿಂಗ್; ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ
ಕೋವಿಡ್ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ ಎಂದು ರೈಲುಗಳ ಸಂಚಾರ ರದ್ದುಗೊಳಿಸುವುದು ಸರಿಯಲ್ಲ. ಇದರಿಂದಾಗಿ ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಗಲಿದೆ ಎಂದು ಜನರು ಹೇಳಿದ್ದಾರೆ. ಆದೇಶ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ
ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಸಹ ಈ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. "ಕೇಂದ್ರ ರೈಲ್ವೆ ಸಚಿವರಿಗೆ ಈ ಕುರಿತು ಪತ್ರ ಬರೆದಿದ್ದೇನೆ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದೇನೆ" ಎಂದು ಹೇಳಿದ್ದಾರೆ.
ಮಂಗಳೂರು ಸೆಂಟ್ರಲ್-ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲನ್ನು ರದ್ದು ಮಾಡಾಗಿದೆ. ಕೆಎಸ್ಆರ್ ಬೆಂಗಳೂರು-ಮಂಗಳೂರು ಸೆಂಟ್ರಲ್ ನಡುವೆ ವಾರಕ್ಕೆ ಮೂರು ಬಾರಿ (ಮೈಸೂರು) ಮಾರ್ಗವಾಗಿ ಸಂಚಾರ ನಡೆಸುತ್ತಿದ್ದ ರೈಲಿನ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ.
ಬದಲಾದ ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 7ರಿಂದ ಕೆಎಸ್ಆರ್ ಬೆಂಗಳೂರು-ಮಂಗಳೂರು ಸೆಂಟ್ರಲ್ ರೈಲು ನಂಬರ್ 06517 ಬುಧವಾರ, ಶುಕ್ರವಾರ ಮತ್ತು ಭಾನುವಾರ ಬೆಂಗಳೂರು ನಗರದಿಂದ ಸಂಚಾರ ನಡೆಸಲಿದೆ.
ರೈಲು ನಂಬರ್ 06518 ಮಂಗಳೂರು ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ವಾರದಲ್ಲಿ ಮೂರು ದಿನ ಗುರುವಾರ, ಶನಿವಾರ ಮತ್ತು ಸೋಮವಾರ ಮಂಗಳೂರಿನಿಂದ ಸಂಚಾರ ನಡೆಸಲಿದೆ.
Recommended Video
ರಾಜಧಾನಿ ಬೆಂಗಳೂರು-ಮಂಗಳೂರು ನಡುವಿನ ರಸ್ತೆ ಸಂಚಾರಕ್ಕೆ ಹಲವ ತಾಸುಗಳ ಕಾಲ ಪ್ರಯಾಣ ಮಾಡಬೇಕು. ಆದ್ದರಿಂದ, ಜನರು ರೈಲನ್ನು ಅವಲಂಬಿಸಿದ್ದರು. ಆದರೆ, ಪ್ರಯಾಣಿಕರ ಕೊರತೆಯ ನೆಪ ಹೇಳಿ ರೈಲ್ವೆ ರೈಲು ಸಂಚಾರ ರದ್ದು ಮಾಡುತ್ತಿದೆ.